ಬೈಕ್ ಮತ್ತು ಟ್ರ್ಯಾಕ್ಟರ್ ನಡುವೆ ಭೀಕರ ಅಪಘಾತ; ಹಳಿಯಾಳ ಯುವಕ ಸ್ಥಳದಲ್ಲೇ ಸಾವು

Published : Jan 04, 2026, 06:51 PM IST
Uttara Kannada Haliyala Vishal

ಸಾರಾಂಶ

ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಕಾವಲವಾಡ ಬಳಿ ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ 28 ವರ್ಷದ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಟ್ರ್ಯಾಕ್ಟರ್ ಚಾಲಕನ ಅತಿ ವೇಗ ಮತ್ತು ನಿರ್ಲಕ್ಷ್ಯದ ಚಾಲನೆಯೇ ದುರ್ಘಟನೆಗೆ ಕಾರಣ ಎನ್ನಲಾಗಿದೆ.

ಉತ್ತರ ಕನ್ನಡ (ಜ.04): ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಡಿಕ್ಕಿಯಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಹಳಿಯಾಳ ತಾಲೂಕಿನ ಕಾವಲವಾಡ ಗ್ರಾಮದ ಸಮೀಪ ನಡೆದಿದೆ.

ಹಳಿಯಾಳದ ನಿವಾಸಿ ವಿಶಾಲ ಸುರೋಜಿ (28) ಅಪಘಾತದಲ್ಲಿ ಮೃತಪಟ್ಟ ದುರ್ದೈವಿ. ವಿಶಾಲ ಅವರು ಕೆಲಸದ ನಿಮಿತ್ತ ಹಳಿಯಾಳದಿಂದ ಕಲಘಟಗಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ

ಮೃತ ವಿಶಾಲ ಕಾವಲವಾಡ ಗ್ರಾಮದ ರಸ್ತೆಯಲ್ಲಿ ಸಂಚರಿಸುತ್ತಿದ್ದಾಗ, ಎದುರಿನಿಂದ ಬಂದ ಟ್ರ್ಯಾಕ್ಟರ್ ಡಿಕ್ಕಿ ಹೊಡೆದಿದೆ. ಟ್ರ್ಯಾಕ್ಟರ್ ಚಾಲಕನ ಅತಿ ವೇಗ ಮತ್ತು ನಿರ್ಲಕ್ಷ್ಯದ ಚಾಲನೆಯೇ ಈ ಅವಘಡಕ್ಕೆ ನೇರ ಕಾರಣ ಎಂದು ಹೇಳಲಾಗುತ್ತಿದೆ. ಡಿಕ್ಕಿಯ ರಭಸಕ್ಕೆ ವಿಶಾಲ ರಸ್ತೆಗೆ ಎಸೆಯಲ್ಪಟ್ಟು ತಲೆಗೆ ತೀವ್ರ ಪೆಟ್ಟು ಬಿದ್ದಿದ್ದರಿಂದ ಸ್ಥಳದಲ್ಲೇ ಪ್ರಾಣಪಕ್ಷಿ ಹಾರಿಹೋಗಿದೆ.

ಪೊಲೀಸರ ಭೇಟಿ

ವಿಷಯ ತಿಳಿಯುತ್ತಿದ್ದಂತೆಯೇ ಹಳಿಯಾಳ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಬಗ್ಗೆ ಹಳಿಯಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತಲೆಮರೆಸಿಕೊಂಡಿರುವ ಟ್ರ್ಯಾಕ್ಟರ್ ಚಾಲಕನಿಗಾಗಿ ಹುಡುಕಾಟ ಮುಂದುವರಿದಿದೆ.

PREV
Read more Articles on
click me!

Recommended Stories

ಯಲ್ಲಾಪುರ ರಂಜಿತಾ ಕುಟುಂಬಕ್ಕೆ ವಿಜಯೇಂದ್ರ ಸಾಂತ್ವನ, ₹5 ಲಕ್ಷ ವೈಯಕ್ತಿಕ ಪರಿಹಾರ ವಿತರಣೆ
Theater Mafia: 'ದುಡ್ಡು-ಪವರ್ ಇದ್ದ ನನಗೇ ಯಾಮಾರಿಸಿದ್ರು' ಸ್ಯಾಂಡಲ್‌ವುಡ್‌ನಲ್ಲಿ 'ಥಿಯೇಟರ್ ಮಾಫಿಯಾ' ಬಗ್ಗೆ ಝೈದ್ ಖಾನ್ ಸ್ಫೋಟಕ ಹೇಳಿಕೆ!