ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!

ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!

Published : Jun 08, 2026, 06:18 PM IST
ಗಂಗಮ್ಮನಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಸುಳಿವಿರದ ಕೊಲೆ ಪ್ರಕರಣವನ್ನು ಪೊಲೀಸರು ಒಂದು ತಿಂಗಳ ನಂತರ ಭೇದಿಸಿದ್ದಾರೆ. ಕೊಲೆಗೂ ಮುನ್ನ ಹಂತಕರು ಮಾಡಿದ್ದ ಒಂದು 'ಫೋನ್-ಪೇ' ವಹಿವಾಟಿನ ಜಾಡು ಹಿಡಿದು, ಸ್ನೇಹಿತರೇ ಆಗಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಂಗಳೂರು: ರಾಜಧಾನಿಯ ಗಂಗಮ್ಮನಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಆ ಒಂದು ಭೀಕರ ಕೊಲೆ ಪ್ರಕರಣ ಇಡೀ ಪೊಲೀಸ್ ಇಲಾಖೆಗೆ ದೊಡ್ಡ ಸವಾಲಾಗಿತ್ತು. ಸುಳಿವೇ ಇಲ್ಲದ ಆ ಕೇಸ್‌ಗೆ ಈಗ ತಿಂಗಳ ನಂತರ ದೊಡ್ಡ ಟ್ವಿಸ್ಟ್ ಸಿಕ್ಕಿದ್ದು, ಪೊಲೀಸರ ಚಾಣಾಕ್ಷತನದಿಂದ ಹಂತಕರು ಈಗ ಕಂಬಿ ಎಣಿಸುತ್ತಿದ್ದಾರೆ.

ಏನಿದು ಪ್ರಕರಣ?
ಸುಮಾರು ಒಂದು ತಿಂಗಳ ಹಿಂದೆ ಗಂಗಮ್ಮನಗುಡಿ ವ್ಯಾಪ್ತಿಯ ನಿರ್ಜನ ಪ್ರದೇಶದ ಲೇಔಟ್ ಒಂದರಲ್ಲಿ ಮೂಟೆ ಕಟ್ಟಿದ ಸ್ಥಿತಿಯಲ್ಲಿ ಕೊಳೆತ ಮೃತದೇಹವೊಂದು ಪತ್ತೆಯಾಗಿತ್ತು. ಮೃತದೇಹ ಸಿಗುವ ಮುನ್ನವೇ ನಾಲ್ಕು ದಿನಗಳು ಕಳೆದಿದ್ದರಿಂದ ಶವ ಗುರುತು ಸಿಗದಷ್ಟು ವಿರೂಪಗೊಂಡಿತ್ತು. ಸತ್ತವನು ಯಾರು? ಕೊಂದವರು ಯಾರು? ಎಂಬ ಯಾವ ಸುಳಿವು ಪೊಲೀಸರ ಬಳಿ ಇರಲಿಲ್ಲ.

ಪೊಲೀಸರ ಹಗಲು-ರಾತ್ರಿ ಕಾರ್ಯಾಚರಣೆ:
ಈ ಸವಾಲನ್ನು ಕೈಗೆತ್ತಿಕೊಂಡ ಇನ್ಸ್‌ಪೆಕ್ಟರ್ ರಘು ಪ್ರಸಾದ್ ಮತ್ತು ಅವರ ತಂಡ ಸುಮಾರು 500ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮೆರಾಗಳನ್ನು ಜಾಲಾಡಿದೆ. ಆದರೂ ಹಂತಕರ ಸುಳಿವು ಮಾತ್ರ ಸಿಕ್ಕಿರಲಿಲ್ಲ. ಆದರೆ ಪೊಲೀಸರು ಮಾತ್ರ ಪಟ್ಟು ಬಿಡದೆ ತನಿಖೆ ಮುಂದುವರಿಸಿದ್ದರು.

ಬಾರ್ ಬಿಲ್ ನೀಡಿದ ‘ಡಿಜಿಟಲ್’ ಸುಳಿವು:
ತನಿಖೆಯ ವೇಳೆ ಹಂತಕರು ಕೊಲೆ ಮಾಡುವ ಮೊದಲು ಬಾರ್ ಒಂದರಲ್ಲಿ ಎಣ್ಣೆ ಪಾರ್ಟಿ ಮಾಡಿದ್ದ ವಿಚಾರ ಬೆಳಕಿಗೆ ಬಂದಿದೆ. ಅಲ್ಲಿ ಹಂತಕರು ಕುಡಿದ ನಶೆಯಲ್ಲಿದ್ದರೂ, ಬಿಲ್ ಪಾವತಿಸಲು 'ಫೋನ್-ಪೇ' (PhonePe) ಬಳಸಿದ್ದರು. ಈ ಒಂದು ಸಣ್ಣ ಡಿಜಿಟಲ್ ಟ್ರಾನ್ಸಾಕ್ಷನ್ ಪೊಲೀಸರಿಗೆ ಹಂತಕರ ವಿಳಾಸ ತಲುಪಲು ದಾರಿಯಾಯಿತು. ಆ ಫೋನ್-ಪೇ ನಂಬರ್ ಬೆನ್ನತ್ತಿದ ಪೊಲೀಸರಿಗೆ ಆರೋಪಿಗಳ ಪೂರ್ಣ ಮಾಹಿತಿ ಲಭ್ಯವಾಯಿತು.

ಕೊಲೆಗೆ ಕಾರಣವೇನು?
ಬಂಧಿತ ಆರೋಪಿಗಳು ಮತ್ತು ಮೃತ ವ್ಯಕ್ತಿ ಒಂದೇ ಊರಿನಿಂದ ಕೆಲಸ ಹುಡುಕಿಕೊಂಡು ಬೆಂಗಳೂರಿಗೆ ಬಂದಿದ್ದರು. ಗಂಗಮ್ಮನಗುಡಿ ಬಳಿ ಒಂದೇ ರೂಮಿನಲ್ಲಿ ವಾಸವಾಗಿದ್ದ ಇವರು, ಪ್ರತಿದಿನ ರಾತ್ರಿ ಪಾರ್ಟಿ ಮಾಡುತ್ತಿದ್ದರು. ಅಂದು ಪಾರ್ಟಿ ಮಾಡುವಾಗ ಸಣ್ಣ ವಿಷಯಕ್ಕೆ ಜಗಳ ನಡೆದಿದೆ. ಜಗಳ ವಿಕೋಪಕ್ಕೆ ಹೋದಾಗ ಸ್ನೇಹಿತರೇ ಬಿಯರ್ ಬಾಟಲಿಯಿಂದ ತಲೆಗೆ ಹೊಡೆದು ಆತನನ್ನು ಸಾಯಿಸಿದ್ದಾರೆ. ನಂತರ ಗಾಬರಿಯಾದ ಅವರು ಸಾಕ್ಷ್ಯ ನಾಶಪಡಿಸಲು ಮೃತದೇಹವನ್ನು ಮೂಟೆ ಕಟ್ಟಿ ಲೇಔಟ್‌ನಲ್ಲಿ ಎಸೆದು ರಾತ್ರೋರಾತ್ರಿ ಊರಿಗೆ ಪರಾರಿಯಾಗಿದ್ದರು.

ಯಾವುದೇ ಸುಳಿವೇ ಇಲ್ಲದ ಈ ಕೇಸ್ ಅನ್ನು ಅದ್ಭುತವಾಗಿ ಭೇದಿಸಿದ ಗಂಗಮ್ಮನಗುಡಿ ಪೊಲೀಸರ ಕಾರ್ಯಕ್ಕೆ ಈಗ ಸಾರ್ವಜನಿಕ ವಲಯದಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more