ಕೊರೋನಾ ಸಂಕಷ್ಟದ ಮಧ್ಯೆ ಆಸ್ತಿ ತೆರಿಗೆ ಹೆಚ್ಚಳ ಬೇಡ: ಸಿದ್ದರಾಮಯ್ಯ

Kannadaprabha News   | Asianet News
Published : Oct 13, 2020, 10:48 AM IST
ಕೊರೋನಾ ಸಂಕಷ್ಟದ ಮಧ್ಯೆ ಆಸ್ತಿ ತೆರಿಗೆ ಹೆಚ್ಚಳ ಬೇಡ: ಸಿದ್ದರಾಮಯ್ಯ

ಸಾರಾಂಶ

ಆಸ್ತಿ ತೆರಿಗೆ ಹೆಚ್ಚಳ ಮಾಡಿದರೆ ಬಾಡಿಗೆ ದರ ಹೆಚ್ಚಳ| ಮನೆ ಹಾಗೂ ಅಂಗಡಿಗಳ ಬಾಡಿಗೆ ದರ ಹೆಚ್ಚಳವಾಗಿ ಸಾರ್ವನಿಕರು, ವ್ಯಾಪಾರಿಗಳಿಗೆ ಸಂಕಷ್ಟ| ಆಸ್ತಿ ತೆರಿಗೆ ಕಡಿಮೆ ಮಾಡಿದರೆ ಬಾಡಿಗೆ ದರಗಳು ಕಡಿಮೆಯಾಗಿ ಬಡವರು ಹಾಗೂ ಮಧ್ಯಮ ವರ್ಗದವರಿಗೆ ಮನೆಗಳು ಕೈಗೆಟಕುವಂತಾಗುತ್ತದೆ ಎಂದ ಸಿದ್ದರಾಮಯ್ಯ| 

ಬೆಂಗಳೂರು(ಅ.13): ಕೊರೋನಾದಿಂದಾಗಿ ಜನರು ಸಂಕಷ್ಟದಲ್ಲಿರುವ ಹಿನ್ನೆಲೆಯಲ್ಲಿ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಳದ ಹೊರೆ ಹೊರಿಸುವ ಬದಲು ಹಾಲಿ ತೆರಿಗೆಯನ್ನೇ ಕಡಿಮೆ ಮಾಡಿ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ಆಸ್ತಿ ತೆರಿಗೆ ಹೆಚ್ಚಳ ಮಾಡಿದರೆ ಬಾಡಿಗೆ ದರ ಹೆಚ್ಚಾಗುತ್ತದೆ. ಇದರಿಂದ ಮನೆ ಹಾಗೂ ಅಂಗಡಿಗಳ ಬಾಡಿಗೆ ದರ ಹೆಚ್ಚಳವಾಗಿ ಸಾರ್ವನಿಕರು, ವ್ಯಾಪಾರಿಗಳು ಸಮಸ್ಯೆ ಎದುರಿಸುವಂತಾಗುತ್ತದೆ. ಆಸ್ತಿ ತೆರಿಗೆ ಕಡಿಮೆ ಮಾಡಿದರೆ ಬಾಡಿಗೆ ದರಗಳು ಕಡಿಮೆಯಾಗಿ ಬಡವರು ಹಾಗೂ ಮಧ್ಯಮ ವರ್ಗದವರಿಗೆ ಮನೆಗಳು ಕೈಗೆಟಕುವಂತಾಗುತ್ತದೆ ಎಂದಿದ್ದಾರೆ.

ಸಿದ್ದು ಅವ​ಧಿ​ಯಲ್ಲಿ ಸಾಲ​ಮನ್ನಾ ಅಕ್ರ​ಮ: ಎಚ್‌​ಡಿ​ಕೆ ಆರೋಪ!

ಬಿಬಿಎಂಪಿಯಲ್ಲಿ ಪ್ರಸ್ತುತ ಇರುವ ಆಸ್ತಿ ತೆರಿಗೆಯನ್ನು ಪಾವತಿಸಲೇ ಜನರು ಒದ್ದಾಡುತ್ತಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿನ ಆಸ್ತಿ ತೆರಿಗೆ ಹೆಚ್ಚಳ ಪ್ರಸ್ತಾಪ ಒಳ್ಳೆಯದಲ್ಲ. ಒಂದು ವೇಳೆ ತೆರಿಗೆ ಹೆಚ್ಚಳ ಮಾಡಿದರೆ ನಗರದ ಅಭಿವೃದ್ಧಿಗೆ ಮಾರಕವಾಗಲಿದೆ. ಹೀಗಾಗಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಆಸ್ತಿ ತೆರಿಗೆ ಹೆಚ್ಚಳದ ಬದಲು ಇಳಿಕೆ ಮಾಡುವ ಕುರಿತು ಚಿಂತನೆ ನಡೆಸಬೇಕು ಎಂದು ಹೇಳಿದ್ದಾರೆ.
 

PREV
click me!

Recommended Stories

ಭದ್ರಾವತಿ: ಜೈ ಭೀಮ್ ನಗರದಲ್ಲಿ ಪ್ರೇಮಿಗಳ ವಿಚಾರಕ್ಕೆ ರಕ್ತಪಾತ: ಇಬ್ಬರು ದುರ್ಮರಣ!
'ನಿಮ್ಮ ಸುರಕ್ಷತೆ ನನಗೂ ಮುಖ್ಯ..' ಮಹಿಳಾ ಪ್ರಯಾಣಿಕರ ಮನ ಗೆದ್ದ ಆಟೋ ಚಾಲಕ, ಸಂದೇಶ ವೈರಲ್ ಮಾಡಿದ ಬೆಂಗಳೂರು ಪೊಲೀಸರು!