ಎಣ್ಣೆ ಕುಡಿಯಲು ಹಣ ನೀಡದ್ದಕ್ಕೆ ಸ್ಕೂಟರ್‌ ಹಾಯಿಸಿ ಹೆಂಡತಿಯನ್ನೇ ಕೊಂದ ಪಾಪಿ ಗಂಡ..!

Kannadaprabha News   | Asianet News
Published : May 06, 2020, 11:15 AM ISTUpdated : May 06, 2020, 11:16 AM IST
ಎಣ್ಣೆ ಕುಡಿಯಲು ಹಣ ನೀಡದ್ದಕ್ಕೆ ಸ್ಕೂಟರ್‌ ಹಾಯಿಸಿ ಹೆಂಡತಿಯನ್ನೇ ಕೊಂದ ಪಾಪಿ ಗಂಡ..!

ಸಾರಾಂಶ

ಮದ್ಯ ಕುಡಿಯಲು ಹಣ ಕೊಡದ ಪತ್ನಿಯನ್ನ ಕೊಂದ ಗಂಡ| ಬಾಗಲಕೋಡೆ ಜಿಲ್ಲೆಯ ಇಳಕಲ್‌ ಪಟ್ಟಣದಲ್ಲಿ ನಡೆದ ಘಟನೆ| ಮಗ ರಾಮು ನೀಡಿದ ದೂರಿನ ಮೇರೆಗೆ ಪತಿ ಚಂದಪ್ಪನನ್ನ ಬಂಧಿಸಿದ ಪೊಲೀಸರು|

ಬಾಗಲಕೋಟೆ(ಮೇ.06): ಮದ್ಯ ಕುಡಿಯಲು ಹಣ ಕೊಡದ ಪತ್ನಿಗೆ ಪತಿ ಹಿಂಬದಿಯಿಂದ ಸ್ಕೂಟರ್‌ ಡಿಕ್ಕಿ ಹೊಡೆಸಿದ ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್ಲ ಪಟ್ಟಣದಲ್ಲಿ ಸೋಮವಾರ ನಡೆದಿದ್ದು, ಸ್ಕೂಟರ್‌ ಡಿಕ್ಕಿಯ ರಭಸಕ್ಕೆ ಗಾಯಗೊಂಡಿದ್ದ ಪತ್ನಿಯನ್ನು ಬಾಗಲಕೋಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಸೋಮವಾರ ರಾತ್ರಿಯೇ ಸಾವನ್ನಪ್ಪಿದ್ದಾರೆ.

ಇಳಕಲ್ಲ ನಗರದ ಶಾರದಾ ಚೌವ್ಹಾಣ(36) ಎಂಬುವರು ಬಾಗಲಕೋಟೆಯ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಮಗ ರಾಮು ನೀಡಿದ ದೂರಿನ ಮೇರೆಗೆ ಪತಿ ಚಂದಪ್ಪ ಎಂಬುವರನ್ನು ಪೊಲೀಸರು ಸ್ಕೂಟರ್‌ ಸಮೇತ ವಶಕ್ಕೆ ಪಡೆದಿದ್ದಾರೆ.

ಗರ್ಭಿಣಿಗೆ ಕೊರೋನಾ ಸೋಂಕು: ಉಡಿ ತುಂಬಿದವರಿಗೆ ಆತಂಕ 

ಪತ್ನಿ ಶಾರದಾ ಇಳಕಲ್ಲ ನಗರದ ಜೋಶಿ ಗಲ್ಲಿಯಲ್ಲಿ ಬಾಂಡೆ ತಿಕ್ಕುವ ಕೆಲಸಕ್ಕೆ ಹೋಗಿ ಬರುವಾಗ ಕುಡಿಯಲು ಹಣ ಕೇಳಿದ ಪತಿಗೆ ಹಣ ನೀಡದ ಕಾರಣಕ್ಕೆ ಸಿಟ್ಟಾಗಿ ಸ್ಕೂಟರ್‌ನಿಂದ ಡಿಕ್ಕಿ ಹೊಡಿಸಿದ್ದನು. ಇದರಿಂದ ತಲೆ ಹಾಗೂ ಭುಜಕ್ಕೆ ಗಂಭೀರ ಗಾಯವಾಗಿ ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಶಾರದಾ ಸಾವನ್ನಪ್ಪಿದ್ದಾರೆ. ಇಳಕಲ್ಲ ನಗರ ಪಿಎಸ್‌ಐ ರಮೇಶ ಜಲಗಾರ ಪ್ರಕರಣ ದಾಖಲಿಸಿಕೊಂಡು ಆರೋಪಿ ಚಂದಪ್ಪನನ್ನು ಬಂಧಿಸಿ ತನಿಖೆ ನಡೆಸಿದ್ದಾರೆ.
 

PREV
click me!

Recommended Stories

ವೃದ್ಧೆಯ ಕೇರ್ ಟೇಕರ್‌ನಿಂದಲೇ ₹31 ಲಕ್ಷ ಮೌಲ್ಯದ ಚಿನ್ನಾಭರಣ ಕಳವು: ಬಿಹಾರ ಮೂಲದ ಚಾಂದಿನಿ ಬಂಧನ!
ಡೆವಿಲ್ ಬ್ಯಾನರ್‌ನಲ್ಲಿ 'ಡಾ.ಅಂಬೇಡ್ಕರ್ ತಲೆಮೇಲೆ ಕೊಲೆ ಆರೋಪಿ' ಕೂರಿಸಿದ ಅಂದಾಭಿಮಾನಿಗಳು!