ವಿಜಯಪುರ: ಕ್ವಾರಂಟೈನ್‌ಗೆ ಒಪ್ಪದ ಯುವತಿ, ಅಧಿಕಾರಿಗಳ ಜೊತೆ ಕಿರಿಕ್‌

Kannadaprabha News   | Asianet News
Published : Jun 06, 2020, 10:40 AM ISTUpdated : Jun 06, 2020, 10:41 AM IST
ವಿಜಯಪುರ: ಕ್ವಾರಂಟೈನ್‌ಗೆ ಒಪ್ಪದ ಯುವತಿ, ಅಧಿಕಾರಿಗಳ ಜೊತೆ ಕಿರಿಕ್‌

ಸಾರಾಂಶ

ಕ್ವಾರಂಟೈನ್‌ಗೆ ಹೋಗಲು ಮಹಿಳೆ ತಕರಾರು| ಮುಂಬೈ​​-ಗದಗ ರೈಲಿನಿಂದ ವಿಜಯಪುರಕ್ಕೆ ಬಂದಿಳಿದ ಯುವತಿ| ಲಾಕ್‌ಡೌನ್‌ ಸಂದರ್ಭದಲ್ಲಿ ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ರೈಲ್ವೆ ಇಲಾಖೆಯಲ್ಲಿ ಕೆಲಸ ಮಾಡುವ ಚಿಕ್ಕಪ್ಪನ ಮನೆಯಲ್ಲಿದ್ದ ಯುವತಿ|

ವಿಜಯಪುರ(ಜೂ.06): ಮುಂಬೈ​​-ಗದಗ ರೈಲಿನಿಂದ ವಿಜಯಪುರಕ್ಕೆ ಬಂದಿಳಿದ ಯುವತಿ ಹಾಗೂ ಮಹಿಳೆಯೊಬ್ಬರು ಕ್ವಾರಂಟೈನ್‌ ಬೇಡ ಎಂದು ಅಧಿಕಾರಿಗಳ ಜೊತೆ ಕಿರಿಕ್‌ ಮಾಡಿದ ಪ್ರಸಂಗ ಶುಕ್ರವಾರ ನಗರದಲ್ಲಿ ನಡೆದಿದೆ. 

ಮಹಾರಾಷ್ಟ್ರದಿಂದ ರೈಲಿನಲ್ಲಿ ಆಗಮಿಸಿದ ಎಲ್ಲರಿಗೂ ಸಾಂಸ್ಥಿಕ ಕ್ವಾರಂಟೈನ್‌ ಮಾಡಲಾಗುತ್ತಿದೆ. ಆದರೆ ಯುವತಿಯೊಬ್ಬಳು ತಮ್ಮ ಚಿಕ್ಕಪ್ಪನೊಂದಿಗೆ ಮನೆಗೆ ತೆರಳುವವಳಿದ್ದರು. ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ರೈಲ್ವೆ ಇಲಾಖೆಯಲ್ಲಿ ಕೆಲಸ ಮಾಡುವ ಚಿಕ್ಕಪ್ಪನ ಮನೆಯಲ್ಲಿ ಈ ಯುವತಿ ಲಾಕ್‌ಡೌನ್‌ ವೇಳೆ ಉಳಿದುಕೊಂಡಿದ್ದರು. 

ವಿಜಯಪುರ: ಬೋನಿಗೆ ಬಿದ್ದ ಚಿರತೆ, ನಿಟ್ಟುಸಿರು ಬಿಟ್ಟ ಜನತೆ

ಹೀಗಾಗಿ ಯುವತಿಯನ್ನು ಅಧಿಕಾರಿಗಳು ಕ್ವಾರಂಟೈನ್‌ ಮಾಡಲು ಮುಂದಾಗಿದ್ದಾರೆ. ಆಗ ಆಕೆಯ ಚಿಕ್ಕಪ್ಪ ಇದಕ್ಕೆ ತಕರಾರು ತೆಗೆದು, ನನ್ನ ಮಗಳನ್ನು ಸಾಂಸ್ಥಿಕ ಕ್ವಾರಂಟೈನ್‌ಗೆ ಒಳಪಡಿಸುವುದು ಬೇಡ. ಮನೆಯಲ್ಲಿಯೇ ಕ್ವಾರಂಟೈನ್‌ ಮಾಡಲಾಗುವುದು ಎಂದರು. ಕೊನೆಯಲ್ಲಿ ಅಧಿಕಾರಿಗಳ ಎಚ್ಚರಿಕೆಗೆ ಮಣಿದ ಯುವತಿ ಸಾಂಸ್ಥಿಕ ಕ್ವಾರಂಟೈನ್‌ಗೆ ಒಪ್ಪಿದ್ದಾಳೆ.

PREV
click me!

Recommended Stories

ತುಮಕೂರಿನಲ್ಲಿ ಉದ್ಯಮಿಗೆ ಲಂಚಕ್ಕೆ ಬೇಡಿಕೆ; ಇಬ್ಬರು ಭ್ರಷ್ಟ ಅಧಿಕಾರಿಗಳು ಲೋಕಾಯುಕ್ತ ಬಲೆಗೆ!
ಮಂಡ್ಯಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ರಾಜಕೀಯ ಹೊಸ ದಾಳ ಉರುಳಿಸಿದ ದಳಪತಿ!