ಮುಂಡಗೋಡ ಹೊರವಲಯದ ಅರಣ್ಯಕ್ಕೆ ಬೆಂಕಿ

Published : Feb 15, 2021, 09:52 AM IST
ಮುಂಡಗೋಡ ಹೊರವಲಯದ ಅರಣ್ಯಕ್ಕೆ ಬೆಂಕಿ

ಸಾರಾಂಶ

ಕಸಕ್ಕೆ ಹಚ್ಚಿದ ಬೆಂಕಿ ಅರಣ್ಯ ಪ್ರದೇಶಕ್ಕೆ ಹೊತ್ತಿಕೊಂಡಿದ್ದು, ಸಾಕಷ್ಟು ಗಿಡಗಳಿಗೆ ಹಾನಿ| ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಪಟ್ಟಣ| ಬೆಂಕಿ ನಂದಿಸಿದ ಅಗ್ನಿಶಾಮಕ ದಳ ಸಿಬ್ಬಂದಿ| 

ಮುಂಡಗೋಡ(ಫೆ.15): ಪಟ್ಟಣದ ಹೊರ ವಲಯದ ಅರಣ್ಯ ಪ್ರದೇಶದಲ್ಲಿ ಗುರುವಾರ ಸಂಜೆ ಬೆಂಕಿ ಕಾಣಿಸಿಕೊಂಡಿದ್ದು, ಅಪಾರ ಪ್ರಮಾಣದ ಅರಣ್ಯ ಪ್ರದೇಶಕ್ಕೆ ಹಾನಿ ಸಂಭವಿಸಿದೆ.

ಮುಂಡಗೋಡ ಅರಣ್ಯ ಸರ್ವೇ ನಂ 186ರಲ್ಲಿ ಕಸಕ್ಕೆ ಹಚ್ಚಿದ ಬೆಂಕಿ ಅರಣ್ಯ ಪ್ರದೇಶಕ್ಕೆ ಹೊತ್ತಿಕೊಂಡಿದ್ದು, ಸಾಕಷ್ಟು ಗಿಡಗಳಿಗೆ ಹಾನಿಯುಂಟಾಗಿದೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಮುಂಡಗೋಡ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದು, ಮುಂದಾಗಬಹುದಾದ ಮತ್ತಷ್ಟು ಅನಾಹುತ ತಪ್ಪಿಸಿದ್ದಾರೆ. 

ಅಂಕೋಲಾ: ಬೈಕ್‌ ಅಪಘಾತ-ತಾಯಿ, ಮಗ ಸ್ಥಳದಲ್ಲೇ ಸಾವು

ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿ ನಾರಾಯಣ ತಳೇಕರ, ಸಪ್ನಿಲ್‌ ಪೆಡ್ನೇಕರ, ಅಡಿವೆಪ್ಪ ಕುರುವಿನಕೊಪ್ಪ, ದುರ್ಗಪ್ಪ ಹರಿಜನ, ಗುರುಪ್ರಸಾದ ಕಮಲಾಕರ, ಪರಶುರಾಮ ಮಟ್ಟಿಮನಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
 

PREV
click me!

Recommended Stories

ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರಿಗೆ ಸಮಸ್ಯೆ ಇಲ್ಲ: ಬಿಜೆಪಿ ಆರೋಪಕ್ಕೆ ಸಚಿವ ನರೇಂದ್ರಸ್ವಾಮಿ ತಿರುಗೇಟು
ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!