ಬೆಳಗಾವಿ ಮಹಿಳೆಯ ವಂಚಿಸಿದ ರಾಯಚೂರು ಜೋತಿಷಿ ಬೆಂಗಳೂರಿನಲ್ಲಿ ಸೆರೆ

Published : Jul 22, 2019, 12:14 AM ISTUpdated : Jul 22, 2019, 04:19 PM IST
ಬೆಳಗಾವಿ ಮಹಿಳೆಯ ವಂಚಿಸಿದ ರಾಯಚೂರು ಜೋತಿಷಿ ಬೆಂಗಳೂರಿನಲ್ಲಿ ಸೆರೆ

ಸಾರಾಂಶ

ಗಂಡನಿಂದ ದೂರವಾದ ಮಹಿಳೆಯಿಂದ ಹಣ ದೋಷುತ್ತಿದ್ದ ಕಪಟ ಜ್ಯೋತಿಷಿ ಅಂತಿಮವಾಗಿ ಪೊಲೀಸರ ಬಲೆಗೆ ಬಿದ್ದಿದ್ದಾನೆ.ಬೆಳಗಾವಿ ಮಹಿಳೆಗೆ ಮೋಸ ಮಾಡಿದ್ದ ರಾಯಚೂರಿನ ಜ್ಯೋತಿಷಿ ಬೆಂಗಳೂರು ಪೊಲೀಸರ ಬಲೆಗೆ ಬಿದ್ದಿದ್ದಾನೆ.

ಬೆಳಗಾವಿ[ಜು. 21] ದೂರಾದ ಪತಿಯ ಮನಸ್ಸನ್ನು ಬದಲಿಸುತ್ತೆನೆ ಎಂದು ಹೇಳಿ ಮಹಿಳೆಯಿಂದ ಹಣಪಡೆದಿದ್ದ ಡೋಂಗಿ ಜ್ಯೋತಿಷಿಯನ್ನು ಬೆಂಗಳೂರಿನ ಸುಂಕದ ಕಟ್ಟೆಯಲ್ಲಿ ಬಂಧಿಸಿ, ಆತನಿಂದ 1.30ಲಕ್ಷ ರೂ. ನಗದು ವಶಪಡಿಸಿಕೊಳ್ಳಲಾಗಿದೆ.

ರಾಯಚೂರು ಜಿಲ್ಲೆಯ ಹಟ್ಟಿ ಗ್ರಾಮದ ವಿಜಯಕುಮಾರ ರಾಮಣ್ಣಾ ಸುಗತೆ (40) ಬಂಧಿತ ಡೊಂಗಿ ಜ್ಯೋತಿಷಿ. ದಿನಪತ್ರಿಕೆಗಳಲ್ಲಿ ಬರುವ ಕರ ಪತ್ರದಲ್ಲಿ ಮುದ್ರಿತ ಜೋತಿಷ್ಯನ್ನು ನಂಬಿದ ಬೆಳಗಾವಿ ನಗರದ ಗೃಹಣಿಯೊಬ್ಬರು ಆ ಜೋತಿಷ್ಯಿಯ ಮುಂದೆ ತನಗಾದ ನೋವು ತೋಡಿಕೊಂಡಿದ್ದರು. ಪತಿ ತನ್ನಿಂದ ದೂರಾದ ಬಗ್ಗೆ ತಿಳಿಸಿದ್ದರು.

ಇದನ್ನೇ ಬಂಡವಾಳವಾಗಿಸಿಕೊಂಡ ಜ್ಯೋತಿಷಿ ತನ್ನನ್ನು ಚಾಮರಾಜ ನಗರ ಜಿಲ್ಲೆಯ ಕೊಳ್ಳೇಗಾಲದ ಶ್ರೀ ಸಾಯಿ ದುರ್ಗಾದೇವಿ ಜ್ಯೋತಿಷ್ಯಂ ಪಂಡಿತ ವಿ.ಆರ್. ಗುರೂಜಿ ಎಂದು ಸುಳ್ಳು ವಿವರ ನೀಡಿ, ನೊಂದ ಮಹಿಳೆಯಿಂದ ಪೂಜೆ ಇತ್ಯಾದಿಗಳಿಗಾಗಿ ಹಂತ ಹಂತವಾಗಿ ಸುಮಾರು 2.60 ಲಕ್ಷ ರೂ. ಹಣವನ್ನು ಫೋನ್ ಮುಖಾಂತರ ತಮ್ಮ ಬ್ಯಾಂಕ್ ಖಾತೆಗೆ ಹಾಕಿಸಿಕೊಂಡು ಅವಳಿಗೆ ಸುಳ್ಳುಗಳನ್ನು ಹೇಳುತ್ತ ಮೋಸ ಮಾಡುತ್ತಿದ್ದ. ಈ ಬಗ್ಗೆ ಅನುಮಾನಗೊಂಡ ಮಹಿಳೆ ನಗರದ‌ ಎಪಿಎಂಸಿ ಪೊಲೀಸ ಠಾಣೆಯಲ್ಲಿ ದೂರು ನೀಡಿದ್ದರು. ಇದೀಗ ಪೊಲೀಸರ ಬಲೆಗೆ ಬಿದ್ದಿದ್ದಾನೆ.

PREV
click me!

Recommended Stories

ಬೆಂಗಳೂರಲ್ಲಿ ಕಬ್ಬನ್‌, ಲಾಲ್‌ಬಾಗ್‌ ರೀತಿಯಲ್ಲಿ ಇನ್ನೊಂದು ದೊಡ್ಡ ಪಾರ್ಕ್‌ ನಿರ್ಮಾಣ
Ballari: ನನ್ನಿಂದ ಜನರಿಗೆ ತೊಂದರೆಯಾಗಿದ್ದರೆ ಕ್ಷಮೆಯಾಚಿಸುತ್ತೇನೆ: ಶಾಸಕ ನಾರಾ ಭರತ್ ರೆಡ್ಡಿ