ವಿಜಯನಗರ ಸಾಮ್ರಾಜ್ಯದ ಗತವೈಭವ ಸಾರುವ ಹಂಪಿ ಉತ್ಸವಕ್ಕೆ ಮುಹೂರ್ತ ಫಿಕ್ಸ್!

Published : Jan 03, 2025, 01:23 PM IST
ವಿಜಯನಗರ ಸಾಮ್ರಾಜ್ಯದ ಗತವೈಭವ ಸಾರುವ ಹಂಪಿ ಉತ್ಸವಕ್ಕೆ ಮುಹೂರ್ತ ಫಿಕ್ಸ್!

ಸಾರಾಂಶ

ಫೆ. 28ರಿಂದ ಮೂರು ದಿನ ಹಂಪಿ ಉತ್ಸವ ಆಚರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿಗೆ ಸೂಚಿಸಿದ್ದು, ಈ ಬಾರಿಯೂ ಅದ್ಧೂರಿ ಹಾಗೂ ಸಂಪ್ರದಾಯಬದ್ದವಾಗಿ ಆಚರಿಸಲಾಗುವುದು. ಹಂಪಿ ಉತ್ಸವದ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ದಿವಾಕರ್ ಅವರಿಗೆ ನಿರ್ದೇಶನ ನೀಡಲಾಗಿದೆ: ಜಿಲ್ಲಾ ಉಸ್ತುವಾರಿ ಸಚಿವ ಜಮೀರ್‌ ಅಹಮದ್ ಖಾನ್ 

ಹೊಸಪೇಟೆ(ಜ.03): ವಿಜಯನಗರ ಸಾಮ್ರಾಜ್ಯದ ಗತವೈಭವ ಸಾರುವ ಹಂಪಿ ಉತ್ಸವಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ಫೆ. 28 ಮತ್ತು ಮಾ. 1, 2ರಂದು ಮೂರು ದಿನಗಳವರೆಗೆ ಅದ್ದೂರಿಯಾಗಿ ಉತ್ಸವ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮತಿ ಸೂಚಿಸಿದ್ದಾರೆ. ಹಾಗಾಗಿ ಈ ಬಾರಿ ಉತ್ಸವ ನಡೆಯಲಿದೆಯೋ ಇಲ್ಲವೋ ಎಂಬ ಗೊಂದಲಕ್ಕೆ ಸರ್ಕಾರವೇ ತೆರೆ ಎಳೆದಿದೆ. 

ಹಂಪಿ ಉತ್ಸವದ ರೂವಾರಿ, ಮಾಜಿ ಉಪಮುಖ್ಯಮಂತ್ರಿ ಎಂ.ಪಿ. ಪ್ರಕಾಶ ಅವರು ನ. 3, 4 ಮತ್ತು 5ರಂದು ಉತ್ಸವ ನಡೆಸಲು ದಿನಾಂಕ ನಿಗದಿ ಮಾಡಿದ್ದರು. ಪಂಚಾಂಗದಲ್ಲೂ ದಿನಾಂಕ ಪ್ರಕಟ ಮಾಡಿದರೂ ಸರ್ಕಾರಗಳು ಮಾತ್ರ ಉತ್ಸವದ ದಿನಾಂಕ ಬದಲಾವಣೆ ಮಾಡುತ್ತಲೇ ಬರುತ್ತಿವೆ. ಹಾಗಾಗಿ ಸರ್ಕಾರ ಘೋಷಣೆ ಮಾಡಿದ ದಿನಾಂಕಗಳಂದೇ ಉತ್ಸವ ನಡೆಯುತ್ತಾ ಬರುತ್ತಿದೆ. 

ವಿಜಯನಗರ: ಮಂಗೋಲಿಯಾದಿಂದ ಬಂದ ಚಳಿಗಾಲದ ಅತಿಥಿಗಳು!

ಮುಖ್ಯಮಂತ್ರಿ ಉದ್ಘಾಟನೆ: 

ಫೆ. 28ರಿಂದ ಮೂರು ದಿನಗಳ ಕಾಲ ನಡೆಯಲಿರುವ ಹಂಪಿ ಉತ್ಸವಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಹಂಪಿ ಉತ್ಸವದಲ್ಲಿ ಹಂಪಿ ಬೈ ಸೈ, ಎತ್ತಿನ ಬಂಡಿ ಮೇಳ, ಶ್ವಾನ ಸ್ಪರ್ಧೆ, ಸಾಹಸ ಕ್ರೀಡೆಗಳು, ಕುಸ್ತಿ ಪಂದ್ಯಾವಳಿ, ಗ್ರಾಮೀಣ ಕ್ರೀಡೆಗಳು, ಪುಸ್ತಕ ಮೇಳ, ಆಹಾರ ಮೇಳ, ಫಲ-ಪುಷ್ಪ ಪ್ರದರ್ಶನ ಕೂಡ ನಡೆಯಲಿದೆ. ಉತ್ಸವದಲ್ಲಿ ಜಾನಪದ ವಾಹಿನಿ ನಡೆಯಲಿದ್ದು, ಈ ನೆಲದ ಕಲೆಯನ್ನು ಜಾನಪದ ಕಲಾವಿದರು ಅನಾವರಣಗೊಳಿಸಲಿದ್ದಾರೆ. 

ವಿಜಯನಗರ ಆಳರಸರು ಕಲೆ, ಸಾಹಿತ್ಯ, ಸಂಸ್ಕೃತಿಗೆ ಹೆಚ್ಚಿನ ಪ್ರಾಧ್ಯಾನ್ಯ ನೀಡಿದ್ದರು. ವಿಜಯನಗರ ನೆಲದ ಗತವೈಭವ ಸಾರುವ ಮಾದರಿಯಲ್ಲಿ ಉತ್ಸವ ಮೂರು ದಿನಗಳ ವರೆಗೆ ನಡೆಯಲಿದೆ. ಸ್ಥಳೀಯ ಕಲಾವಿದರಿಗೆ ಮನ್ನಣೆ: ಈ ಬಾರಿಯ ಹಂಪಿ ಉತ್ಸವದಲ್ಲಿ ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಮನ್ನಣೆ ದೊರೆಯಲಿದೆ. ಕನ್ನಡ ನಾಡಿನ ಕಲಾವಿದರಿಗೂ ವೇದಿಕೆ ದೊರೆಯಲಿದೆ. 

ನಾಡಿನ ಹಾಗೂ ಸ್ಥಳೀಯ ಕಲಾವಿದರ ಜುಗಲ್‌ಬಂದಿ ಈ ಸಲದ ಹಂಪಿ ಉತ್ಸವದ ಜೀವಾಳವಾಗಿದೆ. 2017ರಲ್ಲಿನ. 3, 4, 5ರಂದು ಮೂರು ದಿನಗಳ ಕಾಲ ಅದ್ದೂರಿಯಾಗಿ ಆಚರಣೆ ಮಾಡಲಾಗಿತ್ತು. ಅದಾದ ಬಳಿಕ ಬರಗಾಲ ಹಾಗೂ ಲೋಕಸಭೆ ಉಪಚುನಾವಣೆ ನೆಪದಲ್ಲಿ 2018 ರಲ್ಲಿ ಹಂಪಿ ಉತ್ಸವ ಆಚರಣೆ ಮಾಡಿರಲಿಲ್ಲ. ಬಳಿಕ ಬಳ್ಳಾರಿ ನಗರ ಶಾಸಕರಾಗಿದ್ದ ಜಿ. ಸೋಮಶೇಖರ ರೆಡ್ಡಿ ಅವರು ಸರ್ಕಾರದ ಬಳಿ ಹಣವಿಲ್ಲದಿದ್ದರೆ ಭಿಕ್ಷೆ ಬೇಡಿ ನೀಡುವುದಾಗಿ ಹೇಳಿದ್ದರು. ಆಗ, 2019ರ ಮಾ. 2 ಮತ್ತು 3ರಂದು ಎರಡು ದಿನ, 2020ರಲ್ಲಿ ಜ. 10, 11 ಮತ್ತು ಅದೇ ವರ್ಷ ನವೆಂಬರ್‌ನಲ್ಲಿ ಒಂದು ದಿನ ಶೋಭಾಯಾತ್ರೆಗೆ ಉತ್ಸವ ಸೀಮಿತವಾಗಿತ್ತು. 2021ರಲ್ಲಿ ಅ. 2 ಮತ್ತು 3ರಂದು ವಿಜಯನಗರ ಜಿಲ್ಲೆ ಉದ್ಘಾಟನೆಯಾಗಿದ್ದರಿಂದ ಉತ್ಸವ ನಡೆದಿರಲಿಲ್ಲ. 2022ರಲ್ಲಿ ಜ. 27, 28, 29ರಂದು ಮೂರು ದಿನ ಆಚರಿಸಲಾಗಿತ್ತು. ಕಳೆದ ವರ್ಷ ಕೂಡ ಫೆಬ್ರವರಿಯಲ್ಲಿ ನಡೆದಿತ್ತು. ಈ ಬಾರಿಯೂ ಫೆ. 28 ಮತ್ತು ಮಾ. 1 ಮತ್ತು 2ರಂದು ಮೂರು ದಿನಗಳ ವರೆಗೆ ಉತ್ಸವ ನಡೆಸಲು ದಿನಾಂಕ ನಿಗದಿಯಾಗಿದೆ. ಮೈಸೂರು ದಸರೆ ಮಾದರಿಯಲ್ಲಿ ಹಂಪಿ ಉತ್ಸವ ಕೂಡ ನಿಗದಿ ದಿನಾಂಕಕ್ಕೆ ನಡೆಯಲಿ ಎಂಬುದು ಈ ಭಾಗದ ಕಲಾವಿದರ ಕೂಗು ಕೂಡ ಆಗಿದೆ. 

ಫೆ. 28ರಿಂದ ಮೂರು ದಿನ ಹಂಪಿ ಉತ್ಸವ ಆಚರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿಗೆ ಸೂಚಿಸಿದ್ದು, ಈ ಬಾರಿಯೂ ಅದ್ಧೂರಿ ಹಾಗೂ ಸಂಪ್ರದಾಯಬದ್ದವಾಗಿ ಆಚರಿಸಲಾಗುವುದು. ಹಂಪಿ ಉತ್ಸವದ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ದಿವಾಕರ್ ಅವರಿಗೆ ನಿರ್ದೇಶನ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್‌ ಅಹಮದ್ ಖಾನ್ ತಿಳಿಸಿದ್ದಾರೆ. 

ಬಳ್ಳಾರಿ ಘಟನೆ ಮಾಸುವ ಮುನ್ನವೇ ಕೊಪ್ಪಳದಲ್ಲಿ ಮತ್ತೋರ್ವ ಬಾಣಂತಿ ಸಾವು!

ವಿಜಯನಗರ ಹಂಪಿ ಉತ್ಸವವನ್ನು ಕಳೆದ ವರ್ಷದಂತೆ ಜನೋತ್ಸವವನ್ನಾಗಿ ಆಚರಿಸಲಾಗುವುದು. ಉತ್ಸವಕ್ಕಾಗಿ ಸಕಲ ಸಿದ್ಧತೆ ಮಾಡಲಾಗುವುದು. ಸ್ಥಳೀಯ ಹಾಗೂ ಕನ್ನಡಿಗ ಕಲಾವಿದರಿಗೆ ಹೆಚ್ಚಿನ ಪ್ರಾಧ್ಯಾನ್ಯ ನೀಡಲಾಗುವುದು ಎಂದು ವಿಜಯನಗರ ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್ ಹೇಳಿದ್ದಾರೆ. 

ಫೆ. 28ರಿಂದ ಮೂರು ದಿನಗಳ ಕಾಲ ನಡೆಯಲಿರುವ ಹಂಪಿ ಉತ್ಸವಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಹಂಪಿ ಉತ್ಸವದಲ್ಲಿ ಹಂಪಿ ಬೈ ಸೈ, ಎತ್ತಿನ ಬಂಡಿ ಮೇಳ, ಶ್ವಾನ ಸ್ಪರ್ಧೆ, ಸಾಹಸ ಕ್ರೀಡೆಗಳು, ಕುಸ್ತಿ ಪಂದ್ಯಾವಳಿ, ಗ್ರಾಮೀಣ ಕ್ರೀಡೆಗಳು, ಪುಸ್ತಕ ಮೇಳ, ಆಹಾರ ಮೇಳ, ಫಲ-ಪುಷ್ಪ ಪ್ರದರ್ಶನ ಕೂಡ ನಡೆಯಲಿದೆ. ಉತ್ಸವದಲ್ಲಿ ಜಾನಪದ ವಾಹಿನಿ ನಡೆಯಲಿದೆ.

PREV
Read more Articles on
click me!

Recommended Stories

ಪುಟಿನ್‌ಗೆ ಇಲ್ಲೇ ಎಲೆಕ್ಷನ್‌ ನಿಲ್ಲೋಕೆ ಟಿಕೆಟ್‌ ಕೊಡ್ತಾರೆ ಅಂದ್ಕೊಂಡಿದ್ದೆ.. ಸಂತೋಷ್‌ ಲಾಡ್‌ ಲೇವಡಿ
ಗಡುವು ಮೀರಿಸಿದರೆ ಮುಂದೆ ಕೆಲಸವಿಲ್ಲ: ಮೆಟ್ರೋ ಗುತ್ತಿಗೆದಾರರಿಗೆ ಡಿ.ಕೆ.ಶಿವಕುಮಾರ್‌ ಎಚ್ಚರಿಕೆ