Karnataka Rain Update: ಸುಳ್ಯದಲ್ಲಿ ಅಬ್ಬರ ಮಳೆ, ಇಂದೂ ಭಾರಿ ಮಳೆ ನಿರೀಕ್ಷೆ

Published : Aug 05, 2022, 08:13 AM ISTUpdated : Aug 05, 2022, 08:20 AM IST
Karnataka Rain Update: ಸುಳ್ಯದಲ್ಲಿ ಅಬ್ಬರ ಮಳೆ, ಇಂದೂ ಭಾರಿ ಮಳೆ ನಿರೀಕ್ಷೆ

ಸಾರಾಂಶ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಭಾರೀ ಮಳೆಯಾಗಲಿದ್ದು, ಭಾರತೀಯ ಹವಾಮಾನ ಇಲಾಖೆ ರೆಡ್‌ ಅಲರ್ಟ್ ಘೋಷಿಸಿದೆ.  ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಳ ಸಾಧ್ಯತೆ ಇದ್ದು, ಗುಡುಗು ಮಳೆ ನಿರೀಕ್ಷಿಸಲಾಗಿದೆ.

ಮಂಗಳೂರು (ಆ.5) :ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ ಒಂದೇ ಪ್ರದೇಶದಲ್ಲಿ ಅಬ್ಬರದ ಮಳೆಯಾಗಿದೆ. ರಾಜ್ಯದ ಟಾಪ್‌ 10 ಗರಿಷ್ಠ ಮಳೆ ದಾಖಲಾದ ಪ್ರದೇಶಗಳ ಪೈಕಿ ಜಿಲ್ಲೆಯ 11 ಪ್ರದೇಶಗಳು ಸೇರಿವೆ. ಸುಳ್ಯ, ಸಂಪಾಜೆ ಹೊರತುಪಡಿಸಿದರೆ ಬೇರೆ ತಾಲೂಕುಗಳಲ್ಲಿ ಹಗಲು ಹೊತ್ತು ಮಳೆ ಪ್ರಮಾಣ ಕಡಿಮೆ. ಮಂಗಳೂರಿನಲ್ಲೂ ಮಳೆ ಅಷ್ಟಾಗಿ ಇರಲಿಲ್ಲ.

ಗ್ರಾಮೀಣ ಭಾಗದಲ್ಲಿ ಮಳೆ ಇಲ್ಲದಿದ್ದರೂ ಸುಳ್ಯ(Sulya) ತಾಲೂಕಿನ ಸಂಪಾಜೆ(Sampaje), ಬಳ್ಪ, ದೇವಚಳ್ಳಿ(Devachalli), ಗುತ್ತಿಗಾರುಗಳಲ್ಲಿ ಅತ್ಯಧಿಕ ಮಳೆ ದಾಖಲಾಗಿದೆ. ಕಡಬ ತಾಲೂಕಿನ ಶಿರಾಡಿ, ಕೊಂಬಾರು, ನೂಜಿಬಾಳ್ತಿಲ, ಬೆಳ್ತಂಗಡಿಯ ನಾರಾವಿ, ಸುಲ್ಕೇರಿಗಳಲ್ಲಿ ಭಾರಿ ಮಳೆಯಾಗಿದೆ. ಬೆಳಗ್ಗೆ 7 ಗಂಟೆ ವರೆಗೆ ಹಿಂದಿನ 24 ಗಂಟೆಗಳಲ್ಲಿ ಸಂಪಾಜೆಯಲ್ಲಿ ಜಿಲ್ಲೆಯಲ್ಲೇ ಅತ್ಯಧಿಕ 150 ಮಿಲಿ ಮೀಟರ್‌ ಮಳೆ ದಾಖಲಾಗಿದೆ.

ದಕ್ಷಿಣ ಕನ್ನಡದಲ್ಲಿ ಮತ್ತೆ ಭಾರೀ ಮಳೆ

ಭಾರತೀಯ ಹವಾಮಾನ ಇಲಾಖೆ(India Meteorological Department) ಪ್ರಕಾರ ಆ.5ರಂದು ಆರೆಂಜ್‌/ರೆಡ್‌(Orange/Red alert) ಅಲರ್ಚ್‌ ಇದ್ದು, ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿಯಲ್ಲಿ ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಳ ಸಾಧ್ಯತೆ ಇದ್ದು, ಗುಡುಗು ಮಳೆ ನಿರೀಕ್ಷಿಸಲಾಗಿದೆ.

ಗುರುವಾರ ಬೆಳಗ್ಗಿನ ವರೆಗೆ ಬೆಳ್ತಂಗಡಿ 29.5 ಮಿ.ಮೀ, ಬಂಟ್ವಾಳ 7.7 ಮಿ.ಮೀ, ಮಂಗಳೂರು 5.8 ಮಿ.ಮೀ, ಪುತ್ತೂರು 11.6 ಮಿ.ಮೀ, ಸುಳ್ಯ 57.1 ಮಿ.ಮೀ, ಮೂಡುಬಿದಿರೆ 57.1 ಮಿ.ಮೀ, ಕಡಬ 59.3 ಮಿ.ಮೀ. ಮಳೆಯಾಗಿದ್ದು, ಜಿಲ್ಲೆಯ ದಿನದ ಸರಾಸರಿ ಮಳೆ 30 ಮಿ.ಮೀ. ಆಗಿದೆ. ಉಪ್ಪಿನಂಗಡಿ ನೇತ್ರಾವತಿ, ಕುಮಾರಧಾರ ನದಿ 25.20 ಮೀಟರ್‌ ಹಾಗೂ ಬಂಟ್ವಾಳ ನೇತ್ರಾವತಿ ನದಿ 5.2 ಮೀಟರ್‌ ಮತ್ತು ಗುಂಡ್ಯ ನದಿ 3.7 ಮೀಟರ್‌ನಲ್ಲಿ ಹರಿಯುತ್ತಿದೆ.

ವಾಯುಭಾರ ಕುಸಿತ: ದಕ್ಷಿಣ, ಮಲೆನಾಡಲ್ಲಿ ಭಾರೀ ಮಳೆ ಸಾಧ್ಯತೆ, ಹೈಅಲರ್ಟ್‌

58 ಮಂದಿ ಸುರಕ್ಷಿತ ಸ್ಥಳಾಂತರ:

ಭಾರಿ ಮಳೆಗೆ 3 ಮನೆಗಳು ಪೂರ್ತಿ ಹಾನಿಯಾಗಿದ್ದು, 7 ಮನೆ ಭಾಗಶಃ ಹಾನಿಗೊಂಡಿದೆ. ಪ್ರಾಕೃತಿಕ ತೊಂದರೆಗೆ ಸಿಲುಕಿದ 58 ಮಂದಿಯನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. 4 ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದೆ. ಸುಳ್ಯದ ಕಲ್ಮಕಾರಿನ ಸರ್ಕಾರಿ ಶಾಲೆಯಲ್ಲಿ 21 ಮಂದಿಗೆ, ಸಂಪಾಜೆ ಸಜ್ಜನ ಪ್ರತಿಷ್ಠಾನದಲ್ಲಿ 12, ಸುಬ್ರಹ್ಮಣ್ಯ ಅನುಗ್ರಹ ವಸತಿಗೃಹದಲ್ಲಿ 19, ಏನೆಕಲ್‌ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 6 ಮಂದಿಯನ್ನು ಸೇರಿಸಲಾಗಿದೆ ಎಂದು ಜಿಲ್ಲಾಡಳಿತ ಮಾಹಿತಿ ತಿಳಿಸಿದೆ.

PREV
click me!

Recommended Stories

ಗಡುವು ಮೀರಿಸಿದರೆ ಮುಂದೆ ಕೆಲಸವಿಲ್ಲ: ಮೆಟ್ರೋ ಗುತ್ತಿಗೆದಾರರಿಗೆ ಡಿ.ಕೆ.ಶಿವಕುಮಾರ್‌ ಎಚ್ಚರಿಕೆ
ನಾನು ಲಂಚ ಪಡೆದಿದ್ದು ಸಾಬೀತಾದರೆ ರಾಜೀನಾಮೆ: ಗೃಹ ಸಚಿವ ಪರಮೇಶ್ವರ್‌