ಗದಗ ಭೀಕರ ಅಪಘಾತಕ್ಕೆ ಇಬ್ಬರು ಪೊಲೀಸ್ ಸಿಬ್ಬಂದಿ ಬಲಿ, ಕ್ಷಣಾರ್ಧದಲ್ಲಿ ನಡೆದ ದುರಂತ! ನಿರ್ವಾಹಕ ಬಿಚ್ಚಿಟ್ಟ ಭೀಕರ ಘಟನೆ

Published : Sep 19, 2025, 04:28 PM IST
Gadag road accident

ಸಾರಾಂಶ

ಗದಗ ತಾಲೂಕಿನ ಹರ್ಲಾಪೂರ ಬಳಿ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿ ಸೇರಿದಂತೆ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಿಯಂತ್ರಣ ತಪ್ಪಿದ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ.

ಗದಗ: ಗದಗ ತಾಲೂಕಿನ ಹರ್ಲಾಪೂರ ಗ್ರಾಮದ ಬಳಿ ಸಂಭವಿಸಿದ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿ ಸೇರಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದರು. ಕೊಪ್ಪಳದಿಂದ ಗದಗ ಕಡೆಗೆ ಬರುತ್ತಿದ್ದ ಕಾರು ಏಕಾಏಕಿ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ನಂತರ ಕಾರು ಎದುರು ದಿಕ್ಕಿನಿಂದ ಬರುತ್ತಿದ್ದ ಗೋವಾ ಸಾರಿಗೆ ಬಸ್‌ಗೆ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದರು. ಮೃತರನ್ನು ಪೊಲೀಸ್ ಸಿಬ್ಬಂದಿಗಳಾದ ಅರ್ಜುನ ನೆಲ್ಲೂರ (29) ಮತ್ತು ವೀರೇಶ ಉಪ್ಪಾರ (31) ಹಾಗೂ ಸಹ ಪ್ರಯಾಣಿಕ ರವಿ ನೆಲ್ಲೂರ (43) ಎಂದು ಗುರುತಿಸಲಾಗಿದೆ. ಘಟನೆಯ ದಿನ ವೀರೇಶ ಉಪ್ಪಾರ ತಮ್ಮ ಸಹೋದರಿಯ ಹಿಟ್ನಾಳ ಗ್ರಾಮದ ಮನೆಗೆ ತೆರಳಿ, ಅಲ್ಲಿಂದ ವಾಪಾಸ್ ಆಗುತ್ತಿದ್ದ ವೇಳೆ ಈ ದುರಂತ ಸಂಭವಿಸಿತ್ತು.

  • ಅರ್ಜುನ ನೆಲ್ಲೂರ – ಹಾವೇರಿ ಜಿಲ್ಲಾ ಪೊಲೀಸ್ ಇಲಾಖೆಯ ವೈಯರ್‌ಲೆಸ್ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿದ್ದರು.
  • ವೀರೇಶ ಉಪ್ಪಾರ – ಕೊಪ್ಪಳ ಜಿಲ್ಲಾ ಪೊಲೀಸ್ ಇಲಾಖೆಯ ವೈಯರ್‌ಲೆಸ್ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
  • ರವಿ ನೆಲ್ಲೂರ – ಸಹ ಪ್ರಯಾಣಿಕ, ಅರ್ಜುನ್ ಅವರ ಸಂಬಂಧಿ, ಹಾವೇರಿ ಜಿಲ್ಲೆಯ ಹುನಗುಂದ ಗ್ರಾಮದ ನಿವಾಸಿ.

ಅಪಘಾತದ ಬಗ್ಗೆ ಮಾಹಿತಿ ಬಿಚ್ಚಿಟ್ಟ ನಿರ್ವಾಹಕ

ಗೋವಾ ಸಾರಿಗೆ ಬಸ್ ನಿರ್ವಾಹಕ ಹಿರೇಶ್ ಹಿರೇಮಠ ಅಪಘಾತದ ಭೀಕರತೆ ಬಗ್ಗೆ ವಿವರಿಸಿದ್ದು, ಕಾರ್ ಅತಿವೇಗದಲ್ಲಿ ಬರುತ್ತಿತ್ತು. ಏಕಾಏಕಿ ಡಿವೈಡರ್‌ಗೆ ಡಿಕ್ಕಿಹೊಡೆದು ನಂತರ ನೇರವಾಗಿ ನಮ್ಮ ಬಸ್‌ಗೆ ಡಿಕ್ಕಿಯಾಯಿತು. ಕಾರಿನಲ್ಲಿದ್ದ ಮೂವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು ತಕ್ಷಣವೇ ಮೃತಪಟ್ಟರು ಎಂದು ಹೇಳಿದ್ದಾರೆ. ಅಪಘಾತದ ದೃಶ್ಯವನ್ನು ನೋಡಿದ ಬಸ್ ಚಾಲಕ ಹಾಗೂ ಸಿಬ್ಬಂದಿ ತೀವ್ರ ಆಘಾತಕ್ಕೊಳಗಾಗಿದ್ದರು. ಸ್ಥಳಕ್ಕೆ ತಕ್ಷಣವೇ ಪೊಲೀಸರು ಆಗಮಿಸಿ ಮೃತದೇಹಗಳನ್ನು ಕಾರಿನಿಂದ ಹೊರತೆಗೆದರು ಮತ್ತು ಸ್ಥಳ ಪರಿಶೀಲನೆ ನಡೆಸಿದರು. ಈ ಘಟನೆ ಗದಗ ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ತೀವ್ರ ದುಃಖವನ್ನುಂಟುಮಾಡಿದೆ. ಕರ್ತವ್ಯ ನಿರ್ವಹಿಸುತ್ತಿದ್ದ ಇಬ್ಬರು ಯುವ ಪೊಲೀಸ್ ಸಿಬ್ಬಂದಿ ಅಪಘಾತದಲ್ಲಿ ಮೃತಪಟ್ಟಿರುವುದು ಇಲಾಖೆಗೆ ತುಂಬಾ ಆಘಾತ ತಂದಿದೆ.

ಘಟನೆ ಹಿನ್ನೆಲೆ

ಕೊಪ್ಪಳದಿಂದ ಗದಗ ಕಡೆಗೆ ಬರುತ್ತಿದ್ದ ಕಾರು ನಿಯಂತ್ರಣ ತಪ್ಪಿ ಮೊದಲು ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಬಳಿಕ ಎದುರು ದಿಕ್ಕಿನಿಂದ ಪಣಜಿಯಿಂದ ಹೊಸಪೇಟೆ ಕಡೆಗೆ ಹೊರಟಿದ್ದ ಗೋವಾ ಸಾರಿಗೆ ಬಸ್‌ಗೆ ಕಾರು ನೇರವಾಗಿ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದೆ. ಘಟನೆಯ ತೀವ್ರತೆಗೆ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸ್ಥಳೀಯರ ಸಾಕ್ಷಿ

ಅಪಘಾತವನ್ನು ಕಣ್ಣಾರೆ ಕಂಡವರ ಪ್ರಕಾರ, ಕಾರು ಅತಿವೇಗದಲ್ಲಿ ಸಾಗುತ್ತಿದ್ದು, ಏಕಾಏಕಿ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿಯಾಗಿದೆ. ನಂತರ ಬಸ್‌ನ ಪಕ್ಕದ ಲೇನ್‌ಗೆ ನುಗ್ಗಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಕಾರಿನಲ್ಲೇ ಸತ್ತುಹೋಗಿದ್ದಾರೆ. ಈ ಅಪಘಾತದಲ್ಲಿ ಇಬ್ಬರು ಯುವ ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿರುವುದು ಇಲಾಖೆಗೆ ದೊಡ್ಡ ಆಘಾತ ತಂದಿದೆ. ಹಾವೇರಿ ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ಈ ಘಟನೆ ದುಃಖದ ವಾತಾವರಣ ಉಂಟು ಮಾಡಿದೆ.

PREV
Read more Articles on
click me!

Recommended Stories

ಬೆಂಗಳೂರು: ಬೈಕ್ ಗೆ ಗುದ್ದಿ ಎರಡು ಕಿಮೀ ರಸ್ತೆ ಮೇಲೆ ಬೈಕ್ ಎಳೆದೊಯ್ದ ಕಾರು ಚಾಲಕ!
ವಿಜಯಪುರದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ 5 ಎಕರೆ ಕಬ್ಬು, ಟ್ರೈಲರ್ ಬೆಂಕಿಗಾಹುತಿ! ರೈತ ಕಣ್ಣೀರು