ಬೆಂಗಳೂರು-ಮುರ್ಡೇಶ್ವರ ರೈಲಿಗೆ ಅದ್ಧೂರಿ ಸ್ವಾಗತ

Published : Oct 03, 2022, 03:00 AM IST
ಬೆಂಗಳೂರು-ಮುರ್ಡೇಶ್ವರ ರೈಲಿಗೆ ಅದ್ಧೂರಿ ಸ್ವಾಗತ

ಸಾರಾಂಶ

ವಿಶ್ವಪ್ರಖ್ಯಾತ ಪ್ರವಾಸಿತಾಣವಾದ ಮುರ್ಡೇಶ್ವರದ ಘನತೆ ಹೆಚ್ಚಿಸುವ ಈ ವಿಶೇಷ ರೈಲಿಗೆ ಮುರ್ಡೇಶ್ವರದ ನಾಗರಿಕ ವೇದಿಕೆಯ ಅಧ್ಯಕ್ಷ ಎಸ್‌.ಎಸ್‌. ಕಾಮತ್‌ ನೇತೃತ್ವದಲ್ಲಿ ಸದಸ್ಯರು, ಸಾರ್ವಜನಿಕರು ಮಾಲಾರ್ಪಣೆ ಮಾಡಿ ಪೂಜೆ ಸಲ್ಲಿಸಿದರು.

ಭಟ್ಕಳ(ಅ.03):  ಬೆಂಗಳೂರಿನಿಂದ ಮುರ್ಡೇಶ್ವರಕ್ಕೆ ಭಾನುವಾರ ಮಧ್ಯಾಹ್ನ ಆಗಮಿಸಿದ ಬೆಂಗಳೂರು-ಮುರ್ಡೇಶ್ವರ ಪ್ರಾಯೋಗಿಕ ರೈಲಿಗೆ ಮುರ್ಡೇಶ್ವರ ರೈಲ್ವೆ ನಿಲ್ದಾಣದಲ್ಲಿ ಅದ್ಧೂರಿಯಾಗಿ ಸ್ವಾಗತಿಸಲಾಯಿತು.

ವಿಶ್ವಪ್ರಖ್ಯಾತ ಪ್ರವಾಸಿತಾಣವಾದ ಮುರ್ಡೇಶ್ವರದ ಘನತೆ ಹೆಚ್ಚಿಸುವ ಈ ವಿಶೇಷ ರೈಲಿಗೆ ಮುರ್ಡೇಶ್ವರದ ನಾಗರಿಕ ವೇದಿಕೆಯ ಅಧ್ಯಕ್ಷ ಎಸ್‌.ಎಸ್‌. ಕಾಮತ್‌ ನೇತೃತ್ವದಲ್ಲಿ ಸದಸ್ಯರು, ಸಾರ್ವಜನಿಕರು ಮಾಲಾರ್ಪಣೆ ಮಾಡಿ ಪೂಜೆ ಸಲ್ಲಿಸಿದರು.

ಉತ್ತರಕನ್ನಡ: ಹವಾಮಾನ ವೈಪರೀತ್ಯ: ಸಾಂಪ್ರದಾಯಿಕ ಉಪ್ಪಿನ ಕೊರತೆ

ರೈಲಿನಲ್ಲಿ ಪ್ರಯಾಣಿಕರು ಸಾಕಷ್ಟುಸಂಖ್ಯೆಯಲ್ಲಿದ್ದರು ಎನ್ನಲಾಗಿದೆ. ಈ ವಿಶೇಷ ರೈಲನ್ನು ಬೆಂಗಳೂರಿನಿಂದ ಮುರ್ಡೇಶ್ವರಕ್ಕೆ ಪ್ರತಿದಿನ ಬಿಡುವಂತೆ ಮತ್ತು ಇದನ್ನು ಕಾರವಾರದವರೆಗೂ ವಿಸ್ತರಿಸುವಂತೆ ರೈಲ್ವೆ ಅಧಿಕಾರಿಗಳಿಗೆ ಸಾರ್ವಜನಿಕರು ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮುರ್ಡೇಶ್ವರ ನಾಗರಿಕ ಸೇವಾ ಸಮಿತಿಯ ಅಧ್ಯಕ್ಷ ಎಸ್‌.ಎಸ್‌. ಕಾಮತ್‌, ಇದೊಂದು ಪ್ರಾಯೋಗಿಕ ರೈಲಾಗಿದೆ. ಈ ವಿಶೇಷ ರೈಲನ್ನು ಮುರ್ಡೇಶ್ವರಕ್ಕೆ ಪ್ರತಿದಿನ ಓಡಿಸಬೇಕೆಂದು ಒತ್ತಾಯಿಸಲಾಗಿದೆ. ದಿನಂಪ್ರತಿ ಬೆಂಗಳೂರಿನಿಂದ ಮುರ್ಡೇಶ್ವರಕ್ಕೆ ಮತ್ತು ಮುರ್ಡೇಶ್ವರದಿಂದ ಬೆಂಗಳೂರಿಗೆ ಈ ರೈಲು ಸಂಚರಿಸಿದರೆ ಪ್ರಯಾಣಿಕರಿಗೆ, ಮುರ್ಡೇಶ್ವರಕ್ಕೆ ಬರುವ ಪ್ರವಾಸಿಗರಿಗೆ ಹೆಚ್ಚಿನ ಅನುಕೂಲವಾಗುತ್ತೆಂದರು.
 

PREV
Read more Articles on
click me!

Recommended Stories

ಗೃಹ ಲಕ್ಷ್ಮೀ ಅಡಿ 1.24 ಕೋಟಿ ಸ್ತ್ರೀಯರಿಗೆ ₹1.54 ಕೋಟಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಬೆಂಗಳೂರು : ಹೊಸ ಮಾರ್ಗಗಳಿಗೆ ಬರಲಿವೆ ಚಾಲಕ ರಹಿತ ರೈಲು