ಕನಕಪುರ: ಕುರಿ ತೊಳೆಯಲು ಹೋಗಿ ಕೆರೆಯಲ್ಲಿ ಮುಳುಗಿ ತಂದೆ-ಮಗ ಸಾವು

By Kannadaprabha NewsFirst Published Jan 6, 2024, 10:00 PM IST
Highlights

ರಾಜು, ಪ್ರಸನ್ನ ಮೃತ ದುರ್ದೈವಿಗಳು. ಇವರಿಬ್ಬರು ಕುರುಬರಹಳ್ಳಿ ಗ್ರಾಮದ ಬಳಿಯ ಕೆರೆಯಲ್ಲಿ ಸಂಜೆ ಕುರಿಯ ಮೈತೊಳೆಯಲು ಹೋಗಿದ್ದಾರೆ. ಈ ವೇಳೆ ರಾಜು ಕಾಲು ಜಾರಿ ಕೆರೆಗೆ ಬಿದ್ದಿದ್ದಾರೆ. ತಂದೆಯನ್ನು ಕಾಪಾಡಲು ಹೋದ ಮಗ ಸಹ ನೀರು ಪಾಲಾಗಿದ್ದಾನೆ.

ಕನಕಪುರ(ಜ.06):  ಕುರಿ ತೊಳೆಯಲು ಹೋಗಿ ತಂದೆ-ಮಗ ಕೆರೆಯಲ್ಲಿ ಮುಳುಗಿ ಸಾವನ್ನಪಿರುವ ಘಟನೆ ತಾಲೂಕಿನ ಕುರುಬರಹಳ್ಳಿ ಗ್ರಾಮದಲ್ಲಿ ನಡೆದಿದೆ.

ರಾಜು(50), ಪ್ರಸನ್ನ(22) ಮೃತ ದುರ್ದೈವಿಗಳು. ಇವರಿಬ್ಬರು ಕುರುಬರಹಳ್ಳಿ ಗ್ರಾಮದ ಬಳಿಯ ಕೆರೆಯಲ್ಲಿ ಸಂಜೆ ಕುರಿಯ ಮೈತೊಳೆಯಲು ಹೋಗಿದ್ದಾರೆ. ಈ ವೇಳೆ ರಾಜು ಕಾಲು ಜಾರಿ ಕೆರೆಗೆ ಬಿದ್ದಿದ್ದಾರೆ. ತಂದೆಯನ್ನು ಕಾಪಾಡಲು ಹೋದ ಮಗ ಸಹ ನೀರು ಪಾಲಾಗಿದ್ದಾನೆ. ಅಪ್ಪ ಮಗ ಇಬ್ಬರು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಇಬ್ಬರನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

ಶ್ರೀಕಾಂತ್ ಪೂಜಾರಿ ಒಬ್ಬನೇನ ಹಿಂದೂ?: ಸಚಿವ ಪರಮೇಶ್ವರ್

ವಿಚಾರ ತಿಳಿದು ಸ್ಥಳಕ್ಕಾಗಮಿಸಿದ ಸಾತನೂರು ಠಾಣಾ ಪೊಲೀಸರು ಅಗ್ನಿಶಾಮಕ ಸಿಬ್ಬಂದಿ ನೆರವಿನಿಂದ ಇಬ್ಬರ ಮೃತ ದೇಹವನ್ನು ಹೊರ ತೆಗೆದು ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮೃತ ದೇಹವನ್ನು ಕುಟುಂಬದವರಿಗೆ ಹಸ್ತಾಂತರಿಸಿದ್ದಾರೆ.

click me!