ಬೆಂಗಳೂರು-ಮುರ್ಡೇಶ್ವರ ರೈಲಿಗೆ ಅದ್ಧೂರಿ ಸ್ವಾಗತ

Published : Oct 03, 2022, 03:00 AM IST
ಬೆಂಗಳೂರು-ಮುರ್ಡೇಶ್ವರ ರೈಲಿಗೆ ಅದ್ಧೂರಿ ಸ್ವಾಗತ

ಸಾರಾಂಶ

ವಿಶ್ವಪ್ರಖ್ಯಾತ ಪ್ರವಾಸಿತಾಣವಾದ ಮುರ್ಡೇಶ್ವರದ ಘನತೆ ಹೆಚ್ಚಿಸುವ ಈ ವಿಶೇಷ ರೈಲಿಗೆ ಮುರ್ಡೇಶ್ವರದ ನಾಗರಿಕ ವೇದಿಕೆಯ ಅಧ್ಯಕ್ಷ ಎಸ್‌.ಎಸ್‌. ಕಾಮತ್‌ ನೇತೃತ್ವದಲ್ಲಿ ಸದಸ್ಯರು, ಸಾರ್ವಜನಿಕರು ಮಾಲಾರ್ಪಣೆ ಮಾಡಿ ಪೂಜೆ ಸಲ್ಲಿಸಿದರು.

ಭಟ್ಕಳ(ಅ.03):  ಬೆಂಗಳೂರಿನಿಂದ ಮುರ್ಡೇಶ್ವರಕ್ಕೆ ಭಾನುವಾರ ಮಧ್ಯಾಹ್ನ ಆಗಮಿಸಿದ ಬೆಂಗಳೂರು-ಮುರ್ಡೇಶ್ವರ ಪ್ರಾಯೋಗಿಕ ರೈಲಿಗೆ ಮುರ್ಡೇಶ್ವರ ರೈಲ್ವೆ ನಿಲ್ದಾಣದಲ್ಲಿ ಅದ್ಧೂರಿಯಾಗಿ ಸ್ವಾಗತಿಸಲಾಯಿತು.

ವಿಶ್ವಪ್ರಖ್ಯಾತ ಪ್ರವಾಸಿತಾಣವಾದ ಮುರ್ಡೇಶ್ವರದ ಘನತೆ ಹೆಚ್ಚಿಸುವ ಈ ವಿಶೇಷ ರೈಲಿಗೆ ಮುರ್ಡೇಶ್ವರದ ನಾಗರಿಕ ವೇದಿಕೆಯ ಅಧ್ಯಕ್ಷ ಎಸ್‌.ಎಸ್‌. ಕಾಮತ್‌ ನೇತೃತ್ವದಲ್ಲಿ ಸದಸ್ಯರು, ಸಾರ್ವಜನಿಕರು ಮಾಲಾರ್ಪಣೆ ಮಾಡಿ ಪೂಜೆ ಸಲ್ಲಿಸಿದರು.

ಉತ್ತರಕನ್ನಡ: ಹವಾಮಾನ ವೈಪರೀತ್ಯ: ಸಾಂಪ್ರದಾಯಿಕ ಉಪ್ಪಿನ ಕೊರತೆ

ರೈಲಿನಲ್ಲಿ ಪ್ರಯಾಣಿಕರು ಸಾಕಷ್ಟುಸಂಖ್ಯೆಯಲ್ಲಿದ್ದರು ಎನ್ನಲಾಗಿದೆ. ಈ ವಿಶೇಷ ರೈಲನ್ನು ಬೆಂಗಳೂರಿನಿಂದ ಮುರ್ಡೇಶ್ವರಕ್ಕೆ ಪ್ರತಿದಿನ ಬಿಡುವಂತೆ ಮತ್ತು ಇದನ್ನು ಕಾರವಾರದವರೆಗೂ ವಿಸ್ತರಿಸುವಂತೆ ರೈಲ್ವೆ ಅಧಿಕಾರಿಗಳಿಗೆ ಸಾರ್ವಜನಿಕರು ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮುರ್ಡೇಶ್ವರ ನಾಗರಿಕ ಸೇವಾ ಸಮಿತಿಯ ಅಧ್ಯಕ್ಷ ಎಸ್‌.ಎಸ್‌. ಕಾಮತ್‌, ಇದೊಂದು ಪ್ರಾಯೋಗಿಕ ರೈಲಾಗಿದೆ. ಈ ವಿಶೇಷ ರೈಲನ್ನು ಮುರ್ಡೇಶ್ವರಕ್ಕೆ ಪ್ರತಿದಿನ ಓಡಿಸಬೇಕೆಂದು ಒತ್ತಾಯಿಸಲಾಗಿದೆ. ದಿನಂಪ್ರತಿ ಬೆಂಗಳೂರಿನಿಂದ ಮುರ್ಡೇಶ್ವರಕ್ಕೆ ಮತ್ತು ಮುರ್ಡೇಶ್ವರದಿಂದ ಬೆಂಗಳೂರಿಗೆ ಈ ರೈಲು ಸಂಚರಿಸಿದರೆ ಪ್ರಯಾಣಿಕರಿಗೆ, ಮುರ್ಡೇಶ್ವರಕ್ಕೆ ಬರುವ ಪ್ರವಾಸಿಗರಿಗೆ ಹೆಚ್ಚಿನ ಅನುಕೂಲವಾಗುತ್ತೆಂದರು.
 

PREV
Read more Articles on
click me!

Recommended Stories

ಬೆಂಗಳೂರು ನಗರದಲ್ಲಿ 16 ಅಕ್ರಮ ಬಾಂಗ್ಲಾದೇಶದ ನಿವಾಸಿಗಳ ಬಂಧನ
ಅಕ್ರಮ ಕಟ್ಟಡ ಪರಿಶೀಲಿಸಿ ತೆರವಿಗೆ ತಂಡ ರಚಿಸಲು ಮಹೇಶ್ವರ್ ರಾವ್ ಸೂಚನೆ