ಹಾವೇರಿ: ಹೆದ್ದಾರಿಯಲ್ಲಿ ಇನ್ನೋವಾ ಕಾರಿಗೆ ಬೆಂಕಿ, ಸುಟ್ಟು ಭಸ್ಮ

Kannadaprabha News   | Asianet News
Published : Mar 26, 2021, 01:25 PM IST
ಹಾವೇರಿ: ಹೆದ್ದಾರಿಯಲ್ಲಿ ಇನ್ನೋವಾ ಕಾರಿಗೆ ಬೆಂಕಿ, ಸುಟ್ಟು ಭಸ್ಮ

ಸಾರಾಂಶ

ತಮಿಳುನಾಡಿನಿಂದ ಗೋವಾಕ್ಕೆ ಹೋಗುತ್ತಿದ್ದ ಕಾರು| ಹಾವೇರಿ ತಾಲೂಕಿನ ಕುಣಿಮೆಳ್ಳಿಹಳ್ಳಿ ಬಳಿ ನಡೆದ ಘಟನೆ| ಸಂಪೂರ್ಣವಾಗಿ ಸುಟ್ಟು ಭಸ್ಮವಾದ ಕಾರು| ಈ ಸಂಬಂಧ ಹಾವೇರಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲು| 

ಹಾವೇರಿ(ಮಾ.26): ತಾಲೂಕಿನ ಕುಣಿಮೆಳ್ಳಿಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿಯ ಡಿವೈಡರ್‌ಗೆ ಡಿಕ್ಕಿ ಹೊಡೆದು ಸ್ಪಾರ್ಕ್ ಆದ ಪರಿಣಾಮ ಇನ್ನೋವಾ ಕಾರೊಂದು ರಸ್ತೆ ಮಧ್ಯೆಯೇ ಬೆಂಕಿ ಹೊತ್ತಿ ಉರಿದು ಭಸ್ಮವಾಗಿರುವ ಘಟನೆ ಗುರುವಾರ ಬೆಳಗಿನ ಜಾವದಲ್ಲಿ ಸಂಭವಿಸಿದೆ.

ತಮಿಳುನಾಡಿನಿಂದ ಗೋವಾಕ್ಕೆ ಹೋಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಕಾರಿನಲ್ಲಿದ್ದ ತಮಿಳುನಾಡು ಮೂಲಕ ಹಾರ್ದಿಕ್‌ ಎನ್‌.ಜಿ., ಶರದ್‌ ಬಾಲಸುಬ್ರಮ್ಯಣ್ಯಂ ಎಂಬುವರಿಗೆ ಗಂಭೀರ ಗಾಯವಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಾಗಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಹಾವೇರಿ: ಚಿರ​ತೆ​ ಕೊಂದು ಪ್ರಾಣ ರಕ್ಷಿ​ಸಿ​ಕೊಂಡ ರೈತ​ರು..!

ವರದಾ ನದಿ ಸೇತುವೆ ಬಳಿ ಡಿವೈಡರ್‌ಗೆ ಕಾರು ತಾಗಿದ ಪರಿಣಾಮ ಕಿಡಿ ಹಾರಿದೆ. ಕೆಲ ಹೊತ್ತಿನಲ್ಲಿ ಬೆಂಕಿ ಕಾರಿಗೆ ಆವರಿಸಿಕೊಂಡು ಸಂಪೂರ್ಣ ಕಾರು ಸುಟ್ಟು ಭಸ್ಮವಾಗಿದೆ. ಈ ಕುರಿತು ಹಾವೇರಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 

PREV
click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!