ಜೆಡಿಎಸ್ ನಾಯಕರ ವಿರುದ್ಧ ಜಿಟಿಡಿ ಫುಲ್ ಗರಂ

Published : Dec 14, 2020, 09:01 AM IST
ಜೆಡಿಎಸ್ ನಾಯಕರ ವಿರುದ್ಧ ಜಿಟಿಡಿ ಫುಲ್ ಗರಂ

ಸಾರಾಂಶ

ಜೆಡಿಎಸ್ ಮುಖಂಡ ಜಿಟಿ ದೇವೇಗೌಡ ಅವರು  ಪಕ್ಷದ ನಾಯಕರ ವಿರುದ್ಧ ಫುಲ್ ಗರಂ ಆಗಿದ್ದಾರೆ. 

ಮೈಸೂರು (ಡಿ.14):  ಗ್ರಾಪಂ ಚುನಾವಣೆಯಲ್ಲಿ ನಾನು ಭಾಗವಹಿಸುವುದಿಲ್ಲ. ಚಾಮುಂಡೇಶ್ವರಿ ಕ್ಷೇತ್ರಕ್ಕೂ ಹೋಗುವುದಿಲ್ಲ, ಹುಣಸೂರಿಗೂ ಹೋಗುವುದಿಲ್ಲ ಎಂದು ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ ತಿಳಿಸಿದರು. 

ನಗರದಲ್ಲಿ ಭಾನುವಾರ ಮಾತನಾಡಿದ ಅವರು, ನಿನ್ನೆಯಷ್ಟೇ ಜೆಡಿಎಸ್‌ ಪಕ್ಷದಿಂದ ಹುಣಸೂರು ಕ್ಷೇತ್ರದ ಉಸ್ತುವರಿಯನ್ನಾಗಿ ಮಾಡಲಾಗಿತ್ತು. ಈ ವಿಚಾರ ಕೂಡ ಪಕ್ಷದ ಮೂಲಗಳಿಂದ ತಿಳಿದಿಲ್ಲ. 

ಗ್ರಾ.ಪಂ ಚುನಾವಣೆಗೆ ಜೆಡಿಎಸ್​ ತಂತ್ರ: ಒಂದಾದ ದಳಪತಿಗಳು..! ...

ನಾನು ಮಾಧ್ಯಮಗಳ ಮೂಲಕ ತಿಳಿದುಕೊಂಡೆ. ಭಾನುವಾರ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನಡೆಯುತ್ತಿರುವ ಸಭೆಗೂ ಹಾಜರಾಗಲ್ಲ. ಆ ಸಭೆಗೆ ಆಹ್ವಾನ ಸಹ ನೀಡಿಲ್ಲ.

ಗ್ರಾಪಂ ಚುನಾವಣೆ ಪಕ್ಷದ ಚಿಹ್ನೆ ಮೇಲೆ ನಡೆಯುವ ಚುನಾವಣೆಯಲ್ಲ. ಈ ಕಾರಣಕ್ಕೋಸ್ಕರ ನಾನು ಗ್ರಾಪಂ ಚುನಾವಣೆಯಲ್ಲಿ ತಟಸ್ಥವಾಗಿರುತ್ತೇನೆ ಎಂದರು.

PREV
click me!

Recommended Stories

ಶಿಕ್ಷಕರ ನೇಮಕಾತಿ: ವಯೋಮಿತಿ ಸಡಿಲಿಕೆ, ಗಣಿತ ಮತ್ತು ವಿವಿಧ ಭಾಷಾ ಅಭ್ಯರ್ಥಿಗಳಿಗೆ ಅವಕಾಶಕ್ಕೆ ಆಗ್ರಹ
ಮಂಗಳೂರು KFC ಮಳಿಗೆ, ಮೈಸೂರಿನ ಹೋಟೆಲ್‌ಗಳ ಮೇಲೆ ಆಹಾರ ಇಲಾಖೆ ದಾಳಿ! ಕೊಳೆತ ಮಾಂಸ ಪತ್ತೆ