ಬೆಂಗಳೂರಿಗೆ ಕಾದಿದೆ ಕಂಟಕ : ಹವಾಮಾನ ಇಲಾಖೆ ಅಲರ್ಟ್

Published : Aug 09, 2019, 12:51 PM IST
ಬೆಂಗಳೂರಿಗೆ ಕಾದಿದೆ ಕಂಟಕ : ಹವಾಮಾನ ಇಲಾಖೆ ಅಲರ್ಟ್

ಸಾರಾಂಶ

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಪ್ರವಾಹದಿಂದ ಜನರು ತತ್ತರಿಸಿದ್ದು, ಇದೀಗ ಬೆಂಗಳೂರಿಗೆ ಕೂಡ ಹೈ ಅಲರ್ಟ್ ನೀಡಲಾಗಿದೆ. 

ಬೆಂಗಳೂರು [ಆ.09]: ರಾಜ್ಯದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಹಲವು ಜಿಲ್ಲೆಗಳು ಪ್ರವಾದಿಂದ ತತ್ತರಿಸಿವೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಇದೇ ಬೆನ್ನಲ್ಲೇ ರಾಜಧಾನಿ ಬೆಂಗಳೂರಿಗೆ ಕಾದಿದೆ ಅಪಾಯ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. 

ಬೆಂಗಳೂರಿನಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ನಿಟ್ಟಿನಲ್ಲಿ ಸೂಕ್ತ ಎಚ್ಚರಿಕೆ ಕೈಗೊಳ್ಳಲು ಸೂಚನೆ ನೀಡಲಾಗಿದೆ. 

ಕರ್ನಾಟಕ ಪ್ರವಾಹದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಬೆಂಗಳೂರಿನ ಹಲವು ಪ್ರದೇಶಗಳಲ್ಲಿ 2 ಸೆ.ಮೀಟರ್ ನಿಂದ 6 ಸೆಂಟಿ ಮೀಟರ್ ವರೆಗೂ ಕೂಡ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. 

ಬೆಂಗಳೂರಿಗೂ ಜಲಕಂಟಕ ಎದುರಾಗುವ ಸಾಧ್ಯತೆ ಇದ್ದು ಬಿಬಿಎಂಪಿ ವ್ಯಾಪ್ತಿಯ ಹಲವು ಏರಿಯಾಗಳಿಗೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ತಿಳಿಸಲಾಗಿದೆ. 

PREV
click me!

Recommended Stories

Hassan: ಮೂರು ಮಕ್ಕಳಿದ್ದರೂ ಸಲಹುವವರಿಲ್ಲ, ಅನಾಥಾಶ್ರಮಕ್ಕೆ ಕಳಿಸಿ: ವೃದ್ಧ ದಂಪತಿ
₹46.33 ಲಕ್ಷ ವೇತನದ ಉದ್ಯೋಗ ಪಡೆದ ಆಳ್ವಾಸ್ ಕಾಲೇಜಿನ ಹಾವೇರಿ ರೈತನ ಮಗಳು ಸೃಷ್ಟಿ ಉಳ್ಳಾಗಡ್ಡಿ