ಮಾರಕ ಕೊರೋನಾಗೆ ವ್ಯಾಕ್ಸಿನ್ : ವಿಜ್ಞಾನಿಗಳ ತಂಡದಲ್ಲಿ ನಮ್ಮ ಕನ್ನಡಿಗ

Published : Mar 16, 2020, 11:32 AM ISTUpdated : Mar 16, 2020, 03:26 PM IST
ಮಾರಕ ಕೊರೋನಾಗೆ ವ್ಯಾಕ್ಸಿನ್ : ವಿಜ್ಞಾನಿಗಳ ತಂಡದಲ್ಲಿ ನಮ್ಮ ಕನ್ನಡಿಗ

ಸಾರಾಂಶ

ವಿಶ್ವದಾದ್ಯಂತ ಮರಣ ಮೃದಂಗ ಭಾರಿಸುತ್ತಿರುವ ಕೊರೋನಾ ಮಾರಕ ವೈರಸ್ ನಿಯಂತ್ರಣಕ್ಕೆ ಔಷಧ ಕಂಡು ಹಿಡಿಯುವ ಯತ್ನ ನಡೆಯುತ್ತಿದೆ. ಈ ತಂಡದಲ್ಲಿ ನಮ್ಮ ಹೆಮ್ಮೆಯ ಕನ್ನಡಿಗರೊಬ್ಬರು ಇದ್ದಾರೆ. 

ಹಾಸನ [ಮಾ.16]: ಕೊರೋನಾ ಮಹಾಮಾರಿ ಇದೀಗ ದೇಶದಲ್ಲಿ ತಾಂಡವವಾಡುತ್ತಿದೆ. ವಿಶ್ವದಾದ್ಯಂತ 6 ಸಾವಿರಕ್ಕೂ ಅಧಿಕ ಜನರನ್ನು ಬಲಿ ಪಡೆದಿದೆ. ಭಾರತದಲ್ಲಿಯೂ ಮೂರು ಸಾವುಗಳಾಗಿದೆ. ಇದೇ ಬೆನ್ನಲ್ಲೇ ಔಷಧ ಕಂಡು ಹಿಡಿಯುವ ಯತ್ನ ನಡೆದಿದೆ. 

"

ಈ ನಿಟ್ಟಿನಲ್ಲಿ ಇದೀಗ ಕೊರೋನ‌ ವೈರಸ್ ಗೆ ಔಷಧ ಕಂಡು ಹಿಡಯುವ ಯತ್ನ ಪ್ರಗತಿಯಲ್ಲಿದೆ. ವ್ಯಾಕ್ಸಿನ್ ಕಂಡುಹಿಡಿಯಲು ತಂಡ ರಚನೆ ಮಾಡಲಾಗಿದ್ದು, ತಂಡದಲ್ಲಿ‌ ಹಾಸನ ಮೂಲದ ಕನ್ನಡಿಗರೊಬ್ಬರು ಸ್ಥಾನ ಪಡೆದಿದ್ದಾರೆ. 

ಯುರೋಪಿಯನ್ ಟಾಸ್ಕ್ ಫೋರ್ಸ್ ಫಾರ್  ಕೊರೊನ ವೈರಸ್ ತಂಡದಲ್ಲಿ ನಮ್ಮ ಕರುನಾಡಿದ  ಮಹದೇಶ್ ಪ್ರಸಾದ್ ಸ್ಥಾನ ಪಡೆದಿದ್ದಾರೆ. 

ಕೊರೋನಾ : ಮಂಗಳೂರಲ್ಲಿ 9 ಮಂದಿಗೆ ಆಸ್ಪತ್ರೆಯಲ್ಲಿ ತೀವ್ರ ನಿಗಾ...

ಹಾಸನ ಜಿಲ್ಲೆ ಅರಕಲಗೂಡು ತಾಲ್ಲೂಕಿನವರಾದ ಮಹದೇಶ ಪ್ರಸಾದ್  ಜರ್ಮನಿಯಲ್ಲಿ ವಿಜ್ಞಾನಿಯಾಗಿದ್ದು, ಕಳೆದ ಒಂದು ವರ್ಷದಿಂದ ಸಂಶೋಧನೆ ಸಲುವಾಗಿ ಬೆಲ್ಜಿಯಂನಲ್ಲಿ ನೆಲೆಸಿದ್ದಾರೆ. 

ಇದೀಗ ಯುರೋಪ್ ರಾಷ್ಟ್ರಗಳು ಒಗ್ಗೂಡಿ ಕೊರೋನ ವ್ಯಾಕ್ಸಿನ್ ಕಂಡು ಹಿಡಿಯಲು ಹತ್ತು ತಂಡ ರಚಿಸಿದ್ದು ಈ ತಂಡದಲ್ಲಿ ಸ್ಥಾನ ಪಡೆದು ಕರುನಾಡಿಗೆ ಹೆಮ್ಮೆ ತಂದಿದ್ದಾರೆ. 

PREV
click me!

Recommended Stories

ರಾಷ್ಟ್ರಮಟ್ಟದಲ್ಲಿ ಮಿಂಚಿದ ತುಮಕೂರು ಜಿಲ್ಲೆ; ರಾಜ್ಯಕ್ಕೆ ಫಸ್ಟ್, ದೇಶಕ್ಕೆ 9ನೇ ಸ್ಥಾನ
ಪಟ್ಟಂದೂರಿನ ವಿವಾದಿತ ಜಾಗ: ನಿರ್ಮಾಣ ಚಟುವಟಿಕೆ ನಡೆಸದಂತೆ ಹೈಕೋರ್ಟ್‌ ಮಧ್ಯಂತರ ತಡೆ