ಹಾಸನ ವಿಧಾನಸಭಾ ಕ್ಷೇತ್ರದ ಟಿಕೆಟ್ ವಿಚಾರದಲ್ಲಿ ಗೊಂದಲವೇನಿಲ್ಲ. ದೇವೇಗೌಡರು ಗುರುವಾರ ದೆಹಲಿಗೆ ಹೋಗುತ್ತಿದ್ದಾರೆ. ಅಲ್ಲಿಂದ ಬಂದ ನಂತರ ಸಭೆ ಕರೆಯಲು ಹೇಳಿದ್ದೇನೆ. ಶುಕ್ರವಾರದೊಳಗೆ ಅಭ್ಯರ್ಥಿಯನ್ನು ಫೈನಲ್ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ಮಂಡ್ಯ : ಹಾಸನ ವಿಧಾನಸಭಾ ಕ್ಷೇತ್ರದ ಟಿಕೆಟ್ ವಿಚಾರದಲ್ಲಿ ಗೊಂದಲವೇನಿಲ್ಲ. ದೇವೇಗೌಡರು ಗುರುವಾರ ದೆಹಲಿಗೆ ಹೋಗುತ್ತಿದ್ದಾರೆ. ಅಲ್ಲಿಂದ ಬಂದ ನಂತರ ಸಭೆ ಕರೆಯಲು ಹೇಳಿದ್ದೇನೆ. ಶುಕ್ರವಾರದೊಳಗೆ ಅಭ್ಯರ್ಥಿಯನ್ನು ಫೈನಲ್ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ಕೆ.ಆರ್.ಪೇಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಭಾನುವಾರ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ದೇವೇಗೌಡರು ಕೆಲವು ಮಾರ್ಗದರ್ಶನ ನೀಡಿದ್ದಾರೆ. ಗುರುವಾರ ಅವರು ತೆರಳುತ್ತಿರುವುದರಿಂದ ಅಲ್ಲಿಂದ ಬಂದ ನಂತರ ಸಭೆ ಕರೆಯುವಂತೆ ಹೇಳಿದ್ದೇನೆ. ಪ್ರಮುಖರನ್ನು ಕರೆದು ಎಲ್ಲರ ಅಭಿಪ್ರಾಯ ಸಂಗ್ರಹಿಸಿ ಒಮ್ಮತದ ಅಭಿಪ್ರಾಯಕ್ಕೆ ಬರತ್ತೇವೆ. ಗುರುವಾರ ಅಥವಾ ಶುಕ್ರವಾರ ಹಾಸನದ ಟಿಕೆಟ್ ಫೈನಲ್ ಮಾಡುತ್ತೇನೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಚುನಾವಣೆಗೆ ಎರಡನೇ ಹಂತದ ಟಿಕೆಟ್ಅನ್ನು ಸೋಮವಾರ ಘೋಷಣೆ ಮಾಡಬೇಕಿದೆ. ಈ ವಿಷಯವಾಗಿ ಬೆಂಗಳೂರಿಗೆ ಹೋಗಿ ಚರ್ಚೆ ಮಾಡುತ್ತೇವೆ. ಮುಂದಿನ ಎರಡು ದಿನಗಳಲ್ಲಿ ಎರಡನೇ ಹಂತದ ಅಭ್ಯರ್ಥಿಗಳ ಪಟ್ಟಿಬಿಡುಗಡೆಯಾಗಲಿದೆ ಎಂದ ಕುಮಾರಸ್ವಾಮಿ, ಸಚಿವ ನಾರಾಯಣಗೌಡ ಹೇಳಿಕೆ ವಿಚಾರವಾಗಿ ಕೇಳಿದ ಪ್ರಶ್ನೆಗೆ, ಆ ವ್ಯಕ್ತಿಯ ಹೇಳಿಕೆಗೆ ಏನು ನೈತಿಕತೆ ಇದೆ.
ಯಾವ ನೈತಿಕತೆ ಇಟ್ಟುಕೊಂಡು ಆ ವಿಷಯದ ಬಗ್ಗೆ ಚರ್ಚೆ ಮಾಡುತ್ತಿದ್ದಾನೆ. ಈ ವ್ಯಕ್ತಿ ಮೊದಲು ಎಲ್ಲಿದ್ದ. ಈ ವ್ಯಕ್ತಿಯನ್ನು ಜನರು ಎಲ್ಲಿಂದ ಗುರುತಿಸುತ್ತಾರೆ. ಇವತ್ತು ಅವರು ಬೆಳೆಯಬೇಕದಾರೆ ಹೇಗೆ ಬೆಳೆದರು ಎನ್ನುವುದೆಲ್ಲಾ ಗೊತ್ತಿದೆ. ಈಗ ಅವರಿಗೆ ಜ್ಞಾನೋದಯ ಆಗಿದೆಯಾ. ಈಗ ಅವರು ಪಕ್ಷ ಯಾಕೆ ಬಿಟ್ಟು ಹೋದರು. ಪಕ್ಷ ಬಿಡುವ ವಾರದ ಮುಂಚೆ ನನಗೆ ಏನ್ ಟೋಪಿ ಹಾಕಿ ಹೋದ್ರು. ಅಂತಹ ವ್ಯಕ್ತಿಗಳ ಬಗ್ಗೆ ಚರ್ಚೆ ಮಾಡೋಕೆ ಆಗೋಲ್ಲ. ಜನರೇ ಆತನ ಬಗ್ಗೆ ತೀರ್ಮಾನ ಮಾಡುತ್ತಾರೆ. ಫಲಿತಾಂಶ ಬರಲಿ. ಎಲ್ಲವೂ ಗೊತ್ತಾಗುತ್ತದೆ ಎಂದರು.
ದೇವೇಗೌಡರ ಮದ್ಯಪ್ರವೇಶ
..ಹಾಸನ (ಏ.1) : ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೆಲವೇ ಕೆಲವು ದಿನಗಳು ಉಳಿದಿವೆ. ಹಾಸನ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಗೊಂದಲ ವಿಚಾರ ಇನ್ನೂ ಮುಂದುವರಿದಿರುವ ಹಿನ್ನೆಲೆ ಗೊಂದಲ ಪರಿಹಾರಕ್ಕೆ ಮಾಜಿ ಪ್ರಧಾನಿ ದೇವೇಗೌಡರು(HD Devegowda) ಮುಂದಾಗಿದ್ದಾರೆ.
ಜೆಡಿಎಸ್(JDS) ಪಕ್ಷದಲ್ಲಿ ಎಲ್ಲವೂ ಸುಸೂತ್ರವಾಗಿ ನಡೆಯುತ್ತಿದ್ದರೆ ಹಾಸನ ಕ್ಷೇತ್ರಕ್ಕೆ ಅಭ್ಯರ್ಥಿ ಆಯ್ಕೆ ಕಗ್ಗಂಟು ಆಗಿಯೇ ಉಳಿದಿದೆ. ಇದೀಗ ಟಿಕೆಟ್ ಕುರಿತು ಗೊಂದಲ ಪರಿಹಾರಕ್ಕೆ ಸ್ವತಃ ದೇವೇಗೌಡರು ಹಾಸನ ಕ್ಷೇತ್ರದ ಮುಖಂಡರ ಸಭೆ ಕರೆ ಕರೆದಿದ್ದಾರೆ.
ಗೌಡರ ಕುಟುಂಬದಲ್ಲಿ ಬಿರುಗಾಳಿ..ಸಿಂ'ಹಾಸನ' ಕೈ ತಪ್ಪಿದ್ರೆ ರೆಬೆಲ್ ಆಗ್ತಾರಾ ಭವಾನಿ..?
ಬೆಂಗಳೂರಿನ ತಮ್ಮ ನಿವಾಸದಲ್ಲಿ ಜೆಡಿಎಸ್ ಮುಖಂಡರನ್ನು ಕರೆಯಿಸಿ ಸಭೆ ನಡೆಸುತ್ತಿರುವ ದೇವೇಗೌಡರು ಟಿಕೆಟ್ ಆಯ್ಕೆ ವಿಚಾರವಾಗಿ ಎಲ್ಲ ಗೊಂದಲಗಳಿಗೆ ಪರಿಹಾರ ಹುಡುಕುತ್ತಿದ್ದಾರೆ, ಈ ಸಭೆಯಲ್ಲಿ ಹಾಸನ ಕ್ಷೇತ್ರದ ನಗರ ಮತ್ತು ಗ್ರಾಮಾಂತರ ಭಾಗದ ನಾಯಕರು ಭಾಗಿಯಾಗಿದ್ದಾರೆ. ಸಭೆಯಲ್ಲಿ ಯಾರಿಗೆ ಟಿಕೆಟ್ ನೀಡಿದ್ರೆ ಚುನಾವಣೆಯಲ್ಲಿ ಗೆಲುವು ಸಾಧ್ಯ ಎಂಬ ಬಗ್ಗೆ ಚರ್ಚೆ ನಡೆಯುತ್ತಿದೆ.ಸೂಕ್ತ ಅಭ್ಯರ್ಥಿಯನ್ನು ಗುರುತಿಸಿ ಕಣಕ್ಕಿಳಿಸುವ ಬಗ್ಗೆ ಮುಖಂಡರ ಅಭಿಪ್ರಾಯ ಪಡೆದಿರುವ ದೇವೇಗೌಡರು.
ಭವಾನಿ ರೇವಣ್ಣ, ಸ್ವರೂಪ ಮಧ್ಯೆ ಟಿಕೆಟ್ ಗಾಗಿ ನಡೆಯುತ್ತಿರುವ ಬಿಗ್ ಫೈಟ್. ಟಿಕೆಟ್ ಫೈಟ್ ಕಾರಣಕ್ಕೆ ಕ್ಷೇತ್ರ ಕಳೆದುಕೊಳ್ಳುವ ಆತಂಕದಲ್ಲಿರುವ ಜೆಡಿಎಸ್ ನಾಯಕರು. ಸಮಸ್ಯೆ ಪರಿಹಾರಕ್ಕೆ ದೇವೆಗೌಡರ ಮೊರೆ ಹೋಗಿರುವ ಹಾಸನ ಕ್ಷೇತ್ರದ ನಿಷ್ಠಾವಂತ ಮುಖಂಡರು. ಹೀಗಾಗಿ ಇಂದು ಸ್ವತಃ ಮುಂದಾಗಿ ಹಾಸನ ಜೆಡಿಎಸ್ ಮುಖಂಡರುನ್ನು ಕರೆಯಿಸಿ ಸಭೆ ನಡೆಸುತ್ತಿರುವ ಎಚ್ಡಿ ದೇವೇಗೌಡರು.
ನಾನು ಹೇಳಿದವರಿಗೆ ಹಾಸನ ಟಿಕೆಟ್: ರೇವಣ್ಣ ಬಿಗಿಪಟ್ಟು..!