ಗಣರಾಜ್ಯೋತ್ಸವ ಪರೇಡ್‌ಗೆ ತಡ ಮಾಡಿದ ಐವರು ಪೊಲೀಸರು ಸಸ್ಪೆಂಡ್‌

Kannadaprabha News   | Asianet News
Published : Jan 27, 2021, 12:13 PM IST
ಗಣರಾಜ್ಯೋತ್ಸವ ಪರೇಡ್‌ಗೆ ತಡ ಮಾಡಿದ ಐವರು ಪೊಲೀಸರು ಸಸ್ಪೆಂಡ್‌

ಸಾರಾಂಶ

ಐದು ಜನ ಪೊಲೀಸ್‌ ಪೇದೆ ಅಮಾನತು| ಕರ್ತವ್ಯಲೋಪ ಹಿನ್ನೆಲೆಯಲ್ಲಿ ಅಮಾನತುಗೊಳಿಸಿ ಆದೇಶ ಹೊರಡಿಸಿದ ಎಸ್‌ಪಿ| ಬಳ್ಳಾರಿ ಜಿಲ್ಲೆಯ ಸಂಡೂರಿನ ಛತ್ರಪತಿ ಶಿವಾಜಿ ವಿದ್ಯಾಮಂದಿರದಲ್ಲಿ ಆಯೋಜನೆಗೊಂಡಿದ್ದ ಗಣರಾಜ್ಯೋತ್ಸವ ಸಮಾರಂಭ| 

ಬಳ್ಳಾರಿ(ಜ.27): ಗಣರಾಜ್ಯೋತ್ಸವ ಪರೇಡ್‌ಗೆ ತಡವಾಗಿ ಬಂದ ಐದು ಜನ ಪೊಲೀಸ್‌ ಪೇದೆಗಳನ್ನು ಅಮಾನತುಗೊಳಿಸಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸೈದುಲು ಅಡಾವತ್‌ ಅವರು ಆದೇಶ ಹೊರಡಿಸಿದ್ದಾರೆ.

ಸಂಡೂರು ಪೊಲೀಸ್‌ ಠಾಣೆಯ ಜಂಬುನಾಥ, ರಘುಪತಿ, ವೆಂಕಟೇಶ ನಾಯ್ಕ, ವೇಣುಗೊಪಾಲ ಹಾಗೂ ಕಾಳಿಂಗಪ್ಪ ಅಮಾನತುಗೊಂಡ ಪೊಲೀಸರು.

ಗರ್ಭಿಣಿ ಮಾಡಿ ಕೈಕೊಟ್ಟ ಪೊಲೀಸಪ್ಪ: ಮಹಿಳಾ ಎಸ್‌ಐ ದೂರು

ಸಂಡೂರಿನ ಛತ್ರಪತಿ ಶಿವಾಜಿ ವಿದ್ಯಾಮಂದಿರದಲ್ಲಿ ಗಣರಾಜ್ಯೋತ್ಸವ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಐವರು ಪೊಲೀಸರು ಪರೇಡ್‌ಗೆ ತಡವಾಗಿ ತೆರಳಿದ್ದರು. ವಿಷಯ ಗೊತ್ತಾಗುತ್ತಿದ್ದಂತೆಯೇ ಎಸ್ಪಿ ಸೌದುಲು ಅಡಾವತ್‌ ಅವರು ಕರ್ತವ್ಯಲೋಪ ಹಿನ್ನೆಲೆಯಲ್ಲಿ ಅಮಾನತುಗೊಳಿಸಿದ್ದಾರೆ.

PREV
click me!

Recommended Stories

ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
ದ್ವೇಷ ಭಾಷಣ ಪ್ರಕರಣ; ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ಗೆ ನಿರೀಕ್ಷಣಾ ಜಾಮೀನು!