ಏನೂ ತಿಳಿಯದ ಪ್ರಾಯದಲ್ಲಿ ಪ್ರೀತಿ-ಪ್ರೇಮ, ಮನೆಯಲ್ಲಿ ಗೊತ್ತಾಗಿದ್ದಕ್ಕೆ ಓಡಿ ಹೋದ ಹಿಂದೂ-ಮುಸ್ಲಿಂ ಅಪ್ರಾಪ್ತ ಜೋಡಿ!

Published : May 29, 2024, 06:17 PM IST
ಏನೂ ತಿಳಿಯದ ಪ್ರಾಯದಲ್ಲಿ ಪ್ರೀತಿ-ಪ್ರೇಮ, ಮನೆಯಲ್ಲಿ ಗೊತ್ತಾಗಿದ್ದಕ್ಕೆ ಓಡಿ ಹೋದ ಹಿಂದೂ-ಮುಸ್ಲಿಂ ಅಪ್ರಾಪ್ತ ಜೋಡಿ!

ಸಾರಾಂಶ

ಆತ ಹಿಂದೂ ಯುವಕ ಆಕೆ ಮುಸ್ಲಿಂ ಬಾಲಕಿ ಏನೂ ತಿಳಿಯದ ಸಣ್ಣ  ವಯಸ್ಸಿಗೆ ಇಬ್ಬರಿಗೂ ಪ್ರೇಮಾಂಕುರವಾಯ್ತು.  ಮನೆಯಲ್ಲಿ ಗೊತ್ತಾಗುತ್ತಿದ್ದಂತೆಯೇ  ಬಳ್ಳಾರಿಯ ಅಪ್ರಾಪ್ತ ಜೋಡಿ ಪರಾರಿಯಾಗಿದೆ.

ಬಳ್ಳಾರಿ (ಮೇ.29): ಆತ ಹಿಂದೂ ಯುವಕ ಆಕೆ ಮುಸ್ಲಿಂ ಬಾಲಕಿ ಏನೂ ತಿಳಿಯದ ಸಣ್ಣ  ವಯಸ್ಸಿಗೆ ಇಬ್ಬರಿಗೂ ಪ್ರೇಮಾಂಕುರವಾಯ್ತು.  ಒಬ್ಬರನ್ನೊಬ್ಬರು ಬಿಟ್ಟಿರಲಾರದಷ್ಟು ಗಾಢವಾಗಿ ಪ್ರೀತಿ ಮಾಡುತ್ತಿದ್ದರು. ಆದರೆ ಅದು ಹೇಗೂ ಇವರಿಬ್ಬರ ಪ್ರೀತಿ ಮನೆಯವರಿಗೆ ಗೊತ್ತಾಗಿ ಹೋಯ್ತು. ಇಬ್ಬರ ಮನೆಯಲ್ಲಿ ಪ್ರೀತಿ ವಿಷಯ ಗೊತ್ತಾಗಿದ್ದೇ ತಡ ಮನೆಯಲ್ಲಿ ಬೈದು ಬುದ್ದಿ ಹೇಳಿದ್ದಾರೆ. ಆದರೆ ಅಷ್ಟಕ್ಕೇ ಸುಮ್ಮನಾಗದ ಈ ಪ್ರಣಯ ಪಕ್ಷಿಗಳು ಈಗ ಮನೆ ಬಿಟ್ಟು ಓಡಿ ಹೋಗಿವೆ. 15 ದಿನದಿಂದ ನಾಪತ್ತೆಯಾಗಿದ್ದು, ಸದ್ಯ ಇವರ ಹುಡುಕಾಟ ನಡೆಯುತ್ತಿದೆ.

ಕ್ಯಾನ್ಸರ್‌ ಆತಂಕದಲ್ಲಿ ದೆಹಲಿ ಸಿಎಂ ಕೇಜ್ರಿವಾಲ್‌, ಜಾಮೀನು ವಿಸ್ತರಣೆ ನಿರಾಕರಿಸಿದ ಸುಪ್ರೀಂ

 ಬಳ್ಳಾರಿ ಜಿಲ್ಲೆ ಸಿರಗುಪ್ಪ ಪಟ್ಟಣ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮುಸ್ಲಿಂ ಯುವತಿ ಮತ್ತು ಹಿಂದೂ ಯುವಕ ಈಗ ಮನೆ ಬಿಟ್ಟು ಪರಾರಿಯಾಗಿದ್ದಾರೆ. ಪ್ರೀತಿ ವಿಷಯ ಎರಡೂ ಕಡೆ ಮನೆಯವರಿಗೆ  ಗೊತ್ತಾಗುತ್ತಿದಂತೆ ಎಸ್ಕೇಪ್ ಆಗಿದ್ದು, ಹದಿನೈದು ದಿನಗಳ ಹಿಂದೆ ಮನೆಯಿಂದ  ನಾಪತ್ತೆಯಾದವರು ಈವರೆಗೆ ಪತ್ತೆಯಾಗಿಲ್ಲ.

ಕಾರ್ಗಿಲ್ ದಾಳಿ ನಮ್ಮದೇ ತಪ್ಪು, 24 ವರ್ಷಗಳ ನಂತರ ತಪ್ಪೊಪ್ಪಿಕೊಂಡ ನವಾಜ್ ಷರೀಫ್!

16 ವರ್ಷದ ಮುಸ್ಲಿಂ ಯುವತಿ ಮತ್ತು 20 ವರ್ಷದ ಹಿಂದೂ ಯುವಕ ಎಸ್ಕೇಪ್ ಆಗಿದ್ದು, ಯುವಕನನ್ನು ಪರಮೇಶ  ಎಂದು ಗುರುತಿಸಲಾಗಿದೆ. ಈ ಅಪ್ರಾಪ್ತ ಜೋಡಿಗಳು ಪರಸ್ಪರ ಪ್ರೀತಿಸುತ್ತಿದ್ದರು. ಇದೀಗ 15 ದಿನದಿಂದ ಪ್ರೇಮಿಗಳು ನಾಪತ್ತೆಯಾದ ಹಿನ್ನೆಲೆ ಸಿರಗುಪ್ಪ ಪೊಲೀಸ್ ಠಾಣೆಯಲ್ಲಿ ಅಪ್ರಾಪ್ತ ಯುವಕ ಪರಮೇಶ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. ಯುವತಿಯನ್ನ ಹುಡುಕಿಕೊಡುವಂತೆ ಆಕೆಯ ಪೋಷಕರು ಪೊಲೀಸರ ಮೊರೆ ಹೋಗಿದ್ದಾರೆ. ಸದ್ಯ ಅನ್ಯಕೋಮಿನ ಜೋಡಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

PREV
Read more Articles on
click me!

Recommended Stories

ಯುವತಿಗೆ ಸೋಷಿಯಲ್ ಮೀಡಿಯಾದಲ್ಲಿ ವಿಶ್‌ ಮಾಡಿದ್ದಕ್ಕೆ ಯುವಕನ ಹತ್ಯೆ, ಬೆಚ್ಚಿಬಿದ್ದ ಚಿಕ್ಕಮಗಳೂರು!
ನಿಟ್ಟೆ ಶಿಕ್ಷಣ ಸಂಸ್ಥೆಯ ಸ್ಥಾಪಕ, ಸಂತೋಷ್ ಹೆಗ್ಡೆ ಸೋದರ ವಿನಯ್ ಹೆಗ್ಡೆ ನಿಧನ