ಮೈಸೂರಿನಲ್ಲಿ ಮೊದಲ ಮಹಿಳಾ ವಿಶೇಷ ಕೋವಿಡ್ ಸೆಂಟರ್ ಉದ್ಘಾಟನೆ

Kannadaprabha News   | stockphoto
Published : Jun 02, 2021, 07:29 AM IST
ಮೈಸೂರಿನಲ್ಲಿ ಮೊದಲ ಮಹಿಳಾ ವಿಶೇಷ ಕೋವಿಡ್ ಸೆಂಟರ್ ಉದ್ಘಾಟನೆ

ಸಾರಾಂಶ

ಇಂಟರ್‌ ನ್ಯಾಷನಲ್‌ ಯೂತ್‌ ಹಾಸ್ಟೆಲ್‌ನಲ್ಲಿ ಮಹಿಳೆಯರಿಗೆ ವಿಶೇಷ ಕೋವಿಡ್‌ ಸೆಂಟರ್‌ ಮೈಸೂರು ನಗರದಲ್ಲಿ ವಿಶೇಷವಾಗಿ ಮಹಿಳೆಯರಿಗೆ ಆರಂಭಿಸಿದ ಮೊದಲ ಕೋವಿಡ್‌ ಕೇರ್‌ ಸೆಂಟರ್‌   64 ಹಾಸಿಗೆಗಳ ಸೌಲಭ್ಯವಿರುವ ಕೋವಿಡ್ ಕೇರ್ ಸೆಂಟರ್

 ಮೈಸೂರು (ಜೂ.02):  ಮೈಸೂರಿನ ಗೋಕುಲಂ ಎರಡನೇ ಹಂತದಲ್ಲಿರುವ ಇಂಟರ್‌ ನ್ಯಾಷನಲ್‌ ಯೂತ್‌ ಹಾಸ್ಟೆಲ್‌ನಲ್ಲಿ ಮಹಿಳೆಯರಿಗೆ ವಿಶೇಷ ಕೋವಿಡ್‌ ಸೆಂಟರ್‌ ಅನ್ನು ಚಾಮರಾಜ ಕ್ಷೇತ್ರದ ಶಾಸಕ ಎಲ್ ನಾಗೇಂದ್ರ, ನಗರ ಪಾಲಿಕೆ ಸದಸ್ಯೆ ಭಾಗ್ಯ ಮಾದೇಶ್‌, ವಿಧಾನ ಪರಿಷತ್ತು ಮಾಜಿ ಸದಸ್ಯ ಡಿ. ಮಾದೇಗೌಡ, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮಂಗಳವಾರ ಉದ್ಘಾಟಿಸಿದರು.

ಮೈಸೂರು ನಗರದಲ್ಲಿ ವಿಶೇಷವಾಗಿ ಮಹಿಳೆಯರಿಗೆ ಆರಂಭಿಸಿದ ಮೊದಲ ಕೋವಿಡ್‌ ಕೇರ್‌ ಸೆಂಟರ್‌ ಇದು. ಇಲ್ಲಿ 64 ಹಾಸಿಗೆಗಳ ಸೌಲಭ್ಯವಿದೆ. ವಿವಿ ಪುರಂ ಹೆರಿಗೆ ಆಸ್ಪತ್ರೆಯು ಈ ಸಿಸಿಸಿಯ ಉಸ್ತುವಾರಿ ಮತ್ತು ವೈದ್ಯಕೀಯ ಅಗತ್ಯಗಳನ್ನು ನೋಡಿಕೊಳ್ಳುತ್ತದೆ. ಆಶಾಕಿರಣ ಆಸ್ಪತ್ರೆಯ ವೈದ್ಯರು ಮತ್ತು ದಾದಿಯರು ಸಹ ಇಲ್ಲಿ ಸೇವೆ ಸಲ್ಲಿಸುವರು.

ಪ್ರತಾಪ್ ಸಿಂಹ VS ರೋಹಿಣಿ ಸಿಂಧೂರಿ ಪತ್ರ ಸಮರ: 41 ಕೋಟಿ ರೂ ಲೆಕ್ಕ ಕೊಟ್ಟ ಡೀಸಿ ...

ಮೈಸೂರು ಇನ್ನೂ 3 ಸಿಸಿಸಿಗಳನ್ನು ಮಾಡಲಾಗುತ್ತಿದೆ. ಚಾಮರಾಜ ಕ್ಷೇತ್ರದ ಸರ್ಕಾರಿ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವೈದ್ಯಕೀಯ ಮಹಾವಿದ್ಯಾಲಯದಲ್ಲಿ 50 ಹಾಸಿಗೆಗಳ ಸಿಸಿಸಿ, ಎನ್‌.ಆರ್‌. ಕ್ಷೇತ್ರದ ಫರೂಕಿಯ ಫಾರ್ಮಸಿ ಕಾಲೇಜಿನಲ್ಲಿ 200 ಹಾಸಿಗೆಗಳ ಸಿಸಿಸಿ ಮತ್ತು ಕೆ.ಆರ್‌. ಕ್ಷೇತ್ರದ ಆರ್‌ಎಂಸಿ ಎದುರು ಇರುವ ಮೆಟ್ರಿಕ್‌ ನಂತರದ ಬಿಸಿಎಂ ಮಹಿಳಾ ವಿದ್ಯಾರ್ಥಿ ನಿಲಯದಲ್ಲಿ 300 ಹಾಸಿಗೆಗಳ ಸಿಸಿಸಿ ಮಾಡಲಾಗುತ್ತಿದೆ. ಮೈಸೂರಿನ ಜನತೆಗಾಗಿ ಈ 3 ಸಿಸಿಸಿಗಳನ್ನು ಮಾಡಲಾಗಿದೆ. ಎಲ್ಲಾ ಸಿಸಿಸಿಗಳಲ್ಲು ಉಚಿತ ಸೇವೆ ದೊರೆಯಲಿದೆ.

ಜಿಲ್ಲಾ ಎಲ್ಲಾ ಸಿಸಿಸಿಗಳಲ್ಲಿ ಪುರುಷರು ಮತ್ತು ಮಹಿಳೆಯರಿಗೆ ಬೇಕಾದ ಸೌಲಭ್ಯಗಳಿವೆ. ಆದರೆ ಇಂಟನ್ರ್ಯಾಷನಲ್‌ ಯೂತ್‌ ಹಾಸ್ಟೆಲ್‌ ನಲ್ಲಿ ಮಹಿಳೆಯರಿಗಾಗಿ ವಿಶೇಷ ಕೋವಿಡ್‌ ಕೇರ್‌ ಆರಂಭಿಸಲಾಗಿದೆ. ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಈವರೆಗೆ 19 ಸಿಸಿಸಿಗಳನ್ನು ತೆರೆಯಲಾಗಿದೆ. ಈ ಎಲ್ಲಾ ಸಿಸಿಸಿಗಳಲ್ಲಿ ಮಹಿಳೆಯರು ಮತ್ತು ಪುರುಷರು ಇದ್ದಾರೆ. 1700 ಜನ ಈ ಸಿಸಿಸಿಗಳಲ್ಲಿ ಇದ್ದಾರೆ.

ಮೈಸೂರು ನಗರದಲ್ಲಿ 8535 ಸಕ್ರಿಯ ಪ್ರಕರಣಗಳು, ಮತ್ತು ಗ್ರಾಮೀಣ ಪ್ರದೇಶದಲ್ಲಿ 6550 ಸಕ್ರಿಯ ಪ್ರಕರಣಗಳು ಇವೆ. ಈಗ ಮೈಸೂರು ನಗರಕ್ಕೆ ವಿಶೇಷವಾಗಿ 3 ಸಿಸಿಸಿ ಮತ್ತು 1 ಮಹಿಳಾ ಸಿಸಿಸಿ ಆರಂಭಿಸಲಾಗಿದೆ. ಇದರಿಂದ ವಿವಿಧ ಕಾರಣಕ್ಕಾಗಿ ಮನೆಯಲ್ಲಿ ಪ್ರತ್ಯೇಕವಾಗಿ ಇರಲು ಸಾಧ್ಯವಾಗದವರಿಗೆ ತುಂಬಾ ಅನುಕೂಲವಾಗಲಿದೆ. ಈ ಸಿಸಿಸಿಗಳಿಂದ ಪೋ›ತ್ಸಾಹದಾಯಕ ಫಲಿತಾಂಶ ಬಂದಿದೆ. ವಿಶೇಷವಾಗಿ ಮಹಿಳೆಯರಿಗೆ ಅನುಕೂಲವಾಗಿದೆ. ಜುಲೈ 1 ರಂದು ಕೋವಿಡ್‌ ಮುಕ್ತ ಮೈಸೂರು ಹೋರಾಟಕ್ಕೆ ಇದು ನಮಗೆ ಸಹಾಯವಾಗಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

PREV
click me!

Recommended Stories

ಮೈಸೂರು ಅರಮನೆ ವರಹ ದ್ವಾರದ ಮೇಲ್ಛಾವಣಿ ಕುಸಿತ; ಪ್ರವಾಸಿಗರ ಗೈರಿನಿಂದ ತಪ್ಪಿದ ಭಾರೀ ಅನಾಹುತ
ಅಡಿಕೆ ತೋಟದ ದುರಂತ: ಗೊನೆ ಕೊಯ್ಯುವಾಗ ಆಯತಪ್ಪಿ ಬಿದ್ದ ಕಾರ್ಮಿಕ ಸಾವು