
ಬೆಂಗಳೂರು: ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕು ವ್ಯಾಪ್ತಿಯ ಎಂ. ಸತ್ಯವರ ಗ್ರಾಮದ ಸಮೀಪ ಇಂದು ಶುಕ್ರವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತ ಸಂಭವಿಸಿದ ಭೀಕರ ಅಪಘಾತದಲ್ಲಿ ಏಳು ಮಂದಿ ಸ್ಥಳದಲ್ಲಿಯೇ ಮೃತಪಟ್ಟಿರುವ ದಾರುಣ ಘಟನೆ ನಡೆದಿದ್ದು, ಮೃತರ ಗುರುತು ಪತ್ತೆಯಾಗಿದೆ.
ಹೊಸಕೋಟೆ–ದಾಬಸ್ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ಯಾಂಟರ್ ವಾಹನ, ಬೈಕ್ ಹಾಗೂ ಎಕ್ಸ್ಯುವಿ (XUV) ಕಾರಿನ ನಡುವೆ ಸರಣಿ ಡಿಕ್ಕಿ ಸಂಭವಿಸಿದ್ದು, ಈ ಭೀಕರ ದುರ್ಘಟನೆ ನಡೆದಿದೆ. ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ 6 ಮಂದಿ ಹಾಗೂ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಅಪಘಾತದ ಮಾಹಿತಿ ತಿಳಿದ ಕೂಡಲೇ ಸ್ಥಳೀಯರು ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಆದರೆ, ಕಾರಿನಲ್ಲಿದ್ದವರು ಮತ್ತು ಬೈಕ್ ಸವಾರರು ಗಂಭೀರ ಗಾಯಗಳಿಂದಾಗಿ ಸ್ಥಳದಲ್ಲೇ ಪ್ರಾಣಪಕ್ಷಿ ಹಾರಿ ಹೋಗಿತ್ತು.
ಅಪಘಾತಕ್ಕೀಡಾದ ಎಕ್ಸ್ಯುವಿ ಕಾರು ಅಯನ್ ಅಲಿ ಎಂಬ ಯುವಕನಿಗೆ ಸೇರಿದೆ ಎಂಬುದು ತನಿಖೆಯಿಂದ ತಿಳಿದುಬಂದಿದೆ. ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಮೃತರ ಕುಟುಂಬಸ್ಥರು ಸ್ಥಳಕ್ಕೆ ಆಗಮಿಸಿ ಆಕ್ರಂದನ ಮುಗಿಲು ಮುಟ್ಟಿದೆ. ಯುವ ವಯಸ್ಸಿನ ವಿದ್ಯಾರ್ಥಿಗಳ ಸಾವಿಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಘಾತ ಮತ್ತು ದುಃಖ ವ್ಯಕ್ತವಾಗಿದೆ.