ಬೆಳಗಾವಿಯಲ್ಲಿ ಭಾರೀ ಗಾಳಿ-ಮಳೆ, ಗೋಡೆ ಕುಸಿದು ಅಜ್ಜಿ-ಮೊಮ್ಮಗ ಸಾವು

Published : May 16, 2021, 06:53 PM IST
ಬೆಳಗಾವಿಯಲ್ಲಿ ಭಾರೀ ಗಾಳಿ-ಮಳೆ, ಗೋಡೆ ಕುಸಿದು ಅಜ್ಜಿ-ಮೊಮ್ಮಗ ಸಾವು

ಸಾರಾಂಶ

* ಭಾರೀ ಗಾಳಿ-ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತ * ಹಾರಿಹೋದ  ಮನೆಗಳ ಹೆಂಚುಗಳು ಮತ್ತು ತಗಡಿನ ಶೀಟುಗಳು  * ಬೆಳಗಾವಿಯ ಖಾನಾಪುರ ತಾಲ್ಲೂಕಿನ ಪಾರವಾಡ ಗ್ರಾಮದಲ್ಲಿ ನಡೆದ  ಘಟನೆ

ಖಾನಾಪುರ (ಬೆಳಗಾವಿ), (ಮೇ.16): ಭಾರೀ ಗಾಳಿ-ಮಳೆಯಿಂದಾಗಿ ಖಾನಾಪುರ ತಾಲ್ಲೂಕಿನ ಪಾರವಾಡ ಗ್ರಾಮದ ಸರ್ಕಾರಿ ಶಾಲೆಯ ಕಟ್ಟಡದ ಮೇಚ್ಚಾವಣಿ ಹಾರಿ ಹೋಗಿದೆ. ಜೊತೆಗೆ ಗ್ರಾಮದ ಕೆಲವು ಮನೆಗಳ ಹೆಂಚುಗಳು ಮತ್ತು ತಗಡಿನ ಶೀಟುಗಳು ಹಾರಿಹೋಗಿ ತೀವ್ರ ಹಾನಿ ಸಂಭವಿಸಿದೆ. 

ಅಷ್ಟೇ ಅಲ್ಲ, ಗಾಳಿ ಮತ್ತು ಮಳೆಯಿಂದಾಗಿ ವಿದ್ಯುತ್ ಸರಬರಾಜಿನಲ್ಲಿ ತೊಂದರೆಯಾಗಿದೆ. ವಿದ್ಯುತ್ ತಂತಿಗಳು ಒಂದಕ್ಕೊಂದು ಸೇರಿಕೊಂಡಿದ್ದು, ಇದರ ಪರಿಣಾಮವಾಗಿ, ಈ ಪ್ರದೇಶಕ್ಕೆ ವಿದ್ಯುತ್ ಸರಬರಾಜು ಅಸ್ತವ್ಯಸ್ತಗೊಂಡಿದೆ.

ತೌಕ್ಟೆ ರೌದ್ರಾವತಾರ: ಕೊರೋನಾ ಮಧ್ಯೆಯೂ ಪರಿಹಾರ ನೀಡಲು ಸಿಎಂ ಬಿಎಸ್‌ವೈ ಸೂಚನೆ

 ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದೆ. ಗ್ರಾಮಸ್ಥರ ಮೊಬೈಲ್‌ಗಳು ಸ್ವಿಚ್ ಆಫ್ ಆಗಿವೆ ಮತ್ತು ಹಿಟ್ಟಿನ ಗಿರಣಿಗಳು ಸ್ಥಗಿತಗೊಂಡಿವೆ.
 ಹೆಸ್ಕಾಂ ಆದಷ್ಟು ಬೇಗ ವಿದ್ಯುತ್ ಮಾರ್ಗ ಸರಿಪಡಿಸಲು ಗ್ರಾಮದ ನಾಗರಿಕರು ಆಗ್ರಹಿಸಿದ್ದಾರೆ.

ಗೋಡೆ ಕುಸಿದು ಇಬ್ಬರು ಸಾವು
ಇಂದು (ಭಾನುವಾರ) ಖಾನಾಪುರ ತಾಲೂಕಿನ ಇಟಗಿ ಗ್ರಾಮದಲ್ಲಿ ಮನೆ ಗೋಡೆ ಕುಸಿದ ಪರಿಣಾಮ ದೊಡ್ಡವ್ವ ರುದ್ರಪ್ಪ ಪಟ್ಟೆದ (55) ಮತ್ತು ಅವರ ಮೊಮ್ಮಗ ಅಭಿಷೇಕ ಸುರೇಶ ಪಟ್ಟೆದ (3) ಇವರುಗಳು ಮೃತಪಟ್ಟಿದ್ದಾರೆ. 

ಶನಿವಾರ ರಾತ್ರಿಯಿಂದ ಗ್ರಾಮದಲ್ಲಿ ಸುರಿಯುತ್ತಿರುವ ಮಳೆ-ಗಾಳಿಗೆ ಇವರು ವಾಸವಿದ್ದ ಮನೆಯ ಗೋಡೆ ಕುಸಿದು ಬಿದ್ದು ಮೃತಪಟ್ಟಿರುತ್ತಾರೆ ಎಂದು ಘಟನಾ ಸ್ಥಳಕ್ಕೆ ಭೇಟಿ ನೀಡಿದ ನಂದಗಡ  ಪೊಲೀಸರು ತಿಳಿಸಿದ್ದಾರೆ. 

ಈ ಘಟನೆಯಲ್ಲಿ ದೊಡ್ಡವ್ವ ಅವರ ಮಗ ಸುರೇಶ್ ಮತ್ತು ಸೊಸೆ ಮಂಜುಳಾ ಗಂಭೀರವಾಗಿ ಗಾಯಗೊಂಡಿದ್ದು, ಅವರಿಗೆ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

PREV
click me!

Recommended Stories

ಮೀಸಲಾತಿ ವಿಚಾರದಲ್ಲಿ ಸರ್ಕಾರಗಳ ಬೇಜವಾಬ್ದಾರಿ ಸಲ್ಲದು: ವಿ.ಎಸ್.ಉಗ್ರಪ್ಪ ಅಸಮಾಧಾನ
ಕೊಂಕಣ ರೈಲ್ವೆಯ ಮೂಲ್ಕಿ ರೈಲು ನಿಲ್ದಾಣದ ಬಹುದೊಡ್ಡ ಬದಲಾವಣೆ, ಬಹುವರ್ಷದ ಪ್ರಯಾಣಿಕರ ಬಹುದಿನಗಳ ಕನಸು ನನಸು