ಮಾಜಿ ಸಂಸದ ಪ್ರತಾಪ್ ಸಿಂಹ ಮೇಲೆ ಮತ್ತೊಂದು FIR: ಟಿ.ನರಸೀಪುರದಲ್ಲಿ ಪ್ರಚೋದನಾಕಾರಿ ಭಾಷಣ ಆರೋಪ

Published : Sep 20, 2026, 12:22 PM IST
Pratap Simha

ಸಾರಾಂಶ

ಟಿ.ನರಸೀಪುರದಲ್ಲಿ ನಡೆದ ಶೋಭಾ ಯಾತ್ರೆ ವೇಳೆ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದ ಮೇಲೆ ಮಾಜಿ ಸಂಸದ ಪ್ರತಾಪ್ ಸಿಂಹ ಹಾಗೂ ಇತರರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಜಾತಿಗಳ ನಡುವೆ ದ್ವೇಷ ಬಿತ್ತುವುದು, ಧಾರ್ಮಿಕ ನಂಬಿಕೆಗೆ ಅವಮಾನ ಮತ್ತು ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪಗಳಡಿ ಬಿಎನ್‌ಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.

ಮೈಸೂರು/ಟಿ.ನರಸೀಪುರ (ಸೆ.20): ಟಿ.ನರಸೀಪುರ ಪಟ್ಟಣದಲ್ಲಿ ಇತ್ತೀಚೆಗೆ ನಡೆದ ಶೋಭಾ ಯಾತ್ರೆ ವೇಳೆ ಪ್ರಚೋದನಾಕಾರಿ ಭಾಷಣ ಮಾಡಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಮಾಜಿ ಸಂಸದ ಪ್ರತಾಪ್ ಸಿಂಹ ಹಾಗೂ ಇತರರ ವಿರುದ್ಧ ಟಿ. ನರಸೀಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ (FIR) ದಾಖಲಾಗಿದೆ.

ಶೋಭಾ ಯಾತ್ರೆ ಸಂದರ್ಭದಲ್ಲಿ ವಿವಿಧ ಗುಂಪುಗಳು ಹಾಗೂ ಜಾತಿಗಳ ನಡುವೆ ದ್ವೇಷವನ್ನು ಉತ್ತೇಜಿಸುವ ರೀತಿಯಲ್ಲಿ ಮಾತನಾಡಿದ್ದಾರೆ ಮತ್ತು ಧಾರ್ಮಿಕ ನಂಬಿಕೆಗಳಿಗೆ ಅವಮಾನ ಉಂಟುಮಾಡಿದ್ದಾರೆ ಎಂಬ ಗಂಭೀರ ಆರೋಪದ ಮೇಲೆ ಈ ಪ್ರಕರಣ ದಾಖಲಿಸಲಾಗಿದೆ.

ಬಿಎನ್‌ಎಸ್ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ:

ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅದರಂತೆ ಸೆಕ್ಷನ್ 132, 191, 194, 196(1)(a)(b), 299, 353(1)(b)(c) ಹಾಗೂ ಸೆಕ್ಷನ್ 190ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಪ್ರಮುಖ ಆರೋಪಗಳು:

  • ಸಾರ್ವಜನಿಕ ಸೇವಕರು ಹಾಗೂ ಪೊಲೀಸರು ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ.
  • ವಿವಿಧ ಗುಂಪುಗಳು ಮತ್ತು ಜಾತಿಗಳ ನಡುವೆ ವೈಮನಸ್ಸು ಹಾಗೂ ದ್ವೇಷ ಭಾವನೆಯನ್ನು ಉತ್ತೇಜಿಸುವುದು.
  • ಧಾರ್ಮಿಕ ನಂಬಿಕೆಗಳಿಗೆ ಧಕ್ಕೆ ತರುವಂತಹ ಪ್ರಚೋದನಕಾರಿ ಭಾಷಣ ನೀಡುವುದು.
  • ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ಹಾಗೂ ಶಾಂತಿ ಕದಡಲು ಯತ್ನಿಸಿರುವ ಆರೋಪದಡಿ ಈ ಕಾನೂನು ಕ್ರಮ ಕೈಗೊಳ್ಳಲಾಗಿದೆ.

PREV
Read more Articles on
click me!

Recommended Stories

'ಕೆಲಸ ಮಾಡಿಕೊಟ್ಟ ಅಧಿಕಾರಿಗಳಿಗೆ ಗೌರವಯುತವಾಗಿ ಕೊಡೋದು ಧರ್ಮ': ಲಂಚ ಕೊಡಿ ಅಂದ್ರಾ ಸಚಿವ ಶಿವಲಿಂಗೇಗೌಡ?
ಎಂಎಲ್‌ಸಿ ಸೂರಜ್ ರೇವಣ್ಣ ಪ್ರಕರಣ: ಸಾಕ್ಷ್ಯಗಳ ಕೊರತೆ ಹಿನ್ನೆಲೆ ಎರಡನೇ ಬಾರಿಗೆ 'ಬಿ ರಿಪೋರ್ಟ್' ಸಲ್ಲಿಸಿದ ಸಿಐಡಿ