ಇಡಿ ಕೇಸ್‌ನಿಂದ ಮುಕ್ತಿ ನೀಡುವಂತೆ ದುರ್ಗಾದೇವಿಗೆ ಪತ್ರ ಬರೆದ ಡಿಕೆಶಿ!

Published : Nov 23, 2019, 10:06 AM ISTUpdated : Nov 23, 2019, 10:33 AM IST
ಇಡಿ ಕೇಸ್‌ನಿಂದ ಮುಕ್ತಿ ನೀಡುವಂತೆ ದುರ್ಗಾದೇವಿಗೆ ಪತ್ರ ಬರೆದ ಡಿಕೆಶಿ!

ಸಾರಾಂಶ

ಪತ್ರದ ಮೂಲಕ ದುರ್ಗಾ ದೇವಿ ಮುಂದೆ ಅಳಲು ತೋಡಿಕೊಂಡಿರುವ ಡಿಕೆಶಿ|ಯಾದಗಿರಿ ಜಿಲ್ಲೆ ವಡಗೇರಾ ತಾಲೂಕಿನ ಗೋನಾಳ ಗಡೇ ದುರ್ಗಾದೇವಿಗೆ ಪತ್ರ ಬರೆದ ಡಿಕೆಶಿ|ಡಿ ಕೆ ಶಿವಕುಮಾರ್ ಬರೆದಿರುವ ಪತ್ರವಿಟ್ಟು ಪೂಜೆ ಸಲ್ಲಿಸಿದ ಮಂದಿರದ ಪೂಜಾರಿ| 'ಆಲ್ ಕೇಸ್ ಶುಡ್ ಡಿಲೀಟ್ ಅಮ್ಮ' ಎಂದು ಬರೆದಿರು ಪತ್ರ|

ಯಾದಗಿರಿ(ನ.23): ತಿಹಾರ್ ಜೈಲಿನಿಂದ ಹೊರಬಂದ ಮೇಲೆ ಮಾಜಿ ಸಚಿವ ಡಿ. ಕೆ. ಶಿವಕುಮಾರ್ ಅವರು ಟೆಂಪಲ್ ರನ್ ಆರಂಭಿಸಿದ್ದಾರೆ. ಇದೀಗ ಡಿಕೆಶಿ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗೋನಾಳ ಗ್ರಾಮದ ಗಡೇ ದುರ್ಗಾದೇವಿಗೆ ಪತ್ರ ಬರೆಯುವ ಮೂಲಕ ತಮ್ಮ ಅಳಲು ತೋಡಿಕೊಂಡಿದ್ದಾರೆ.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಗಡೇ ದುರ್ಗಾದೇವಿ ಅರ್ಚಕರಿಗೆ ಪತ್ರ ಕಳುಹಿಸಿಕೊಟ್ಟಿರುವ ಡಿ. ಕೆ. ಶಿವಕುಮಾರ್ ಅವರು, ಕೇಸ್ ನಿಂದ ಮುಕ್ತಿ ಸಿಗುವಂತೆ ದೇವಿಗೆ ಮೊರೆ ಹೋಗಿದ್ದಾರೆ. ಆಲ್ ಕೇಸ್ ಶುಡ್ ಡಿಲೀಟ್ ಎಂದು ತಮ್ಮ ಹಸ್ತಾಕ್ಷರದಲ್ಲೇ ಬರೆದಿರುವ  ಪತ್ರವನ್ನ ರವಾನಿಸಿದ್ದಾರೆ. 

ಪತ್ರವನ್ನ ಪಡೆದ ಮಂದಿರ ಪೂಜಾರಿ ಮಾದೇವಪ್ಪ ದೇವಿ ಮಡಿಲಲ್ಲಿ ಇಟ್ಟು ಪೂಜೆ ಸಲ್ಲಿಸಿದ್ದಾರೆ. ಕಳೆದ ವರ್ಷ  ಜನರವರಿ ತಿಂಗಳಿಂದ ನಡೆದ ಜಾತ್ರೆಗೆ ಬರುವುದಾಗಿ ಹೇಳಿ ಕೊನೆ ಕ್ಷಣದಲ್ಲಿ ಡಿ.ಕೆ. ಶಿವಕುಮಾರ್ ಅವರು  ಬಂದಿರಲಿಲ್ಲ. ಹೀಗಾಗಿ ದೇವಿ ಮುನಿಸಿಕೊಂಡಿದ್ದಾಳೆ ಅನ್ನೋ ಮಾತು ಭಕ್ತ ವಲಯದಲ್ಲಿ ಕೇಳಿ ಬಂದಿತ್ತು. ಹೀಗಾಗಿ ಮಂದಿರ ಅರ್ಚಕ ಮಹಾದೇವಪ್ಪ ಪೂಜಾರಿ ಕೈಯಲ್ಲಿ ಪತ್ರ ಬರೆದು ಕೊಟ್ಟಿರುವ ಡಿಕೆಶಿ, ಮುಂದಿನ ವರ್ಷ ನಡೆಯುವ ಜಾತ್ರೆಗೆ ಬರುವುದಾಗಿ ತಿಳಿಸಿದ್ದಾರೆ. 

PREV
click me!

Recommended Stories

Kali Tiger Reserve Eco-Sensitive Zone: ಕಾಳಿ ಹುಲಿ ಸಂರಕ್ಷಿತ ಪ್ರದೇಶ ಇನ್ನು ಪರಿಸರ ಸೂಕ್ಷ್ಮ ವಲಯ: ಕೇಂದ್ರ ಸರ್ಕಾರ ಮಹತ್ವದ ಘೋಷಣೆ
Nadoja award controversy: ಡಾಕ್ಟರೆಟ್‌ ಕೊಡುವ ವಿಚಾರದಲ್ಲಿ ವಿವಿಗಳು ಸ್ವತಂತ್ರ, ಹಸ್ತಕ್ಷೇಪ ಮಾಡೋಲ್ಲ ಎಂದ ಹೈಕೋರ್ಟ್‌