ಸಾರಿಗೆ ಇಲಾಖೆಯಿಂದ ಗುಡ್ ನ್ಯೂಸ್ : ಹೊಸ ಸೇವೆ ಶೀಘ್ರ ಶುರು

Suvarna News   | Asianet News
Published : Aug 16, 2020, 11:33 AM ISTUpdated : Aug 16, 2020, 12:01 PM IST
ಸಾರಿಗೆ ಇಲಾಖೆಯಿಂದ ಗುಡ್ ನ್ಯೂಸ್ : ಹೊಸ ಸೇವೆ ಶೀಘ್ರ ಶುರು

ಸಾರಾಂಶ

ಶೀಘ್ರ ಕರ್ನಾಟಕ ಸಾರಿಗೆ ಇಲಾಖೆಯಿಂದ ಹೊಸ ಸೇವೆಗಳು ಆರಂಭವಾಗಲಿವೆ. ಸಾರ್ವಜನಿರಿಗೆ ಇದರಿಂದ ಸಾಕಷ್ಟು ಅನುಕೂಲತೆ ಒದಗಲಿದೆ.

ರಾಯಚೂರು (ಆ.16): ತೀವ್ರ ಸಂಕಷ್ಟದಲ್ಲಿರುವ ಸಾರಿಗೆ ಇಲಾಖೆಯನ್ನು ಆರ್ಥಿಕ ಪುನಶ್ಚೇತನಗೊಳಿಸುವ ನಿಟ್ಟಿನಲ್ಲಿ ಹೊಸ ಯೋಜನೆಗಳನ್ನು ರೂಪಿಸಿ ಜಾರಿಗೆ ತರುತ್ತಿದ್ದು, ಆ ನಿಟ್ಟಿನಲ್ಲಿ ಇಲಾಖೆಯಿಂದ ಕೋರಿಯರ್‌ ಸೇವೆ ಆರಂಭಿಸಲಾಗುತ್ತಿದೆ. 

ಇದರ ಜೊತೆಗೆ ಬಸ್‌ಗಳಲ್ಲಿ ಸೈಕಲ್‌ ತೆಗೆದುಕೊಂಡು ಹೋಗಲು ವ್ಯವಸ್ಥೆ ಕಲ್ಪಿಸುವ ಚಿಂತನೆ ಸಾಗಿದೆ ಎಂದು ಉಪಮುಖ್ಯಮಂತ್ರಿ, ಸಾರಿಗೆ ಇಲಾಖೆ ಸಚಿವ ಲಕ್ಷ್ಮಣ ಸವದಿ ತಿಳಿಸಿದರು.

ಬೆಂಗಳೂರು ಗಲಭೆ: ಕಾಂಗ್ರೆಸ್‌ ಮುಖವಾಡ ಬಯಲು, ಡಿಸಿಎಂ ಲಕ್ಷ್ಮಣ ಸವದಿ...

ಡಿಎಆರ್‌ ಮೈದಾನದಲ್ಲಿ ರಾಷ್ಟ್ರಧ್ವಜಾರೋಹಣ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾರಿಗೆ ಸಂಸ್ಥೆಯ ಬಸ್‌ಗಳು ರಾಜ್ಯದ ಪ್ರತಿ ನಗರ, ಪಟ್ಟಣ, ಗ್ರಾಮೀಣ ಭಾಗಕ್ಕೆ ಹೋಗುತ್ತಿವೆ. ಈ ಹಿನ್ನೆಲೆಯಲ್ಲಿ ಇಲಾಖೆಯಿಂದ ಕೋರಿಯರ್‌ ಸೇವೆ ಆರಂಭಿಸಿ ಖಾಸಗಿ ಕೋರಿಯರ್‌ಗಿಂತಲೂ ವೇಗವಾಗಿ ಸೇವೆ ಒದಗಿಸಿಕೊಡಲಾಗುವುದು ಎಂದು ತಿಳಿಸಿದರು.

 ಅದೇ ರೀತಿ ಸರ್ಕಾರಿ ಬಸ್‌ಗಳಲ್ಲಿ ಸೈಕಲ್‌ಗಳನ್ನು ತೆಗೆದುಕೊಂಡು ಹೋಗಲು ಅವಕಾಶ ಕಲ್ಪಿಸಿಕೊಡಲು ಚಿಂತಿಸಲಾಗಿದೆ. ಆ ನಿಟ್ಟಿನಲ್ಲಿ ಬಸ್‌ಗಳ ಮುಂದೆ ಹಾಗೂ ಹಿಂಭಾಗದಲ್ಲಿ ಸ್ಟ್ಯಾಂಡ್‌ ಅಳವಡಿಸಲಾಗುವುದು ಎಂದು ತಿಳಿಸಿದರು.

PREV
click me!

Recommended Stories

28ರ ಜಿಮ್ ಟ್ರೈನರ್‌ಗೆ 42ರ ಮಹಿಳೆ ಜೊತೆ ಸಂಬಂಧ? ಯುವಕನ ಸಾವಿನ ಹಿಂದೆ ಆಂಟಿ ಕರಿನೆರಳು
ಆಧುನಿಕ ಆರೋಗ್ಯ ರಕ್ಷಣಾ ವ್ಯವಸ್ಥೆಗೆ ಎಐ ಬಳಕೆ: ಸಚಿವ ಡಾ. ಶರಣ ಪ್ರಕಾಶ್‌ ಪಾಟೀಲ್‌