ಡಿಸೆಂಬರ್‌ ಅಂತ್ಯಕ್ಕೆ ಬಾಗಲಕೋಟೆ-ಕುಡಚಿ ರೈಲು ಮಾರ್ಗ ಪೂರ್ಣ, ಹೊಸ ಮಾರ್ಗಗಳ ಪಟ್ಟಿ ಇಲ್ಲಿದೆ

Published : Sep 19, 2023, 09:28 AM ISTUpdated : Sep 19, 2023, 09:32 AM IST
ಡಿಸೆಂಬರ್‌ ಅಂತ್ಯಕ್ಕೆ  ಬಾಗಲಕೋಟೆ-ಕುಡಚಿ ರೈಲು ಮಾರ್ಗ ಪೂರ್ಣ, ಹೊಸ  ಮಾರ್ಗಗಳ ಪಟ್ಟಿ ಇಲ್ಲಿದೆ

ಸಾರಾಂಶ

ಬಾಗಲಕೋಟೆ-ಕುಡಚಿ ರೈಲು ಮಾರ್ಗದ ಕಾಮಗಾರಿ ತ್ವರಿತಗತಿಯಲ್ಲಿದ್ದು, ಡಿಸೆಂಬರ್‌ ಅಂತ್ಯಕ್ಕೆ ಖಜ್ಜಿಡೋಣಿ-ಲೋಕಾಪೂರ 9 ಕಿಮೀ ಮಾರ್ಗ ಪೂರ್ಣಗೊಳ್ಳಲಿದೆ ಎಂದು ಸಂಸದ ಪಿ.ಸಿ.ಗದ್ದಿಗೌಡರ ತಿಳಿಸಿದ್ದಾರೆ.

ಬಾಗಲಕೋಟೆ (ಸೆ.19): ಭೂಸ್ವಾಧೀನ ಪ್ರಕ್ರಿಯೆ ವಿಳಂಬದಿಂದಾಗಿ ಬಾಗಲಕೋಟೆ-ಕುಡಚಿ ರೈಲು ಮಾರ್ಗದ ಕಾಮಗಾರಿ ಕುಂಠಿತಗೊಂಡಿದ್ದು, ಸದ್ಯ ತ್ವರಿತಗತಿಯಲ್ಲಿ ಕೇಂದ್ರ ಸರ್ಕಾರ ಕಾಮಗಾರಿ ಕೈಗೆತ್ತಿಕೊಂಡಿದೆ. ಡಿಸೆಂಬರ್‌ ಅಂತ್ಯಕ್ಕೆ ಖಜ್ಜಿಡೋಣಿ-ಲೋಕಾಪೂರ 9 ಕಿಮೀ ಮಾರ್ಗ ಪೂರ್ಣಗೊಳ್ಳಲಿದೆ ಎಂದು ಸಂಸದ ಪಿ.ಸಿ.ಗದ್ದಿಗೌಡರ ತಿಳಿಸಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಳೆದ 9 ವರ್ಷಗಳಲ್ಲಿ ಬಾಗಲಕೋಟೆ ಮತಕ್ಷೇತ್ರದಲ್ಲಿನ ಕಾಮಗಾರಿಗಳಿಗೆ ತ್ವರಿತಗತಿಯಲ್ಲಿ ಅನುಮೋದನೆ ನೀಡುತ್ತಿದೆ. ಇದರಿಂದಾಗಿ ತ್ವರಿತಗತಿಯಲ್ಲಿ ಕಾಮಗಾರಿ ನಡೆಯುತ್ತಿವೆ. ಈಗಾಗಲೇ ಖಜ್ಜಿಡೋಣಿ-ಲೋಕಾಪೂರ ಮಾರ್ಗ ಡಿಸೆಂಬರ್‌ ಅಂತ್ಯಕ್ಕೆ ಮುಕ್ತಾಯಗೊಳ್ಳಲಿದೆ. ಲೋಕಾಪೂರ-ಯಾದವಾಡ 21 ಕಿಮೀ ಮಾರ್ಗ ಮೇ ತಿಂಗಳಲ್ಲಿ ಅವಾರ್ಡ್‌ ಆಗಿ ಕಾಮಗಾರಿ ಪ್ರಗತಿಯಲ್ಲಿ ನಡೆದಿವೆ.

ಬೈಯ್ಯಪ್ಪನಹಳ್ಳಿ- ಕೆ.ಆರ್‌.ಪುರ ಮೆಟ್ರೋ ಮಾರ್ಗದಲ್ಲಿ ಚಲಿಸುವ ಐಟಿ ಉದ್ಯೋಗಿಗಳಿಗೆ ಮತ್ತೆ ನಿರಾಸೆ

ಯಾದವಾಡ-ಜಮಖಂಡಿ 25 ಕಿ.ಮೀ ಮಾರ್ಗದ ಕಾಮಗಾರಿಗೆ ಆ.3 ರಂದು ಟೆಂಡರ್ ಕರೆಯಲಾಗಿದೆ. ಜಮಖಂಡಿ-ಜಗದಾಳ ಮಾರ್ಗ 20 ಕಿ.ಮೀ ಮತ್ತು ಜಗದಾಳ-ಹಾರೂಗೇರಿ 19 ಕಿಮೀ ಮಾರ್ಗದ ಕಾಮಗಾರಿಗೆ ಸೆಪ್ಟೆಂಬರ್‌ 9 ರಂದು ಟೆಂಡರ್ ಕರೆಯಲಾಗಿದೆ. ಮುಂಬರುವ ಹಂತದಲ್ಲಿ ಹಾರೂಗೇರಿ-ಕುಡಚಿ 18 ಕಿ.ಮೀ ಮಾರ್ಗದ ಟೆಂಡರ್‌ ಪ್ರಕ್ರಿಯೆ ಹಂತದಲ್ಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಳ್ಳಾರಿ–ಗುಂತಕಲ್ ಮಾರ್ಗವಾಗಿ ಬೆಂಗಳೂರಿಗೆ ವಂದೇ ಭಾರತ ರೈಲು, ಹೊಸಪೇಟೆಯಲ್ಲಿ ಪರಿಶೀಲನೆ

ಬಹುದಿನಗಳ ಬೇಡಿಕೆಯಾದ ಎಲ್ಸಿ ನಂ.34 ರೈಲ್ವೆ ಓವರ್ ಬ್ರಿಡ್ಜ್ (ಬಾದಾಮಿ-ಕೆರೂರ ರಸ್ತೆ) ನಿರ್ಮಾಣ ಕಾಮಗಾರಿ ಹಾಗೂ ಎಲ್ಸಿನಂ.41 ಗುಳೇದಗುಡ್ಡ ರೈಲ್ವೆ ಸ್ಟೇಷನ್ ಹತ್ತಿರ ಓವರ್ ಬ್ರಿಡ್ಜ್ ನಿರ್ಮಾಣ ಕಾಮಗಾರಿಗಳಿಗೆ ರೈಲ್ವೆ ಇಲಾಖೆಯಿಂದಲೇ ಸೆ.11 ರಂದು ಟೆಂಡರ್ ಕರೆಯಲಾಗಿದೆ. ಇವೆರಡು ಬ್ರಿಡ್ಜ್ ನಿರ್ಮಾಣಕ್ಕೆ ₹76.12 ಕೋಟಿ ಅನುದಾನ ಮಂಜೂರಾಗಿದೆ.

ಕೈಗೆತ್ತಿಕೊಳ್ಳಲಾದ ಹೊಸ ರೈಲು ಮಾರ್ಗ:  ಆಲಮಟ್ಟಿ-ಚಿತ್ರದುರ್ಗ (ವಾಯಾ ಕೂಡಲಸಂಗಮ, ಇಳಕಲ್ಲ, ಕೊಪ್ಪಳ ಮಾರ್ಗವಾಗಿ) ಹೊಸದಾಗಿ ರೈಲು ಮಾರ್ಗ ನಿರ್ಮಾಣ ಮಾಡಲು ಸರ್ವೆ ಕಾರ್ಯ ಪೂರ್ಣಗೊಂಡಿದೆ. ಅದೇ ರೀತಿ ಯಲಬುರ್ಗಾ-ಗಜೇಂದ್ರಗಡ-ಬಾದಾಮಿ ಮಾರ್ಗ ನಿರ್ಮಾಣದ ಸರ್ವೆ ಕಾರ್ಯಕ್ಕೆ ಟೆಂಡರ್ ಕರೆಯಲಾಗಿದೆ. ದರೋಜಿ-ಬಾಗಲಕೋಟೆ ಹೊಸ ಮಾರ್ಗ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಅಮೃತ ಭಾರತ ಯೋಜನೆಯಡಿ ಬಾದಾಮಿ ಮತ್ತು ಬಾಗಲಕೋಟೆ ರೈಲ್ವೆ ನಿಲ್ದಾಣಗಳನ್ನು ಉನ್ನತೀಕರಿಸಲಾಗುತ್ತಿದೆ ಎಂದು ಸಂಸದ ಪಿ.ಸಿ.ಗದ್ದಿಗೌಡರ ತಿಳಿಸಿದ್ದಾರೆ.

PREV
Read more Articles on
click me!

Recommended Stories

ಹಿಂದೂಗಳು ಒಂದಾಗದಿದ್ರೆ ದೇಶ, ಸಂವಿಧಾನ ಉಳಿಯಲ್ಲ: ಶಾಸಕ ಬಸನಗೌಡ ಪಾಟೀಲ ಯತ್ನಾಳ
ಗೃಹ ಲಕ್ಷ್ಮೀ ಅಡಿ 1.24 ಕೋಟಿ ಸ್ತ್ರೀಯರಿಗೆ ₹1.54 ಕೋಟಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್