Haveri: ದೇವಸ್ಥಾನದ ಮೇಲೆ ಕಳಸ ಕೂರಿಸುವಾಗ ಕ್ರೇನ್‌ ಬಕೆಟ್‌ ಕಟ್‌ ಆಗಿ ವ್ಯಕ್ತಿಯ ಸಾವು!

Published : Feb 07, 2025, 12:46 PM ISTUpdated : Feb 07, 2025, 12:59 PM IST
Haveri: ದೇವಸ್ಥಾನದ ಮೇಲೆ ಕಳಸ ಕೂರಿಸುವಾಗ ಕ್ರೇನ್‌ ಬಕೆಟ್‌ ಕಟ್‌ ಆಗಿ ವ್ಯಕ್ತಿಯ ಸಾವು!

ಸಾರಾಂಶ

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಶೇಷಗಿರಿ ಗ್ರಾಮದಲ್ಲಿ ಗಂಗಾಪರಮೇಶ್ವರಿ ಕಳಸಾರೋಹಣದ ವೇಳೆ ಕ್ರೇನ್ ಬಕೆಟ್ ಕಟ್ ಆಗಿ 42 ವರ್ಷದ ಮಂಜು ಪಾಟೀಲ್ ಸಾವನ್ನಪ್ಪಿದ್ದಾರೆ. ಕ್ರೇನ್ ಮೂಲಕ ದೇವಸ್ಥಾನದ ಗೋಪುರದ ಮೇಲೆ ಕಳಸ ಇಡುವಾಗ ಈ ದುರ್ಘಟನೆ ಸಂಭವಿಸಿದೆ. ಇನ್ನೊಬ್ಬರಿಗೆ ಗಾಯಗಳಾಗಿವೆ.

ಹಾವೇರಿ (ಫೆ.7): ಜಿಲ್ಲೆಯ ಗಂಗಾಪರಮೇಶ್ವರಿ ಕಳಸಾರೋಹಣ ಸಂದರ್ಭದಲ್ಲಿ ಭಾರೀ ಅವಗಢ ಸಂಭವಿಸಿದೆ. ಕಳಸಾರೋಹಣ ಸಂದರ್ಭದಲ್ಲಿ ಕ್ರೇನ್ ಬಕೇಟ್ ಕಟ್‌ ಆಗಿ ವ್ಯಕ್ತಿಯೊಬ್ಬ ಸ್ಥಳದಲ್ಲಿಯೇ ಸಾವು ಕಂಡಿದ್ದು, ಇನ್ನೋರ್ವ ವ್ಯಕ್ತಿಗೆ ಗಾಯವಾಗಿದೆ. ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕು ಶೇಷಗಿರಿ ಗ್ರಾಮದಲ್ಲಿ ಘಟನೆ ನಡೆದಿದೆ. ಮೇಲಿನಿಂದ ಬಿದ್ದು ಸ್ಥಳದಲ್ಲಿಯೇ 42 ವರ್ಷದ ಮಂಜು ಪಾಟೀಲ್ ಸಾವು ಕಂಡಿದ್ದಾರೆ. ಇನ್ನೋರ್ವ ಮಂಜು ಬಡಿಗೇರ್ ಎಂಬುವವರಿಗೆ ಗಂಭೀರ ಗಾಯವಾಗಿದೆ. ಗಾಯಗೊಂಡಿರುವ ವ್ಯಕ್ತಿಯನ್ನು ಹಾನಗಲ್ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶೇಷಗಿರಿ ಗ್ರಾಮದಲ್ಲಿ ಗಂಗಾ ಪರಮೇಶ್ವರಿ ದೇವಸ್ಥಾನದ ಕಳಸಾರೋಹಣ ಕಾರ್ಯಕ್ರಮದಲ್ಲಿ ಈ ದುರ್ಘಟನೆ ಸಂಭವಿಸಿದೆ. ದೇವಸ್ಥಾನದ ಗೋಪುರದ ಮೇಲೆ ಇಡುವ ಕಳಸ ಹಿಡಿದು ಕ್ರೇನ್ ಮೂಲಕ ದೇವಸ್ಥಾನದ ಗೋಪುರದ ಹತ್ತಿರ ಹೋಗುತ್ತಿದ್ದಂತೆ ಕ್ರೇನ್‌ ಬಕೆಟ್‌ ಕಳಚಿ ಬಿದ್ದಿದೆ. ಈ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದ್ದು, ಬಹುಶಃ ಕಳಸ ಎದೆಗೆ ಚುಚ್ಚಿಯೇ ಸಾವು ಕಂಡಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಅಡೂರು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಕ್ರೇನ್ ಮಾಲೀಕನ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Haveri: ಗಾಯಕ್ಕೆ ಹೊಲಿಗೆ ಹಾಕುವ ಬದಲು ಫೆವಿಕ್ವಿಕ್ ಹಾಕಿದ ನರ್ಸ್!

ವೈದ್ಯರು ಓವರ್‌ಡೋಸ್ ಇಂಜೆಕ್ಷನ್ ನೀಡಿದ ಆರೋಪ; ಹೊಟ್ಟೆನೋವು ಅಂತಾ ಬಂದು ಜೀವ ಬಿಟ್ಟ ಮಹಿಳೆ!


 

PREV
Read more Articles on
click me!

Recommended Stories

ನಾದಬ್ರಹ್ಮ ಇಡ್ಲಿ ಸೆಂಟರ್‌ ಮಾಲೀಕ, 28 ವರ್ಷದ ಸಂದೇಶ್‌ ಹೃದಯಾಘಾತದಿಂದ ಸಾವು
ಆನೆ ಕಾರಿಡಾರ್ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ