ಹುಣಸೂರಲ್ಲಿ ಸಿದ್ದರಾಮಯ್ಯಗೆ ಜೈಕಾರ : ಬಿಜೆಪಿ ಮುಖಂಡಗೆ ಘೇರಾವ್

Published : Dec 02, 2019, 01:45 PM ISTUpdated : Dec 02, 2019, 01:49 PM IST
ಹುಣಸೂರಲ್ಲಿ ಸಿದ್ದರಾಮಯ್ಯಗೆ ಜೈಕಾರ : ಬಿಜೆಪಿ ಮುಖಂಡಗೆ ಘೇರಾವ್

ಸಾರಾಂಶ

ಹುಣಸೂರಿನಲ್ಲಿ ರಾಜೀನಾಮೆ ನೀಡಿ ಈಗ ಬಿಜೆಪಿ ಚುನಾವಣೆ ಅಭ್ಯರ್ಥಿ ಆಗಿರುವ ಎಚ್. ವಿಶ್ವನಾಥ್ ಮೇಲೆ ಇಲ್ಲಿನ ಜನರು ಮುನಿಸು ಇನ್ನೂ ಮುಗಿದಂತೆ ಕಾಣುತ್ತಿಲ್ಲ. 

ಮೈಸೂರು [ಡಿ.02]: ಹುಣಸೂರು ಕ್ಷೇತ್ರದಿಂದ ಗೆಲುವು ಸಾಧಿಸಿ ರಾಜೀನಾಮೆ ನೀಡಿ ಮತ್ತೊಮ್ಮೆ ಚುನಾವಣೆಗೆ ಸ್ಪರ್ಧಿಸಿರುವ ಎಚ್. ವಿಶ್ವನಾಥ್ ವಿರುದ್ಧ ಮತದಾರನ ಮುನಿಸು ಮುಗಿದಂತೆ ಕಾಣುತ್ತಿಲ್ಲ. ಇದೀಗ ಪ್ರಚಾರಕ್ಕೆ ತೆರಳಿದ್ದಾಗ ಮತ್ತೊಮ್ಮೆ ಆಕ್ರೋಶ ಹೊರಹಾಕಿದ್ದಾರೆ. 

ಹುಣಸೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ವಿಶ್ವನಾಥ್ ಪರವಾಗಿ ಪ್ರಚಾರಕ್ಕೆ ತೆರಳಿದ್ದ ಬಿಜೆಪಿಯ ವಿಜಯ್ ಶಂಕರ್ ಗೆ ಹುಣಸೂರು ತಾಲೂಕಿನ ಮಲ್ಲಯ್ಯನ ಗೌಡನ ಕೊಪ್ಪಲು ಗ್ರಾಮದಲ್ಲಿ ಘೇರಾವ್ ಹಾಕಿದ್ದಾರೆ. 

ವಿಶ್ವನಾಥ್ ಪರ ಪ್ರಚಾರಕ್ಕೆ ತೆರಳಿದ್ದ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಪರವಾಗಿ ಜನರು ಘೋಷಣೆ ಕೂಗಿ ಜೈಕಾರ ಹಾಕಿದ್ದಾರೆ. ಇದರಿಂದ ವಿಶ್ವನಾಥ್ ಪರವಾಗಿ ಮತಯಾಚನೆಗೆ ತೆರಳಿದ್ದ ವಿಜಯ ಶಂಕರ್ ಮುಜುಗರ ಎದುರಿಸುವಂತಾಯಿತು. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಕೆಲದಿನಗಳ ಹಿಂದಷ್ಟೇ ವಿಜಯ ಶಂಕರ್ ಕಾಂಗ್ರೆಸ್ ತೊರೆದು ತಮ್ಮ ಮಾತೃಪಕ್ಷವಾಗಿ ಬಿಜೆಪಿ ವಾಪಸಾಗಿದ್ದು, ಇದೀಗ ಉಪಚುನಾವಣೆ ಹಿನ್ನೆಲೆಯಲ್ಲಿ ಭರ್ಜರಿ ಪ್ರಚಾರ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. 

ಡಿಸೆಂಬರ್ 5ರಂದು ರಾಜ್ಯದಲ್ಲಿ ಉಪ ಚುನಾವಣೆ ನಡೆಯಲಿದ್ದು, ಡಿಸೆಂಬರ್ 9 ರಂದು 15 ಕ್ಷೇತ್ರಗಳ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

PREV
click me!

Recommended Stories

'ಕುಡುಕರ ಲಿವರ್‌ಗೆ ಸರ್ಕಾರದ ಗ್ಯಾರಂಟಿ ಕೊಡಿ..' ಅಬಕಾರಿ ಆದಾಯ ಹೆಚ್ಚಿಸಲು ಖತರ್ನಾಕ್‌ ಐಡಿಯಾ ಕೊಟ್ಟ ಬಿಜೆಪಿ MLC
ನೆಲಮಂಗಲದಲ್ಲಿ ಹಸುವಿನ ಕತ್ತು ಕೊಯ್ದು ವಿಕೃತಿ ಮೆರೆದ ಕಳ್ಳರು; ಬೆಚ್ಚಿಬಿದ್ದ ಗ್ರಾಮಸ್ಥರು