ಕೃಷಿ ಉತ್ಪನ್ನ ಮಾರಾಟ, ಸಾಗಾಟಕ್ಕೆ ಮುಕ್ತ ಅವಕಾಶ; ಸಚಿವ ಸೋಮಶೇಖರ್

Kannadaprabha News   | Asianet News
Published : Jun 02, 2020, 09:04 AM IST
ಕೃಷಿ ಉತ್ಪನ್ನ ಮಾರಾಟ, ಸಾಗಾಟಕ್ಕೆ ಮುಕ್ತ ಅವಕಾಶ; ಸಚಿವ ಸೋಮಶೇಖರ್

ಸಾರಾಂಶ

ಕೃಷಿ ಉತ್ಪನ್ನಗಳ ಮಾರಾಟಕ್ಕೆ ಮುಕ್ತ ಅವಕಾಶ ಕಲ್ಪಿಸಿಕೊಡುವುದರಿಂದ ಕೃಷಿ ಉತ್ಪನ್ನ ಮಾರುಕಟ್ಟೆಗಳಿಗೆ ಬರಬೇಕಾದ ಆದಾಯದಲ್ಲಿ ಸುಮಾರು 600 ಕೋಟಿ ರು.ಗಳ ಕೊರತೆ ಉಂಟಾಗುತ್ತಿದೆ. ಇದನ್ನು ಮುಂದಿನ ದಿನಗಳಲ್ಲಿ ಸರಿದೂಗಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಎಸ್‌.ಟಿ. ಸೋಮಶೇಖರ್ ಹೇಳಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

ಶಿವಮೊಗ್ಗ(ಜೂ.02): ರೈತರು ತಮ್ಮ ಕೃಷಿ ಉತ್ಪನ್ನಗಳನ್ನು ಅನುಕೂಲಕ್ಕೆ ತಕ್ಕಂತೆ ಮಾರಾಟ ಹಾಗೂ ಸಾಗಾಟ ಮಾಡಿಕೊಳ್ಳಲು ಮುಕ್ತ ಅವಕಾಶ ಕಲ್ಪಿಸಲಾಗಿದೆ ಎಂದು ರಾಜ್ಯ ಸಹಕಾರಿ ಸಚಿವ ಎಸ್‌. ಟಿ. ಸೋಮಶೇಖರ್‌ ಹೇಳಿದರು.

ನಗರದ ಮ್ಯಾಮ್ಕೋಸ್‌ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಎಪಿಎಂಸಿ ಮತ್ತು ಸಹಕಾರ ಇಲಾಖೆ ಅ​ಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಕೃಷಿ ಉತ್ಪನ್ನಗಳ ಮಾರಾಟಕ್ಕೆ ಮುಕ್ತ ಅವಕಾಶ ಕಲ್ಪಿಸಿಕೊಡುವುದರಿಂದ ಕೃಷಿ ಉತ್ಪನ್ನ ಮಾರುಕಟ್ಟೆಗಳಿಗೆ ಬರಬೇಕಾದ ಆದಾಯದಲ್ಲಿ ಸುಮಾರು 600 ಕೋಟಿ ರು.ಗಳ ಕೊರತೆ ಉಂಟಾಗುತ್ತಿದೆ. ಇದನ್ನು ಮುಂದಿನ ದಿನಗಳಲ್ಲಿ ಸರಿದೂಗಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಎಪಿಎಂಸಿ ಕಲಂ 8ರ ನಿಯಮಕ್ಕೆ ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ಮಾಡಲಾಗಿದೆ. ಸದನದಲ್ಲಿ ಚರ್ಚಿಸಿ ನಂತರ ಆದೇಶವಾಗಿ ಹೊರಬರಲಿದೆ. ಈ ಆದೇಶದ ತಿದ್ದುಪಡಿಯಿಂದಾಗಿ ರಾಜ್ಯಮಟ್ಟದ ಎಪಿಎಂಸಿ ಮಾರುಕಟ್ಟೆಯ ನಿಯಮಗಳಿಗೆ ಯಾವುದೇ ರೀತಿಯ ಅಡಚಣೆ ಉಂಟಾಗುವುದಿಲ್ಲ ಎಂದರು.

ಆರೋಗ್ಯ ಇಲಾಖೆಗೆ ಪೂರಕವಾಗಿ ಸ್ಪಂದಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಜಿಲ್ಲಾ ಮಟ್ಟದಲ್ಲಿ ಸಹಕಾರ ಸಂಘ ಸ್ಥಾಪಿಸಲು ಉದ್ದೇಶಿಸಲಾಗಿದೆ ಎಂದ ಅವರು ಸಹಕಾರ ಸಂಘಗಳಲ್ಲಿ ಅನುಷ್ಠಾನದಲ್ಲಿರುವ ಕಾಯಕ ಯೋಜನೆಯಂತೆ ಆಶಾ ಕಾರ್ಯಕರ್ತರಿಗೂ ಸಾಲ ಸೌಲಭ್ಯ ಒದಗಿಸಲು ಉದ್ದೇಶಿಸಲಾಗಿದೆ. 10 ಸಾವಿರ ರು.ಗಳಿಂದ 3 ಲಕ್ಷದವರೆಗೆ ಸಾಲ ನೀಡುವ ಉದ್ದೇಶ ಹೊಂದಲಾಗಿದ್ದು, ಶೇ ನೂರರಷ್ಟುಮರುಪಾವತಿಯಾಗುವ ವಿಶ್ವಾಸವಿದೆ ಎಂದು ಹೇಳಿದರು.

ಶಿವಮೊಗ್ಗ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧ

ಕೊರೋನಾ ಹಿನ್ನೆಲೆ ನಗರ ಪ್ರದೇಶದಲ್ಲಿ ಕೆಲಸ ಮಾಡುತ್ತಿದ್ದ ಅನೇಕ ಯುವಕರು ತಮ್ಮ ಗ್ರಾಮಗಳಿಗೆ ಹಿಂದಿರುಗಿದ್ದಾರೆ. ಇದೀಗ ಯುವಕರನ್ನು ಕೃಷಿ ಚಟುವಟಿಕೆಯಲ್ಲಿ ತೊಡಗಿಸಲು ಅನುಕೂಲವಾಗುವಂತೆ ಹೊಸ ರೈತರಿಗೂ ಸಾಲ ಸೌಲಭ್ಯ ನೀಡಿ ಪ್ರೋತ್ಸಾಹಿಸಲು ಉದ್ದೇಶಿಸಲಾಗಿದೆ. ಏಪ್ರಿಲ್‌ 1ರಿಂದಲೇ ಅನ್ವಯವಾಗುವಂತೆ ಹೊಸ ಸಾಲಸೌಲಭ್ಯ ನೀಡುವ ಕಾರ್ಯ ಆರಂಭವಾಗಿದೆ. ಈ ಯೋಜನೆಯಡಿ ಹೊಸ ಅರ್ಹ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಮೂರು ಲಕ್ಷ ರೂ ವರೆಗೆ ಹಾಗೆಯೆ ಶೇ ಮೂರರ ಬಡ್ಡಿದರದಲ್ಲಿ 10 ಲಕ್ಷ ರೂ ವರೆಗೆ ಸಾಲ ಸೌಲಭ್ಯ ನೀಡಲಾಗುವುದು ಎಂದು ತಿಳಿಸಿದರು.

ಸಂಸದ ಬಿ.ವೈ. ರಾಘವೇಂದ್ರ, ಇಲಾಖೆಯ ಉಪನಿಬಂಧಕ ಎಸ್‌ ನಾಗೇಶ್‌ ಡೋಂಗ್ರೆ, ಲೆಕ್ಕ ಪರಿಶೋಧನ ಇಲಾಖೆಯ ಉಪನಿರ್ದೇಶಕ ಮಹೇಶ್ವರಪ್ಪ, ಜಿಲ್ಲೆಯ ಎಲ್ಲಾ ತಾಲೂಕುಗಳ ಎಪಿಎಂಸಿ ಕಾರ್ಯದರ್ಶಿಗಳು ಸಹಕಾರ ಇಲಾಖೆಯ ಸಿಡಿಗಳು, ಅ​ಧಿಕಾರಿಗಳು ಇದ್ದರು.
 

PREV
click me!

Recommended Stories

ವನ್ಯಜೀವಿ ಸಂರಕ್ಷಣೆ: ಏಷ್ಯಾನೆಟ್ ಸುವರ್ಣ ನ್ಯೂಸ್ & ಕನ್ನಡಪ್ರಭದ ಅಭಿಯಾನಕ್ಕೆ ಗೋಲ್ಡನ್ ಸ್ಟಾರ್ ಗಣೇಶ್ ಸಾಥ್!
ಚಿಕ್ಕಮಗಳೂರು: ಹೈಟೆಕ್ ಕಾರ್‌ನಲ್ಲಿ ಗೋ ಕಳ್ಳತನ; ಸಿನಿಮೀಯ ಶೈಲಿಯಲ್ಲಿ ಹಿಂದೂಪರ ಸಂಘಟನೆ ಕಾರ್ಯಕರ್ತರಿಂದ ಚೇಸಿಂಗ್!