ಮಾಜಿ ಸಚಿವೆ ರೇಣುಕಾ ರಾಜೇಂದ್ರನ್‌ ಇನ್ನಿಲ್ಲ

Kannadaprabha News   | Asianet News
Published : Dec 16, 2020, 09:56 AM ISTUpdated : Dec 16, 2020, 10:00 AM IST
ಮಾಜಿ ಸಚಿವೆ ರೇಣುಕಾ ರಾಜೇಂದ್ರನ್‌ ಇನ್ನಿಲ್ಲ

ಸಾರಾಂಶ

ಗುಂಡೂರಾವ್‌ ಸಂಪುಟದಲ್ಲಿ ಸಚಿವೆಯಾಗಿದ್ದ ರೇಣುಕಾ ರಾಜೇಂದ್ರನ್‌| ಇಂದು ಚಿಕ್ಕಬಳ್ಳಾಪುರದಲ್ಲಿ ಅಂತ್ಯಕ್ರಿಯೆ| ಮಾಜಿ ಸಚಿವ ಎಚ್‌.ಆಂಜನೇಯ ಸಂತಾಪ| 

ಬೆಂಗಳೂರು(ಡಿ.16): ಗುಂಡೂರಾವ್‌ ಸರ್ಕಾರದಲ್ಲಿ ರೇಷ್ಮೆ ಖಾತೆ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಮಾಜಿ ಸಚಿವೆ ರೇಣುಕಾ ರಾಜೇಂದ್ರನ್‌(78) ಮಂಗಳವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ನಿಧನರಾಗಿದ್ದಾರೆ.

ಕಳೆದ ಕೆಲವು ದಿನಗಳಿಂದ ಕೊರೋನಾ ಸೋಂಕಿಗೆ ತುತ್ತಾಗಿ ಗುಣಮುಖರಾಗಿದ್ದರು. ಮಂಗಳವಾರ ಹೃದಯಾಘಾತದಿಂದ ಮೃತಪಟ್ಟಿದ್ದು, ಇಂದು(ಬುಧವಾರ) ಚಿಕ್ಕಬಳ್ಳಾಪುರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ರೇನುಕಾ ಅವರು ಇಬ್ಬರು ಪುತ್ರರು ಹಾಗೂ ಒಬ್ಬ ಪುತ್ರಿಯನ್ನ ಅಗಲಿದ್ದಾರೆ. 1989ರಲ್ಲಿ ಮೂರನೇ ಬಾರಿಗೆ ಚಿಕ್ಕಬಳ್ಳಾಪುರ ಮೀಸಲು ಕ್ಷೇತ್ರದಿಂದ ವಿಧಾನಸಭೆ ಪ್ರವೇಶಿಸಿ ಮುಖ್ಯಮಂತ್ರಿಯಾಗಿದ್ದ ಗುಂಡೂರಾವ್‌ ಸರ್ಕಾರದಲ್ಲಿ ಸಂಪುಟದಲ್ಲಿ ರೇಷ್ಮೆ ಖಾತೆ ಸಚಿವರಾಗಿದ್ದರು.

32 ವರ್ಷ ನಂತ್ರ ಚಿಕ್ಕಬಳ್ಳಾಪುರಕ್ಕೆ ಒಲಿದ ಸಚಿವ ಸ್ಥಾನ

ಆಂಜನೇಯ ಸಂತಾಪ:

‘ಕುಟುಂಬಕ್ಕೆ ರೇಣುಕಾ ಅವರ ಅಗಲಿಕೆಯನ್ನು ಭರಿಸುವ ಶಕ್ತಿಯಲ್ಲಿ ದೇವರು ನೀಡಲಿ’ ಎಂದು ಮಾಜಿ ಸಚಿವ ಎಚ್‌.ಆಂಜನೇಯ ಸಂತಾಪ ವ್ಯಕ್ತಪಡಿಸಿದ್ದಾರೆ.
 

PREV
click me!

Recommended Stories

ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
ದ್ವೇಷ ಭಾಷಣ ಪ್ರಕರಣ; ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ಗೆ ನಿರೀಕ್ಷಣಾ ಜಾಮೀನು!