ಪಾದಯಾತ್ರಿಗಳಿಂದ ಪಶ್ಚಿಮ ಘಟ್ಟಗಳ ಸಾಲು ಚಾರ್ಮಾಡಿ ಘಾಟಿಯಲ್ಲಿ ರಾಶಿ-ರಾಶಿ ಕಸ!

Published : Feb 18, 2023, 10:26 PM IST
ಪಾದಯಾತ್ರಿಗಳಿಂದ ಪಶ್ಚಿಮ ಘಟ್ಟಗಳ ಸಾಲು ಚಾರ್ಮಾಡಿ ಘಾಟಿಯಲ್ಲಿ ರಾಶಿ-ರಾಶಿ ಕಸ!

ಸಾರಾಂಶ

ಶಿವರಾತ್ರಿ ಹಬ್ಬದ ಹಿನ್ನೆಲೆ ಚಾರ್ಮಾಡಿ ಘಾಟಿ ಮೂಲಕ ಧರ್ಮಸ್ಥಳಕ್ಕೆ ಪಾದಯಾತ್ರೆ ಹೊರಟ ಸಾವಿರಾರು ಭಕ್ತರಿಂದ ಚಾರ್ಮಾಡಿ ಘಾಟಿಯ ಅಪರೂಪದ ಸಸ್ಯ ಸಂಪತ್ತಿನ ಸಾಲು ಪಶ್ಚಿಮ ಘಟ್ಟಗಳ ಸಾಲಿನಲ್ಲಿ ರಾಶಿ-ರಾಶಿ ಕಸ ಸಂಗ್ರಹವಾಗಿದ್ದು, ಸ್ಥಳಿಯರು ಸರ್ಕಾರ ಹಾಗೂ ಪಾದಯಾತ್ರಿಗಳ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. 

ವರದಿ : ಆಲ್ದೂರು ಕಿರಣ್ ಏಷ್ಯಾನೆಟ್ ಸುವರ್ಣ ನ್ಯೂಸ್

ಚಿಕ್ಕಮಗಳೂರು (ಫೆ.18): ಶಿವರಾತ್ರಿ ಹಬ್ಬದ ಹಿನ್ನೆಲೆ ಜಿಲ್ಲೆಯ ಚಾರ್ಮಾಡಿ ಘಾಟಿ ಮೂಲಕ ಧರ್ಮಸ್ಥಳಕ್ಕೆ ಪಾದಯಾತ್ರೆ ಹೊರಟ ಸಾವಿರಾರು ಭಕ್ತರಿಂದ ಚಾರ್ಮಾಡಿ ಘಾಟಿಯ ಅಪರೂಪದ ಸಸ್ಯ ಸಂಪತ್ತಿನ ಸಾಲು ಪಶ್ಚಿಮ ಘಟ್ಟಗಳ ಸಾಲಿನಲ್ಲಿ ರಾಶಿ-ರಾಶಿ ಕಸ ಸಂಗ್ರಹವಾಗಿದ್ದು, ಸ್ಥಳಿಯರು ಸರ್ಕಾರ ಹಾಗೂ ಪಾದಯಾತ್ರಿಗಳ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. 

ಚಾರ್ಮಾಡಿ ಘಾಟಿಯಲ್ಲಿ ಟನ್‌ಗಟ್ಟಲೆ ಕಸ ಸಂಗ್ರಹ :
ಶಿವರಾತ್ರಿಯಂದು ಧರ್ಮಸ್ಥಳ ತಲುಪಬೇಕು ಅಂತ ಕಳೆದೊಂದು ತಿಂಗಳಿನಿಂದಲೂ ರಾಜ್ಯದ ಮೂಲೆ-ಮೂಲೆಗಳಿಂದ ಸಾವಿರಾರು ಭಕ್ತರು ಪಾದಯಾತ್ರೆ ಆರಂಭಿಸಿದ್ದರು. ಕಳೆದೊಂದು ವಾರದಿಂದ ಅವರೆಲ್ಲರೂ ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಗೆ ಬಂದು ಧರ್ಮಸ್ಥಳ ಸೇರಿದ್ದಾರೆ. ನಿತ್ಯ ಸಾವಿರಾರು ಜನ ಪಾದಯಾತ್ರಿಗಳು ಕೊಟ್ಟಿಗೆಹಾರ, ಚಾರ್ಮಾಡಿ ಘಾಟಿಯಲ್ಲಿ ಸಂದಿಸುತ್ತಿದ್ದರು. ಆದರೆ, ಪಾದಯಾತ್ರಿಗಳು ಬರುತ್ತಾರೆ ಎಂದು ಸ್ಥಳಿಯರು ಹಾಗೂ ದಾನಿಗಳು ಅವರಿಗೆ ಮೂಲಭೂತ ಸೌಲಭ್ಯಗಳನ್ನ ಕಲ್ಪಿಸುತ್ತಿದ್ದರು. ಊಟ, ತಿಂಡಿ, ನೀರು, ಎಲ್ಲಾ ರೀತಿ ವ್ಯವಸ್ಥೆ ಮಾಡುತ್ತಿದ್ದರು. ಪಾದಯಾತ್ರಿಗಳು ಕೂಡ ಊಟ-ತಿಂಡಿ ವ್ಯವಸ್ಥೆ ಮಾಡಿಕೊಳ್ಳುತ್ತಿದ್ದಾರೆ. ಆದರೆ, ಸೌಲಭ್ಯ ಕಲ್ಪಿಸುವರು ಹಾಗೂ ಪಾದಯಾತ್ರಿಗಳು ಎಲ್ಲೆಂದರಲ್ಲಿ ಸಿಲ್ವರ್ ತಟ್ಟೆ, ಪ್ಲಾಸ್ಟಿಕ್ ಲೋಟ, ನೀರಿನ ಬಾಟಲಿ ಎಸೆದಿರೋದ್ರಿಂದ ಚಾರ್ಮಾಡಿ ಘಾಟಿಯಲ್ಲಿ ಟನ್‌ಗಟ್ಟಲೆ ಕಸ ಸಂಗ್ರಹವಾಗಿದೆ.

ಚಾರ್ಮಾಡಿ ಘಾಟ್ ನಲ್ಲಿರುವ ದೇವರಿಗೆ ನಿತ್ಯ ಶಾಸ್ತ್ರೋಕ್ತ ಪೂಜೆಗೆ ಸ್ಥಳೀಯರ ಒತ್ತಾಯ

ಇದನ್ನೆಲ್ಲಾ ಕಂಡು ಸ್ಥಳಿಯರು ಪಾದಯಾತ್ರಿಗಳು ದೇವರು ನೋಡಲೆಂದು ಹೋಗುತ್ತಿದ್ದಾರೆ. ಆದರೆ, ಸೂಕ್ಷ್ಮ ಪ್ರದೇಶದಲ್ಲಿ ಈ ರೀತಿ ರಸ್ತೆಯುದ್ಧಕ್ಕೂ ಗಲೀಜು ಮಾಡಿಕೊಂಡು ಹೋದರೆ ಹೇಗೆಂದು ಪ್ರಶ್ನಿಸಿದ್ದಾರೆ. ಸ್ಥಳಯ ಪಂಚಾಯತಿ, ತಾಲೂಕು ಆಡಳಿತ, ಜಿಲ್ಲಾಡಳಿತ ಕೂಡ ಇತ್ತ ಗಮನ ಹರಿಸದಿರೋದು ದುರಂತ. ಇದು ಪ್ರತಿ ವರ್ಷದ ಕಥೆ. ಕಳೆದ ಹಲವು ವರ್ಷಗಳಿಂದಲೂ ಸರ್ಕಾರಕ್ಕೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ.

ಶಿವರಾತ್ರಿ ಪಾದಯಾತ್ರೆ ಮಧ್ಯೆ ಕುಡುಕನ ಅವಾಂತರ, ಚಾರ್ಮಾಡಿ ಘಾಟಿಯಲ್ಲಿ ಕುಡುಕನ ಕಿರಿಕ್!

 ಹಾಗಾಗಿ, ಸರ್ಕಾರ ಇನ್ನಾದರೂ ಸೂಕ್ತ ಕ್ರಮಕೈಗೊಳ್ಳಬೇಕೆಂದು ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಪಾದಯಾತ್ರಿಗಳು ಕಸವನ್ನ ಎಲ್ಲೆಂದರಲ್ಲಿ ಎಸೆಯಬಾರದು. ಊಟ-ತಿಂಡಿಯ ಸೌಲಭ್ಯ ಕಲ್ಪಿಸುವವರು ಕೂಡ ಕಸವನ್ನ ಎಸೆಯಲು ಸೂಕ್ತ ವ್ಯವಸ್ಥೆ ಮಾಡಬೇಕು. ಆಗ, ಈ ರೀತಿಯ ವಾತಾವರಣ ನಿರ್ಮಾಣವಾಗುವುದಿಲ್ಲ ಎಂದು ಮನವಿ ಮಾಡಿದ್ದಾರೆ.ಅರಣ್ಯ ಇಲಾಖೆ, ಪೊಲೀಸ್ ಹೆದ್ದಾರಿ ಪ್ರಾಧಿಕಾರವೂ ಹೀಗೆ ಎಲ್ಲೆಂದರಲ್ಲಿ ಕಸ ಸುರಿಯುವುದನ್ನ ತಪ್ಪಿಸಲು ಸೂಕ್ತ ಕ್ರಮಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ. ಆದರೆ, ಭಕ್ತರ ಮನಸ್ಸಿನಲ್ಲಿಯೇ ಒಳ್ಳೆಯ ಭಾವನೆ ಮೂಡದಿದ್ದರೆ. ಯಾರು ಏನೇ ಮಾಡಿದರೂ ಕಸವನ್ನ ತಡೆಯಲು ಆಗುವುದಿಲ್ಲ. ಪಾದಯಾತ್ರಿ ಭಕ್ತರ ಮನಸ್ಸಲ್ಲೇ ಬದಲಾವಣೆಯಾಗಬೇಕು ಅಷ್ಟೆ.

PREV
click me!

Recommended Stories

ಹೊಳೆನರಸೀಪುರದ ಲಕ್ಷ್ಮಿನರಸಿಂಹ ಸ್ವಾಮಿ ರಥೋತ್ಸವ: ರಥದ ಅಲಂಕಾರದಲ್ಲಿ ರಾಜಕೀಯ:ಶ್ರೇಯಸ್ ಪಟೇಲ್ ವಿರುದ್ಧ JDS ಕಾರ್ಯಕರ್ತರ ಆಕ್ರೋಶ
ಇರಾನ್ ದಾಳಿಯ ಸಾವಿನ ದವಡೆಯಿಂದ ಪಾರಾಗಿ ಬೆಂಗಳೂರಿಗೆ ಬಂದಿಳಿದ 230 ಕನ್ನಡಿಗರು; ಬಾಂಬ್ ಬೀಳುವ ಅನುಭವ ಬಿಚ್ಚಿಟ್ಟರು!