ಸಿದ್ದರಾಮಯ್ಯ ಎಸ್ಕಾರ್ಟ್ ಕಾರು ಅಪಘಾತ: ಹೃದಯಘಾತದಿಂದ ARSI ಸಾವು

Published : Jan 09, 2019, 08:46 PM IST
ಸಿದ್ದರಾಮಯ್ಯ ಎಸ್ಕಾರ್ಟ್ ಕಾರು ಅಪಘಾತ: ಹೃದಯಘಾತದಿಂದ ARSI ಸಾವು

ಸಾರಾಂಶ

ಮೈಸೂರಿಗೆ ತೆರಳುವ ವೇಳೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಗಾವಲು ವಾಹನ ಅಪಘಾತಕ್ಕೀಡಾಗಿದ್ದು, ಹೃದಯಘಾತದಿಂದ ಪೊಲೀಸ್ ಅಧಿಕಾರಿ ಸಾವನ್ನಪ್ಪಿದ್ದಾರೆ.

ಮಂಡ್ಯ, (ಜ.9): ಮೈಸೂರಿಗೆ ತೆರಳುವ ವೇಳೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಗಾವಲು ವಾಹನ ಮಂಡ್ಯದ ಶ್ರೀರಂಗಪಟ್ಟಣದ ಟಿ.ಎಂ.ಹೊಸೂರು ಗೇಟ್ ಬಳಿ ಅಪಘಾತಕ್ಕೀಡಾಗಿದೆ.

ಸರಣಿ ಅಪಘಾತದ ಪರಿಣಾಮ ಎಸ್ಕಾರ್ಟ್ ವಾಹನದಲ್ಲಿದ್ದ  ARSI ಮರೀಗೌಡ(56) ಆತಂಕಗೊಂಡು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಇಂದು [ಬುಧವಾರ] ಬೆಳಗ್ಗೆ ಬೆಂಗಳೂರಿಂದ ಮೈಸೂರಿಗೆ ತೆರಳುತ್ತಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಎಸ್ಕಾರ್ಟ್ ವೇಳೆ ಸರಣಿ ಅಪಘಾತ ಸಂಭವಿಸಿದೆ.

ಈ ಘಟನೆ ನೋಡಿ ಬೆಂಗಾವಲು ವಾಹನ ಸಂಖ್ಯೆ ಕೆಎ 11 ಜಿ 591ರಲ್ಲಿದ್ದ ಮರೀಗೌಡ ಅವರು ಹೃದಯಘಾತಕ್ಕೊಳಗಾಗಿ ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ಮೂರು ಪೊಲೀಸ್ ವಾಹನಗಳು ಹಾಗೂ ಎರಡು ಖಾಸಗಿ ವಾಹನಗಳು ಜಖಂಗೊಂಡಿವೆ.

PREV
click me!

Recommended Stories

ರೈತರಿಗೆ ಹೆಣ್ಣು ಸಿಗ್ತಿಲ್ಲ; ಬಾಸಿಂಗ ತೊಟ್ಟು, ತಾಂಬೂಲ ಹಿಡಿದು ಡಿಸಿ ಆಫೀಸಿಗೆ ಹೆಣ್ಣು ಕೇಳಲು ಬಂದ ಯುವಕರು!
ಮೈಸೂರು, ಮಂಡ್ಯದಲ್ಲಿ ಬಾಲ್ಯ ವಿವಾಹಕ್ಕೆ ಗಣನೀಯ ಇಳಿಕೆ, ಸರ್ಕಾರದಿಂದ ಸಿಕ್ಕಿತು ನೆಮ್ಮದಿಯ ಸುದ್ದಿ