ಕೊಪ್ಪಳ: ವಿರೂಪಾಪುರಗಡ್ಡೆ ರೆಸಾರ್ಟ್‌ ತೆರವಿಗೆ ಹೈಕೋರ್ಟ್‌ ತಡೆ

Kannadaprabha News   | Asianet News
Published : Feb 16, 2020, 07:50 AM IST
ಕೊಪ್ಪಳ: ವಿರೂಪಾಪುರಗಡ್ಡೆ ರೆಸಾರ್ಟ್‌ ತೆರವಿಗೆ ಹೈಕೋರ್ಟ್‌ ತಡೆ

ಸಾರಾಂಶ

ವಿರೂಪಾಪುರಗಡ್ಡೆಯಲ್ಲಿರುವ ಅನಧಿಕೃತ ರೆಸಾರ್ಟ್‌ ತೆರವಿಗೆ 10 ದಿನಗಳ ತಡೆಯಾಜ್ಞೆ ನೀಡಿದೆ ಹೈಕೋರ್ಟ್‌| ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿರುವ ವಿರೂಪಾಪುರಗಡ್ಡೆ| ಮುಂದಿನ ವಿಚಾರಣೆವರೆಗೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಕೋರ್ಟ್‌ ನಿರ್ದೇಶನ|

ಗಂಗಾವತಿ(ಫೆ.16): ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ವಿರೂಪಾಪುರಗಡ್ಡೆಯಲ್ಲಿರುವ ಅನಧಿಕೃತ ರೆಸಾರ್ಟ್‌ಗಳನ್ನು ತಕ್ಷಣದಿಂದಲೇ ತೆರವುಗೊಳಿಸಬೇಕೆಂಬ ಜಿಲ್ಲಾಡಳಿತ, ಹಂಪಿ ಪ್ರಾಧಿಕಾರದ ಕಾರ್ಯಕ್ಕೆ ಹೈಕೋರ್ಟ್‌ ಶನಿವಾರ 10 ದಿನಗಳ ತಡೆಯಾಜ್ಞೆ ನೀಡಿದೆ. 

ಮೂವತ್ತು ವರ್ಷಗಳಿಂದ ಅಕ್ರಮವಾಗಿ ನಿರ್ಮಿಸಿಕೊಂಡಿರುವ ರೆಸಾರ್ಟ್‌ಗಳನ್ನು ತೆರವುಗೊಳಿಸಬೇಕೆಂದು ಸುಪ್ರೀಂ ಕೋರ್ಟ್‌ ಫೆ.11ರಂದು ಆದೇಶ ಹೊರಡಿಸಿತ್ತು. ಜತೆಗೆ, ಸ್ವಯಂಪ್ರೇರಿತವಾಗಿ ರೆಸಾರ್ಟ್‌ ತೆರವುಗೊಳಿಸಲು ಅನುಕೂಲವಾಗುವಂತೆ ಒಂದು ತಿಂಗಳ ಕಾಲಾವಕಾಶವನ್ನೂ ನೀಡಿತ್ತು. ಆದರೆ, ಜಿಲ್ಲಾಡಳಿತ ಮತ್ತು ಹಂಪಿ ಪ್ರಾಧಿಕಾರವು ರೆಸಾರ್ಟ್‌ ಮಾಲೀಕರಿಗೆ ಶನಿವಾರದೊಳಗೆ ರೆಸಾರ್ಟ್‌ ತೆರವುಗೊಳಿಸುವಂತೆ ಸೂಚಿಸಿರುವ ಹಿನ್ನೆಲೆಯಲ್ಲಿ 15ಕ್ಕೂ ಹೆಚ್ಚು ರೆಸಾರ್ಟ್‌ ಮಾಲೀಕರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಅರ್ಜಿಯಲ್ಲಿ ಹಂಪಿ ಮಹಾಯೋಜನೆ ಕುರಿತು ಮಾಲೀಕರು ಆಕ್ಷೇಪ ವ್ಯಕ್ತಪಡಿಸಿದ್ದರು. ಹಂಪಿ ಮಹಾಯೋಜನೆ ಸಿದ್ಧಪಡಿಸಿದ ಮಾಹಿತಿಯೇ ಸರಿಯಿಲ್ಲ ಎಂದು ಅರ್ಜಿ ಸಲ್ಲಿಸಿದ್ದರಿಂದ ಕೋರ್ಟ್‌ ಈ ತಡೆಯಾಜ್ಞೆ ನೀಡಿದೆ. ಫೆ.24ರಂದು ಈ ಕುರಿತು ಮುಂದಿನ ವಿಚಾರಣೆ ನಡೆಯಲಿದ್ದು, ಅಲ್ಲಿಯವರೆಗೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಕೋರ್ಟ್‌ ನಿರ್ದೇಶನ ನೀಡಿದೆ.
 

PREV
click me!

Recommended Stories

ಕರಡಿ ದಾಳಿಗೆ ಕುರಿಗಾಹಿ ಓಬಣ್ಣ ಸಾವು; ರೊಚ್ಚಿಗೆದ್ದ ಜನರಿಂದ ದೊಣ್ಣೆಯ ಹೊಡೆತ ತಿಂದು ಪ್ರಾಣಬಿಟ್ಟ ಜಾಂಬವಂತ!
ತನಿಖೆ ಮಾಡಿದ ಪೊಲೀಸ್ ಅಧಿಕಾರಿಯನ್ನೇ ಆರೋಪಿಯನ್ನಾಗಿ ಮಾಡಿ: ಕೋರ್ಟ್‌ನಲ್ಲಿ ವಿಚಿತ್ರ ಬೇಡಿಕೆಯಿಟ್ಟ ನಟ ದರ್ಶನ್ ಸಹಚರ!