ಶಿರಾ ಬಳಿ ಮದುವೆಗೆ ಹೊರಟಿದ್ದ ಬಸ್‌ ಪಲ್ಟಿ: ಐವರ ದುರ್ಮರಣ

Kannadaprabha News   | Asianet News
Published : Feb 19, 2021, 07:54 AM ISTUpdated : Feb 19, 2021, 08:15 AM IST
ಶಿರಾ ಬಳಿ ಮದುವೆಗೆ ಹೊರಟಿದ್ದ ಬಸ್‌ ಪಲ್ಟಿ: ಐವರ ದುರ್ಮರಣ

ಸಾರಾಂಶ

ತುಮಕೂರು ಜಿಲ್ಲೆ ಶಿರಾ ತಾಲೂಕಿನ ಬುಕ್ಕಾಪಟ್ಟಣ ರಸ್ತೆಯ ಮೇಕೆರಹಳ್ಳಿ ತಿರುವಿನಲ್ಲಿ ನಡೆದ ಘಟನೆ| ಮದುವೆ ಕಾರ್ಯಕ್ರಮಕ್ಕೆ ಹೊರಟ್ಟಿದ್ದರು| ಗಾಯಾಳುಗಳಿಗೆ ಶಿರಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ, ಹೆಚ್ಚಿನ ಚಿಕಿತ್ಸೆಗೆ ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ದಾಖಲು| 

ಶಿರಾ(ಫೆ.19): ಮದುವೆಗೆ ಹೊರಟಿದ್ದ ಬಸ್‌ವೊಂದು ಪಲ್ಟಿಯಾದ ಪರಿಣಾಮ ಐವರು ಸಾವನ್ನಪ್ಪಿ, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ದುರ್ಘಟನೆ ತುಮಕೂರು ಜಿಲ್ಲೆ ಶಿರಾ ತಾಲೂಕಿನಲ್ಲಿ ನಡೆದಿದೆ. 

ಶಿರಾ ತಾಲೂಕಿನ ಬುಕ್ಕಾಪಟ್ಟಣ ರಸ್ತೆಯ ಮೇಕೆರಹಳ್ಳಿ ತಿರುವಿನಲ್ಲಿ ಗುರುವಾರ ರಾತ್ರಿ 8 ಗಂಟೆಯ ಸಮಯದಲ್ಲಿ ಬಸ್‌ ಪಲ್ಟಿಯಾಗಿದೆ. ಬುಕ್ಕಾಪಟ್ಟಣದಲ್ಲಿ ನಡೆಯಲಿರುವ ಮದುವೆ ಕಾರ್ಯಕ್ರಮಕ್ಕೆ ತುಮಕೂರು ತಾಲೂಕಿನ ಶಂಬೇನಹಳ್ಳಿ ಗೊಲ್ಲರಹಟ್ಟಿ ಗ್ರಾಮದಿಂದ ಜನರು ಬಸ್‌ನಲ್ಲಿ ಹೊರಟ್ಟಿದ್ದರು. 

ರಸ್ತೆ ಅಪಘಾತದಲ್ಲಿ ಸಾವನ್ನಪ್ಪುತ್ತಿರುವವರಲ್ಲಿ ಶೇ.70 ರಷ್ಟು ಯುವಜನಾಂಗ; ಬೆಚ್ಚಿ ಬೀಳಿಸುತ್ತಿದೆ ವರದಿ!

ಬಸ್‌ ಪಲ್ಟಿಯಾದ ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿದರೆ, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಶಿರಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ತುಮಕೂರು ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿದೆ.
 

PREV
click me!

Recommended Stories

ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ: ಸಿಎಂ ಡಿಸಿಎಂ
4,808 ಕೋಟಿ ವೆಚ್ಚದಲ್ಲಿ ರಸ್ತೆಗಳ ಅಭಿವೃದ್ಧಿ