ಚಿಕ್ಕಮಗಳೂರಿನಲ್ಲಿ ಭತ್ತ ಬೆಳೆಯೋ ಸ್ಪರ್ಧೆ: ಅರ್ಜಿ ಆಹ್ವಾನ

Published : Jul 28, 2019, 12:45 PM ISTUpdated : Jul 28, 2019, 12:47 PM IST
ಚಿಕ್ಕಮಗಳೂರಿನಲ್ಲಿ ಭತ್ತ ಬೆಳೆಯೋ ಸ್ಪರ್ಧೆ: ಅರ್ಜಿ ಆಹ್ವಾನ

ಸಾರಾಂಶ

ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ ರೈತ ಸಂಪರ್ಕ ಕೇಂದ್ರ ಮುಂಗಾರಿನಲ್ಲಿ ಭತ್ತದ ಬೆಳೆ ಸ್ಪರ್ಧೆಗೆ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದ್ದು ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.

ಚಿಕ್ಕಮಗಳೂರು(ಜು.27): ನರಸಿಂಹರಾಜಪುರ ಕೃಷಿ ವಲಯದ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ ಪ್ರತಿ ವರ್ಷದಂತೆ ಈ ವರ್ಷವೂ ಮುಂಗಾರಿನಲ್ಲಿ ಅರ್ಹ ರೈತರಿಂದ ಭತ್ತದ ಬೆಳೆ ಸ್ಪರ್ಧೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ರೈತ ಸಂಪರ್ಕ ಕೇಂದ್ರ ತಿಳಿಸಿದೆ.

ಕನಿಷ್ಠ 1 ಎಕರೆ ಪ್ರದೇಶದಲ್ಲಿ ಯಾವುದಾದರೂ ಒಂದೇ ತಳಿಯ ಭತ್ತವನ್ನು ಬೆಳೆದ ರೈತರು ಆ.31ರೊಳಗೆ ಸ್ಪರ್ಧೆಗೆ ಅರ್ಜಿಗಳನ್ನು ಸಲ್ಲಿಸಬಹುದು. ಸ್ಪರ್ಧೆಯಲ್ಲಿ ಭಾಗವಹಿಸುವ ರೈತರು ತಮ್ಮ ಜಮೀನಿನ 1 ಎಕರೆ ಭತ್ತದ ಪಹಣಿಯೊಂದಿಗೆ ಪ್ರವೇಶ ಶುಲ್ಕ ಪಾವತಿಸಿ ಹೆಸರು ನೋಂದಾಯಿಸಿಕೊಳ್ಳಬಹುದು. ನಿಗದಿತ ಅರ್ಜಿ ನಮೂನೆಗಳು ರೈತ ಸಂಪರ್ಕ ಕೇಂದ್ರದಲ್ಲಿ ಲಭ್ಯವಿದೆ.

ಹಾಸನ: ತುಂಬಿ ಹರಿದ ಹೇಮೆ, ಕೃಷಿಕರಲ್ಲಿ ಉತ್ಸಾಹ

ರಾಜ್ಯ/ ಜಿಲ್ಲಾ/ ತಾಲೂಕು ಮಟ್ಟಕ್ಕೆ ಪ್ರತ್ಯೇಕ ಅರ್ಜಿ ಸಲ್ಲಿಸುವಂತಿಲ್ಲ. ಆದ್ದರಿಂದ ಅರ್ಜಿ ಶುಲ್ಕ ಪ.ಜಾ/ ಪ.ಪಂ. ವರ್ಗದವರಿಗೆ .25, ಸಾಮಾನ್ಯ ವರ್ಗಕ್ಕೆ .100 ಇದೆ. ಹೆಚ್ಚಿನ ಮಾಹಿತಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಸಂಪರ್ಕಿಸಬಹುದು.

ಕರ್ನಾಟಕ ರಾಜಕೀಯದ ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

PREV
click me!

Recommended Stories

ಇದೇ ಮೊದಲ ಬಾರಿಗೆ ಸಕಾಲದಲ್ಲಿ ಬೆಂ. ದಕ್ಷಿಣ ಹೊಸ ಸಾಧನೆ, ಅಗ್ರ ಮೂರನೇ ಸ್ಥಾನ, ಫಸ್ಟ್ ಪ್ಲೇಸ್ ಯಾವ ಜಿಲ್ಲೆಗೆ?
Ballari Banner row: ರಾಜ್ಯ ಸರ್ಕಾರಕ್ಕೆ ಕಾನೂನು ಕಾಪಾಡಲು ಸಾಧ್ಯವಾಗದಿದ್ರೆ, ಕೇಂದ್ರ ಮುಂದಿನ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತೆ: ಪ್ರಲ್ಹಾದ್ ಜೋಶಿ ಎಚ್ಚರಿಕೆ