10 ಲಕ್ಷ ಮೌಲ್ಯದ ಈರುಳ್ಳಿ ತಿಪ್ಪೆಗೆಸೆದ ರೈತ

Published : Oct 16, 2020, 07:11 AM IST
10 ಲಕ್ಷ ಮೌಲ್ಯದ ಈರುಳ್ಳಿ ತಿಪ್ಪೆಗೆಸೆದ ರೈತ

ಸಾರಾಂಶ

ರೈತನೋರ್ವ ಬರೋಬ್ಬರಿ 10 ಲಕ್ಷ ಮೌಲ್ಯದ ಈರುಳ್ಳಿಯನ್ನು ತಿಪ್ಪಿಗೆ ಎಸೆದಿದ್ದಾನೆ. ಇದರಿಂದ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ.. 

ಕೊಪ್ಪಳ (ಅ.16): ಇನ್ನೇನು ಮಾರುಕಟ್ಟೆಗೆ ಒಯ್ಯಬೇಕಾದ ಈರುಳ್ಳಿ ಅತಿಯಾದ ಮಳೆಯಿಂದ ಕೊಳೆತು ಹೋಗಿದ್ದು, ಈಗಿನ ಮಾರುಕಟ್ಟೆದರಕ್ಕೆ ಬರೋಬ್ಬರಿ ಹತ್ತು ಲಕ್ಷ ರು. ಮೌಲ್ಯದ್ದಾಗುತ್ತಿದ್ದ ಈರುಳ್ಳಿಯನ್ನು ತಿಪ್ಪೆಗೆಸೆಯಲಾಗಿದೆ. ಇದರಿಂದ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ.

ಕೊಪ್ಪಳ ತಾಲೂಕಿನ ಹ್ಯಾಟಿ ಗ್ರಾಮದ ರೈತ ರಾಮಣ್ಣ ರಾಮರಡ್ಡಿ ಅವರು ತಮ್ಮ ಮೂರೂವರೆ ಎಕರೆಯಲ್ಲಿ ಬೆಳೆದಿದ್ದ ಈರುಳ್ಳಿ ಮಾರುಕಟ್ಟೆಗೆ ತಲುಪುವ ಮುನ್ನ ಕೊಳೆತು ಹೋಗಿದ್ದರಿಂದ ಗುರುವಾರ ತಿಪ್ಪೆಗೆ ಸುರಿದರು.

'ನೆರೆ ಹಾನಿಗೆ ತಕ್ಷಣ ವಿಶೇಷ ಅನುದಾನ' ...

ಟ್ರ್ಯಾಕ್ಟರ್‌ನಲ್ಲಿ ಕೊಳೆತ ಈರುಳ್ಳಿಯನ್ನು ತೆಗೆದುಕೊಂಡು ಹೋಗಿ ತಿಪ್ಪೆಗೆ ಹಾಕುತ್ತಿರುವ ದೃಶ್ಯ ಎಂಥವರ ಕಣ್ಣಲ್ಲಿಯೂ ನೀರು ಬರುವಂತಿತ್ತು. ಸುಮಾರು .90 ಸಾವಿರ ವೆಚ್ಚದಲ್ಲಿ ಬೆಳೆದಿದ್ದ ಬೆಳೆ ಚೆನ್ನಾಗಿಯೇ ಬಂದಿತ್ತು. ಆದರೆ, ಈ ವರ್ಷ ಅತಿಯಾದ ಕೊಳೆರೋಗವೂ ಇದ್ದಿದ್ದರಿಂದ ಅದನ್ನು ಕಾಪಾಡಿದ್ದೇ ಸಾಹಸ. ಇವತ್ತಿನ ಮಾರುಕಟ್ಟೆಯ ದರಕ್ಕೆ ಬರೋಬ್ಬರಿ 10 ಲಕ್ಷ ರು. ಈರುಳ್ಳಿಯಾಗುತ್ತಿತ್ತು. ದುರಾದೃಷ್ಟವಶಾತ್‌ ಎಡೆಬಿಡದೆ ಸುರಿದ ಈರುಳ್ಳಿ ರಾಶಿ ಮಾಡುವ ಮುನ್ನವೇ ಹೊಲದಲ್ಲಿಯೇ ಕೊಳೆತು ಹೋಗಿದೆ ಎಂದು ರೈತ ರಾಮಣ್ಣ ರಾಮರಡ್ಡಿ ಬೇಸರ ವ್ಯಕ್ತಪಡಿಸಿದರು.
 

PREV
click me!

Recommended Stories

ಉತ್ತರಕನ್ನಡದಲ್ಲಿ ಉಲ್ಟಾ, ವಿಜಯಪುರದಲ್ಲಿ ಅರ್ಧಕ್ಕೆ ಹಾರಾಡಿದ ರಾಷ್ಟ್ರಧ್ವಜ!
ಮದ್ಯಪಾನ ಮುಕ್ತವಾದ ಕೊಪ್ಪಳದ ಈ ಗ್ರಾಮಕ್ಕಿಂದು ರಾಜ್ಯಮಟ್ಟದ ಪ್ರಶಸ್ತಿ! ಇದು ಮಹಿಳೆಯರ ಹೋರಾಟದ ಫಲ