ಡ್ರಗ್ಸ್‌ ಮಾಹಿತಿ ಇದ್ದರೂ ನಿರ್ಲಕ್ಷಿಸಿದ ಪೊಲೀಸರ ವಿರುದ್ಧವೇ ಕ್ರಮ: ಬೊಮ್ಮಾಯಿ

Kannadaprabha News   | Asianet News
Published : Mar 20, 2020, 08:42 AM IST
ಡ್ರಗ್ಸ್‌ ಮಾಹಿತಿ ಇದ್ದರೂ ನಿರ್ಲಕ್ಷಿಸಿದ ಪೊಲೀಸರ ವಿರುದ್ಧವೇ ಕ್ರಮ: ಬೊಮ್ಮಾಯಿ

ಸಾರಾಂಶ

ಆರೋಪಿಗಳ ವಿರುದ್ಧ ಗೂಂಡಾ ಕಾಯ್ದೆ ಪ್ರಯೋಗ| ಮಾದಕವಸ್ತು ಮಾರಾಟದ ಜಾಲದ ಬಗ್ಗೆ ಮಾಹಿತಿ ಇದ್ದೂ ಕ್ರಮ ಕೈಗೊಳ್ಳಲು ಹಿಂದೇಟು ಹಾಕುವ ಪೊಲೀಸರ ವಿರುದ್ಧ ಮುಲಾಜಿಲ್ಲದೆ ಕ್ರಮ|

ಬೆಂಗಳೂರು(ಮಾ.20): ರಾಜಧಾನಿ ಬೆಂಗಳೂರು ರಾಜ್ಯದ ಮಾದಕ ವಸ್ತುಗಳ ಮಾಫಿಯಾ ಬಗ್ಗೆ ಮಾಹಿತಿ ಇದ್ದೂ ಕ್ರಮ ಕೈಗೊಳ್ಳದ ಪೊಲೀಸ್‌ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಎಚ್ಚರಿಸಿದ್ದಾರೆ.

ಗುರುವಾರ ಪ್ರಶ್ನೋತ್ತರ ವೇಳೆ ಕಾಂಗ್ರೆಸ್‌ ಸದಸ್ಯ ಎಂ.ನಾರಾಯಣಸ್ವಾಮಿ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ ಡ್ರಗ್‌ ಮಾಫಿಯಾ ವ್ಯವಸ್ಥಿತವಾಗಿ ಕೆಲಸ ಮಾಡುತ್ತಿದ್ದು, ಚಿಕ್ಕಮಕ್ಕಳು ಈ ಮಾಫಿಯಾಕ್ಕೆ ಬಲಿಯಾಗುತ್ತಿದ್ದಾರೆ. ಈ ಡ್ರಗ್‌ ಜಾಲದಿಂದ ಅಪರಾಧ ಕೃತ್ಯಗಳು ಹೆಚ್ಚಾಗುತ್ತಿವೆ. ಮಾದಕವಸ್ತು ಮಾರಾಟದ ಜಾಲದ ಬಗ್ಗೆ ಮಾಹಿತಿ ಇದ್ದೂ ಕ್ರಮ ಕೈಗೊಳ್ಳಲು ಹಿಂದೇಟು ಹಾಕುವ ಪೊಲೀಸರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.

ಡ್ರಗ್ಸ್‌ ಜಾಲದ ಬೆನ್ನುಮೂಳೆ ಮುರೀತೇವೆ: ಬೊಮ್ಮಾಯಿ

ವಿದೇಶಿ ಪ್ರಜೆಗಳು ಈ ಡ್ರಗ್‌ ಮಾಫಿಯಾದಲ್ಲಿ ತೊಡಗಿಸಿಕೊಂಡಿದ್ದಾರೆ. ವಿದ್ಯಾರ್ಥಿ ವೀಸಾ ಪಡೆದು ಅವಧಿ ಮುಗಿದರೂ ಅಕ್ರಮವಾಗಿ ನೆಲೆಸುತ್ತಿದ್ದಾರೆ. ಕೆಲವರು ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿ ಪ್ರಕರಣ ಮುಗಿಯುವವರೆಗೂ ಇಲ್ಲೇ ಉಳಿಯುತ್ತಿದ್ದಾರೆ. ಆಫ್ರಿಕಾ, ಕೀನ್ಯಾ, ಬಾಂಗ್ಲಾ ದೇಶ ಸೇರಿದಂತೆ ವಿವಿಧ ದೇಶಗಳ ಪ್ರಜೆಗಳು ಈ ಡ್ರಗ್‌ ಮಾಫಿಯಾದಲ್ಲಿ ಇದ್ದಾರೆ. ಇದನ್ನು ಮಟ್ಟಹಾಕಲು ರಾಜ್ಯದಲ್ಲಿ ಮೊದಲ ಬಾರಿಗೆ ಮಾದಕವಸ್ತು ಪ್ರಕರಣಗಳ ಆರೋಪಿಗಳ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಜೈಲಿಗಟ್ಟಲಾಗುತ್ತಿದೆ ಎಂದರು.

ತೆರೆಯಿಂದ ಮರೆಯಾದ ಗಾಯಕಿ; ಡ್ರಗ್ಸ್‌ ನೀಡಿ ಅತ್ಯಾಚಾರ ಮಾಡಿದ ಕಿಡಿಗೇಡಿಗಳು!

ರಾಜ್ಯದಲ್ಲಿ ಕಳೆದ ಆರು ತಿಂಗಳಲ್ಲಿ 1,600ಕ್ಕೂ ಅಧಿಕ ಪ್ರಕರಣಗಳನ್ನು ದಾಖಲಿಸಲಾಗಿದೆ. ಈ ಪೈಕಿ ಕೆ.ಆರ್‌. ಪುರ ವ್ಯಾಪ್ತಿಯಲ್ಲೇ 67 ಪ್ರಕರಣ ದಾಖಲಿಸಿ 89 ಆರೋಪಿಗಳನ್ನು ಬಂಧಿಸಲಾಗಿದೆ. ಈ ಪ್ರಕರಣದಡಿ ನಗರದಲ್ಲಿ 303 ಮಂದಿಯನ್ನು ಬಂಧಿಸಲಾಗಿದೆ. ಮಾದಕ ವಸ್ತು ಸೇವಿಸುವ ಹಾಗೂ ಮಾರಾಟ ಮಾಡುವ ಗ್ಯಾಂಗ್‌ಗಳನ್ನು ಹಿಡಿದು ಹೆಡೆಮುರಿ ಕಟ್ಟಲು ಎಲ್ಲ ಡಿಸಿಪಿಗಳಿಗೆ ಸೂಚಿಸಲಾಗಿದೆ. ಪ್ರತಿ ದಿನ ಕಾರ್ಯಾಚರಣೆ ಸಂಘಟಿಸಿ, ವರದಿ ನೀಡುವಂತೆ ನಿರ್ದೇಶನ ನೀಡಿದ್ದೇನೆ ಎಂದರು.
 

PREV
click me!

Recommended Stories

ಪ್ರಿ ವೆಡ್ಡಿಂಗ್ ಫೋಟೋ ಶೂಟ್ ಮುಗಿಸಿ ಬೈಕ್‌ನಲ್ಲಿ ತೆರಳುತ್ತಿದ್ದ ಜೋಡಿಗೆ ಲಾರಿ ಡಿಕ್ಕಿ, ಸ್ಥಳದಲ್ಲೇ ಸಾವು
ಕಾಂಗ್ರೆಸ್ ಸರ್ಕಾರ ಶೇ.60ರಷ್ಟು ಭ್ರಷ್ಟಾಚಾರದಲ್ಲಿ ಮುಳುಗಿದೆ: ಮಾಜಿ ಸಚಿವ ಬಿ.ಸಿ.ಪಾಟೀಲ್ ಆರೋಪ