ಅಡ್ಡ ಮತದಾನ: ಗುಬ್ಬಿ ಶಾಸಕ ಶ್ರೀನಿವಾಸ್ ಕೈಲಾಸ ಸಮಾರಾಧನೆ ಫೋಟೋ ವೈರಲ್‌..!

Published : Jun 11, 2022, 01:33 PM IST
ಅಡ್ಡ ಮತದಾನ:  ಗುಬ್ಬಿ ಶಾಸಕ ಶ್ರೀನಿವಾಸ್ ಕೈಲಾಸ ಸಮಾರಾಧನೆ ಫೋಟೋ ವೈರಲ್‌..!

ಸಾರಾಂಶ

*  ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಶ್ರೀನಿವಾಸ್  *  ಸಾಮಾಜಿಕ ಜಾಲತಾಣದಲ್ಲಿ ಫೋಟೋ ಭಾರೀ ವೈರಲ್‌  *  ಗುಬ್ಬಿ ಶಾಸಕ ಶ್ರೀನಿವಾಸ್ ಮನೆ ಬಳಿ ಪೊಲೀಸ್ ಭದ್ರತೆ   

ತುಮಕೂರು(ಜೂ.11): ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ ವಿರುದ್ಧ ಜೆಡಿಎಸ್ ಕಾರ್ಯಕರ್ತರು ಆಕ್ರೋಶವನ್ನ ಹೊರಹಾಕಿದ ಘಟನೆ ಇಂದು(ಶನಿವಾರ) ನಗರದಲ್ಲಿ ನಡೆದಿದೆ.

ಹೌದು, ಶ್ರೀನಿವಾಸ್ ಫೋಟೋ ಹಾಕಿ ಕೈಲಾಸ ಸಮಾರಾಧನೆ ಎಂದು ಜೆಡಿಎಸ್ ಕಾರ್ಯಕರ್ತರು ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹರಿ ಬಿಟ್ಟಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಫೋಟೋ ಭಾರೀ ವೈರಲ್‌ ಆಗುತ್ತಿದೆ. 
ಹೀಗಾಗಿ ತುಮಕೂರಿನ ವಿದ್ಯಾನಗರದಲ್ಲಿರುವ ಗುಬ್ಬಿ ಶಾಸಕ ಶ್ರೀನಿವಾಸ್ ಮನೆ ಬಳಿ ಪೊಲೀಸರು ಭದ್ರತೆ ಕಲ್ಪಿಸಲಾಗಿದೆ. 

ಖಾಲಿ ಬ್ಯಾಲೆಟ್ ಪೇಪರ್ ಹಾಕಿದ್ದರೆ ರಾಜಕೀಯದಿಂದ ನಿವೃತ್ತಿ ಹೊಂದುವೆ : Gubbi Srinivas

ನಿನ್ನೆ(ಶುಕ್ರವಾರ) ನಡೆದಿದ್ದ ರಾಜ್ಯಸಭಾ ಚುನಾವಣೆಯಲ್ಲಿ ಶಾಸಕ ಶ್ರೀನಿವಾಸ್, ಜೆಡಿಎಸ್ ಪಕ್ಷಕ್ಕೆ ಮತಹಾಕದೇ ಖಾಲಿ ಬ್ಯಾಲೆಟ್ ಪೇಪರ್ ಹಾಕಿದ್ದಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಬಹಿರಂಗವಾಗಿ ಹೇಳಿಕೆ ನೀಡಿದ್ದರು. ಕುಮಾರಸ್ವಾಮಿ ಹೇಳಿಕೆಗೆ ಜೆಡಿಎಸ್ ಕಾರ್ಯಕರ್ತರು ಸ್ವಪಕ್ಷದ ಅಭ್ಯರ್ಥಿ ಶ್ರೀನಿವಾಸ್ ವಿರುದ್ಧ ಇಂದು ಪ್ರತಿಭಟನೆ ನಡೆಸೋದಕ್ಕೆ ಪ್ಲಾನ್ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಗುಬ್ಬಿ ಶಾಸಕ ಶ್ರೀನಿವಾಸ್ ಮನೆ ಬಳಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.  

PREV
Read more Articles on
click me!

Recommended Stories

ನಮ್ಮ ಹಣ ನಮಗೆ ಬೇಕಾದವರಿಗೆ ನೀಡುತ್ತೇವೆ: ನ್ಯಾಷನಲ್ ಹೆರಾಲ್ಡ್ ಕೇಸಲ್ಲಿ ಸಮನ್ಸ್‌ಗೆ ಡಿಕೆಶಿ ಆಕ್ರೋಶ
ಬೆಂಗಳೂರು ಕಬ್ಬನ್‌ಪಾರ್ಕ್‌ ಪುಷ್ಪ ಪ್ರದರ್ಶನಕ್ಕೆ ಇಂದು ತೆರೆ