ಮಕ್ಕಳು ಚರಂಡಿ ನೀರಿನಲ್ಲಿ ತಟ್ಟೆ ತೊಳೆದ ಪ್ರಕರಣ: ಸಮರ್ಪಕ ಉತ್ತರ ನೀಡದ ಶಿಕ್ಷಕಿಗೆ ಶಿಕ್ಷೆ

Published : Feb 01, 2026, 08:04 AM IST
Jamakhandi Govt School

ಸಾರಾಂಶ

ಜಮಖಂಡಿ ತಾಲೂಕಿನ ಆಲಬಾಳ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳು ಚರಂಡಿ ನೀರಿನಲ್ಲಿ ತಟ್ಟೆ ತೊಳೆದ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಹಶಿಕ್ಷಕಿ ನಂದಾ ಕುಲಕರ್ಣಿ ಅವರನ್ನು ಅಮಾನತುಗೊಳಿಸಲಾಗಿದೆ. 

ಬಾಗಲಕೋಟೆ: ಜಮಖಂಡಿ ತಾಲೂಕಿನ ಆಲಬಾಳ ಗ್ರಾಮದ ಸರ್ಕಾರಿ ಶಾಲೆಯ ಮಕ್ಕಳು ತಟ್ಟೆ ನೀರಲ್ಲಿ ತೊಳೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಸಹಶಿಕ್ಷಕಿ ನಂದಾ ಕುಲಕರ್ಣಿ ಅವರನ್ನು ಅಮಾನತು ಮಾಡಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಆದೇಶ ಹೊರಡಿಸಿದ್ದಾರೆ.

ಇತ್ತೀಚೆಗೆ ಆಲಬಾಳ ಗ್ರಾಮದ ಸರ್ಕಾರಿ ಶಾಲೆಯ ಮಕ್ಕಳು ಶಾಲೆ ಪಕ್ಕದ ಚರಂಡಿ ನೀರಿನಲ್ಲಿ ಊಟದ ತಟ್ಟೆ ತೊಳೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಮಾಧ್ಯಮಗಳಲ್ಲೂ ಸುದ್ದಿ ಪ್ರಕಟವಾಗಿ ರಾಜ್ಯಾದ್ಯಂತ ಸದ್ದು ಮಾಡಿತ್ತು. ಶುಕ್ರವಾರ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ ಕೋಸುಂಬೆ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಶಿಕ್ಷಕಿ ವಿರುದ್ಧ ಕ್ರಮಕ್ಕೆ ಸೂಚನೆ ನೀಡಿದ್ದರು. 

ಸಮರ್ಪಕ ಉತ್ತರ ನೀಡದ ಹಿನ್ನೆಲೆ ಅಮಾನತು ಕ್ರಮ

ಸಾಮಾಜಿಕ ಜಾಲತಾಣ, ಮಾಧ್ಯಮಗಳ ವರದಿ ಆಧರಿಸಿ ಕರ್ನಾಟಕ ನಾಗರಿಕ ಸೇವಾ ಅಧಿನಿಯಮ 1957 ನಿಯಮ 10(01) ರ ಅಡಿಯಲ್ಲಿ ಕರ್ತವ್ಯ ನಿರ್ಲಕ್ಷ್ಯಕ್ಕೆ ಕಾರಣ ಕೇಳಿ ನೀಡಿದ್ದ ನೋಟಿಸ್‌ ಗೆ ಸಮರ್ಪಕ ಉತ್ತರ ನೀಡದ ಹಿನ್ನೆಲೆ ಅಮಾನತು ಕ್ರಮ ಕೈಗೊಳ್ಳಲಾಗಿದೆ.

ನ್ಯಾಯಾಧೀಶರ ಭೇಟಿ

ವಿದ್ಯಾರ್ಥಿಗಳು ಚರಂಡಿ ನೀರಲ್ಲಿ ತಟ್ಟೆ ತೊಳೆದಿದ್ದಾರೆಂಬ ಆರೋಪದ ಹಿನ್ನೆಲೆ ಆಲಬಾಳ ಗ್ರಾಮದ ಸರ್ಕಾರಿ ಶಾಲೆಗೆ ಜಮಖಂಡಿಯ ಪ್ರಧಾನ ಹಿರಿಯ ನ್ಯಾಯಾಧೀಶ ರಾಜಶೇಖರ್ ಹರಸೂರು ಭೇಟಿ ನೀಡಿ ಪರಿಶೀಲಿಸಿ ಶಿಕ್ಷಕರಿಂದ ಮಾಹಿತಿ ಪಡೆದರು. ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ ಬಸಣ್ಣವರ್ ಉಪಸ್ಥಿತರಿದ್ದರು.

ಕ್ರಮಕ್ಕೆ ಸೂಚನೆ ನೀಡಿದ್ದ ಶಿಕ್ಷಣ ಸಚಿವ

ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಆಲಬಾಳ ಗ್ರಾಮದ ಸರ್ಕಾರಿ ಶಾಲೆಯ ಮಕ್ಕಳು ಊಟ ಮಾಡಿದ ತಟ್ಟೆಯನ್ನು ಕೊಳಚೆ ನೀರಿನಲ್ಲಿ ತೊಳೆದ ಪ್ರಕರಣ ಯಾರ ನಿರ್ಲಕ್ಷ್ಯದಿಂದ ಆಗಿದೆ ಅವರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳುವಂತೆ ಇಲಾಖೆಯ ಸ್ಥಳೀಯ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಇದನ್ನೂ ಓದಿ: ಬಾದಾಮಿ ದನದ ಕೊಟ್ಟಿಗೆಗೆ ಬೆಂಕಿಹಚ್ಚಿ ಪರಾರಿಯಾದ ದುಷ್ಕರ್ಮಿಗಳು; ರೈತ ಕುಬೇರನ ಎತ್ತಿನ ಸ್ಥಿತಿ ಗಂಭೀರ

ಘಟನೆ ಸಂಬಂಧ ನಗರದಲ್ಲಿ ಶುಕ್ರವಾರ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರ ನೀಡಿ, ಶಾಲೆ ಮುಖ್ಯ ಶಿಕ್ಷಕರ ನಿರ್ಲಕ್ಷ್ಯ ಇರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಈ ಸಂಬಂಧ ಸ್ಥಳೀಯ ಬಿಇಒ ನೀಟಿಸ್‌ ನೀಡಿದ್ದು, ಶಿಕ್ಷಕರು ನೀಡುವ ಉತ್ತರದ ಮೇಲೆ ಕ್ರಮ ಜರುಗಿಸಲಾಗುತ್ತದೆ. ಶಾಲೆಯಲ್ಲೇ ನೀರಿನ ಟ್ಯಾಂಕ್‌ ಇದ್ದು ತಟ್ಟೆ ತೊಳೆಯಲುವ ವ್ಯವಸ್ಥೆ ಇದೆ. ಗಲೀಜು ನೀರಲ್ಲಿ ತಟ್ಟೆ ತೊಳೆಯುವ ಅಗತ್ಯವಿರಲಿಲ್ಲ. ಆದರೆ, ಟ್ಯಾಂಕ್‌ ಹಾಳಾಗಿದೆ ಅಂತ ಮಕ್ಕಳು ಹೊರಗೆ ಹೋಗಿ ತಟ್ಟೆ ತೊಳೆದಿದ್ದಾರೆ. ಆದರೆ, ಮೇಲ್ನೋಟಕ್ಕೆ ಆ ಮಕ್ಕಳು ತೊಳೆದಿರುವುದು ಗಲೀಜು ನೀರಿನಲ್ಲಿ ಅಲ್ಲ, ಶಾಲೆಯಲ್ಲಿನ ಫಿಲ್ಟರ್‌ ನಿಂದ ಹೊರ ಹೋಗುವ ನೀರಿನಿಂದ, ಆ ನೀರಿನ ಪೈಪ್‌ಲೈನ್‌ ಅನ್ನು ಕೊಳಚೆ ನೀರಿಗೆ ಸಂಪರ್ಕಿಸಲಾಗಿದೆ. ಅದರಲ್ಲಿ ತೊಳೆದಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೂ, ಪರಿಶೀಲಿಸಿ ನಿರ್ಲಕ್ಷ್ಯ ತೋರಿರುವ ಶಿಕ್ಷಕರ ವಿರುದ್ಧ ಕ್ರಮಕ್ಕೆ ಸೂಚಿಸಲಾಗಿದೆ ಎಂದರು.

ಇಂತಹ ಪ್ರಕರಣಗಳ ಬಗ್ಗೆ ಮುಖ್ಯ ಶಿಕ್ಷಕರು, ಎಸ್‌ಡಿಎಂಸಿಯವರು ಎಚ್ಚರ ವಹಿಸಬೇಕು. ಇನ್ನು ಮುಂದೆ ರಾಜ್ಯದ ಯಾವುದೇ ಶಾಲೆಗಳ ಅಕ್ಕ ಪಕ್ಕ ತೆರೆದ ಕೊಳಚೆ ನೀರಿನ ಸಂಪರ್ಕ, ಹರಿವು ಇರದಂತೆ ನೋಡಿಕೊಳ್ಳಲು ಸೂಚಿಸಲಾಗುವುದು. ಈ ಸಂಬಂಧ ಗ್ರಾಪಂ ಸೇರಿ ಇತರೆ ಸ್ಥಳೀಯ ಸಂಸ್ಥೆಗಳು ಕ್ರಮ ವಹಿಸಬೇಕು, ಇಲ್ಲದಿದ್ದರೆ ಶಾಲೆಯಿಂದಲೇ ಕ್ರಮ ವಹಿಸಲಾಗುವುದು ಎಂದು ಇದೇ ವೇಳೆ ಸಚಿವರು ಉತ್ತರಿಸಿದರು.

ಇದನ್ನೂ ಓದಿ: ಬಾಗಲಕೋಟೆ: ಮೇಲ್ತಂತಿ ತಗುಲಿ ಧಗಧಗ ಹೊತ್ತಿ ಉರಿದ ಟ್ರ್ಯಾಕ್ಟರ್; ಕಣ್ಣೆದುರೇ ಸುಟ್ಟು ಕರಕಲಾಯ್ತು ಅನ್ನದಾತನ ಆಸ್ತಿ!

PREV
Read more Articles on
click me!

Recommended Stories

ಒಂದು ವರ್ಷದಲ್ಲಿ ಲಕ್ಷಗಟ್ಟಲೇ ಮೆಟ್ರೋ ನಿಯಮ ಉಲ್ಲಂಘನೆ ಕೇಸ್‌ ದಾಖಲು! ನೀವು ಆ ತಪ್ಪು ಮಾಡಬೇಡಿ!
ಕೊಟ್ಟೂರು ತ್ರಿವಳಿ ಹ*ತ್ಯೆ: ಗುಂಡಿಗೆ ಶವ ಹಿಡಿಸ್ಲಿಲ್ಲ ಎಂದು ತಂದೆ ಕಾಲೇ ಕ*ತ್ತರಿಸಿದ ಪಾಪಿ ಪುತ್ರ