ಮೈಸೂರು: SSLC ವಿದ್ಯಾರ್ಥಿನಿಯ ಬಾಲ್ಯ ವಿವಾಹ ತಡೆದ ಸ್ನೇಹಿತೆ

Kannadaprabha News   | Asianet News
Published : Jun 13, 2021, 12:07 PM IST
ಮೈಸೂರು: SSLC ವಿದ್ಯಾರ್ಥಿನಿಯ ಬಾಲ್ಯ ವಿವಾಹ ತಡೆದ ಸ್ನೇಹಿತೆ

ಸಾರಾಂಶ

* ಮೈಸೂರಿನ ಹೊರವಲಯದ ಹೂಟಗಳ್ಳಿಯಲ್ಲಿ ನಡೆದ ಘಟನೆ * ಬಾಲಕಿಗೆ ರಾಮನಗರ ಮೂಲದ ಯುವಕನೊಂದಿಗೆ ಮದುವೆಗೆ ಸಿದ್ಧತೆ  * ಈ ಸಂಬಂಧ ವಿಜಯನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು

ಮೈಸೂರು(ಜೂ.13): ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಗೆ ಕಾನೂನು ಬಾಹಿರವಾಗಿ ನಿಶ್ಚಯವಾಗಿದ್ದ ಮದುವೆಯನ್ನು ಆಕೆಯ ಸ್ನೇಹಿತೆ ತಡೆದ ಘಟನೆ ಮೈಸೂರಿನ ಹೊರವಲಯದ ಹೂಟಗಳ್ಳಿಯಲ್ಲಿ ನಡೆದಿದೆ. 

ಬಾಲಕಿಗೆ ರಾಮನಗರ ಮೂಲದ ಯುವಕನೊಂದಿಗೆ ಮದುವೆಗೆ ಸಿದ್ಧತೆ ನಡೆದಿತ್ತು. ಆದರೆ ಈ ವಿಚಾರ ತಿಳಿದಿದ್ದ ಮದ್ವೆಗೆ ನಿಶ್ಚಯವಾಗಿದ್ದ ಬಾಲಕಿಯ ಸ್ನೇಹಿತೆ ತಮ್ಮ ಶಾಲೆಯ ಶಿಕ್ಷಕಿಗೆ ಮಾಹಿತಿ ನೀಡಿದ್ದಳು. ಶಿಕ್ಷಕಿಯು ಈ ಮಾಹಿತಿಯನ್ನು ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ ಅವರಿಗೆ ತಿಳಿಸಿದ್ದರು. 

ಲಾಕ್‌ಡೌನ್‌ ಅವಧಿಯಲ್ಲಿ ಬಾಲ್ಯ ವಿವಾಹ ಹೆಚ್ಚಳ..?

ಈ ಸಂಸ್ಥೆಯು ಪೊಲೀಸರಿಗೆ ಮಾಹಿತಿ ನೀಡುವ ಮೂಲಕ ಬಾಲ್ಯ ವಿವಾಹವನ್ನು ತಡೆಯಲಾಗಿದೆ. ಈ ವೇಳೆ ಪರಿಶೀಲನೆಗೆಂದು ಪೊಲೀಸರು ಬಂದಾಗ ಪೋಷಕರು ಬಾಲಕಿಯನ್ನು ಮಂಚದ ಕೆಳಗೆ ಬಚ್ಚಿಟ್ಟಿರುವ ನಾಟಕೀಯ ಬೆಳವಣಿಗೆಯೂ ನಡೆದಿದೆ. ಅಲ್ಲದೆ ಈ ಸಂಬಂಧ ವಿಜಯನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 

PREV
click me!

Recommended Stories

ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ
Bengaluru Weather: ರಾಜ್ಯಕ್ಕೆ ಈಶಾನ್ಯ ಮಾರುತ- ದಶಕದ ದಾಖಲೆಯ ಚಳಿಗೆ ಸಿದ್ಧರಾಗಿ; ಬೆಂಗಳೂರು ಸ್ಥಿತಿ ಏನು ನೋಡಿ!