ಜಮಖಂಡಿ ಕ್ಷೇತ್ರದ ಬಿಜೆಪಿ ಟಿಕೆಟ್‌ಗೆ ನಾನೂ ಆಕಾಂಕ್ಷಿ : ಮೋಹನ್

By Kannadaprabha NewsFirst Published Jan 12, 2023, 5:16 AM IST
Highlights

ಬಿಜೆಪಿಯಿಂದ ಜಮಖಂಡಿಗೆ ಸ್ಪರ್ಧೆ ಮಾಡಲು ನಾನು ಆಕಾಂಕ್ಷಿಯಾಗಿದ್ದೇನೆ ಎಂದು ಬಿಜೆಪಿ ಮುಖಂಡ ಮೋಹನ್‌ ಜಾಧವ ಹೇಳಿದರು.

 ಬಾಗಲಕೋಟೆ :  ಬಿಜೆಪಿಯಿಂದ ಜಮಖಂಡಿಗೆ ಸ್ಪರ್ಧೆ ಮಾಡಲು ನಾನು ಆಕಾಂಕ್ಷಿಯಾಗಿದ್ದೇನೆ ಎಂದು ಬಿಜೆಪಿ ಮುಖಂಡ ಮೋಹನ್‌ ಜಾಧವ ಹೇಳಿದರು.

ನವನಗರದ ಪತ್ರಿಕಾಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2008ರಲ್ಲಿ ನಾನು ಮತ್ತು ನಮ್ಮ ಹಿರಿಯ ನಾಯಕರಾದ ಶ್ರೀಕಾಂತ ಕುಲಕರ್ಣಿ ಅವರು ಪ್ರಬಲ ಆಕಾಂಕ್ಷಿಗಳಾಗಿದ್ದೆವು. ಆದರೆ, ಕುಲಕರ್ಣಿಯವರು ನನಗೆ ಇದೊಂದು ಬಾರಿ ಸ್ಪರ್ಧಿಸಲು ಅವಕಾಶ ಕೊಡಿ, ನಿಮಗೆ ಇನ್ನೂ ವಯಸ್ಸು ಇದೆ. ಮುಂದಿನ ಬಾರಿ ಸ್ಪರ್ಧಿಸುವಿರಂತೆ ಎಂದು ಮನವಿ ಮಾಡಿಕೊಂಡಾಗ ನಾನು ಸ್ಪರ್ಧೆಯಿಂದ ಹಿಂದೆ ಸರಿದಿದ್ದೆ. ಇಷ್ಟಾದರೂ ಪಕ್ಷ ಯಾರಿಗೆ ಟಿಕೆಟ್‌ ಕೊಟ್ಟರೂ ಪಕ್ಷದ ಜಯಕ್ಕಾಗಿ ದುಡಿಯುವೆ ಎಂದು ತಿಳಿಸಿದ್ದಾರೆ.

ಮುರುಗೇಶ ನಿರಾಣಿ ಜಮಖಂಡಿ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂದು ಸುದ್ದಿ ಹರಡಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಜಾಧವ, ನಿರಾಣಿಯವರು ಬೀಳಗಿ ಕ್ಷೇತ್ರ ಬಿಟ್ಟು ಎಲ್ಲಿಯೂ ಸ್ಪರ್ಧೆ ಮಾಡುವುದಿಲ್ಲ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಲ್ಲಪ್ಪ ವಡೆಯರ್‌, ಕಾಶಪ್ಪ ಚವ್ಹಾಣ್‌, ಭೀಮು ಹರಿಕರ, ಮಹದೇವ ಮಾಳಿ, ಧೂಮಕೇತು ನಾಂದ್ರೇಕರ ಉಪಸ್ಥಿತರಿದ್ದರು.

ಮತಗಟ್ಟೆ ಗೆಲುವಿಗೆ ರಣತಂತ್ರ

ತುಮಕೂರು :  ಬಿಜೆಪಿಯು ಪ್ರತಿ ಮತಗಟ್ಟೆಗಳಲ್ಲಿ ಪೇಜ್‌ ಹಾಗೂ ವಾರ್ಡ್‌ ಸಮಿತಿ ರಚನೆ, ಬೂತ್‌ ಪದಾಧಿಕಾರಿಗಳ ಹಾಗೂ ಪಂಚರತ್ನಗಳ ಕಾರ್ಯನಿರ್ವಹಣೆ, ವಾಟ್ಸ್ಯಾಪ್‌ ಗ್ರೂಪ್‌ ರಚನೆ, ಕೀವೋಟ​ರ್‍ಸ್, ಪ್ರತೀ ತಿಂಗಳ ಅಂತ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿರವರ ಮನ್‌ ಕೀ ಬಾತ್‌ ಕಾರ್ಯಕ್ರಮ ಆಯೋಜನೆ ಮತ್ತು ಎಲ್ಲಾ ವರ್ಗ, ಸಮುದಾಯಗಳ ಮತದಾರರನ್ನು ವಿಶ್ವಾಸಕ್ಕೆ ಪಡೆಯುವ ದೃಷ್ಟಿಯಿಂದ ಬೂತ್‌ ವಿಜಯ್‌ ಅಭಿಯಾನವನ್ನು ನಡೆಸುತ್ತಿದೆ ಎಂದು ಬಿಜೆಪಿ ಜಿಲ್ಲಾ ವಕ್ತಾರ ಹಾಗೂ ಸೋಮೇಶ್ವರ ಶಕ್ತಿಕೇಂದ್ರದ ವಾರ್ಡ್‌ 25ರ ಪ್ರಭಾರಿ ಕೆ.ಪಿ.ಮಹೇಶ ತಿಳಿಸಿದರು.

ನಗರದ ಸೋಮೇಶ್ವರಪುರಂನ ವಾರ್ಡ್‌ 25ರ ಮತಗಟ್ಟೆ ಸಂಖ್ಯೆ 167ರ ವಾರ್ಡ್‌ ಅಧ್ಯಕ್ಷ ರಾಜ್‌ ಕುಮಾರ್‌ ಗುಪ್ತರವರ ಮನೆ ಮೇಲೆ ಬಿಜೆಪಿ ಧ್ವಜವನ್ನು ಹಾರಿಸುವ ಸಂದರ್ಭದಲ್ಲಿ ಮಾತನಾಡಿದರು. ಮುಂದಿನ ದಿನಗಳಲ್ಲಿ ಪಕ್ಷದ ಸಂಘಟನೆ ಮತ್ತು ವಿಧಾನಸಭೆ- 2023ರ ಚುನಾವಣೆಯಲ್ಲಿ ಬಿಜೆಪಿ ಅಭೂತ ಪೂರ್ಣ ಸ್ಪಷ್ಟಬಹುಮತಕ್ಕೆ ಬೂತ್‌ ಮಟ್ಟದಲ್ಲಿ ಅತ್ಯಧಿಕ ಮತ ಪಡೆಯುವ ದೃಷ್ಟಿಯಿಂದ ಹಾಗೂ ಕೇಂದ್ರ, ರಾಜ್ಯ ಬಿಜೆಪಿಯ ಡಬ್ಬಲ್‌ ಎಂಜಿನ್‌ ಸರ್ಕಾರಗಳು ನೀಡಿರುವ ಕೊಡುಗೆ ಮತ್ತು ಸಾಧನೆಗಳನ್ನು ಪ್ರತಿ ಮನೆಗೆ ತಲುಪಿಸಿ, ಮತದಾರರ ಮನ ಗೆದ್ದು, ಮತವಾಗಿ ಪರಿವರ್ತಿಸುವ ಕಾರ್ಯಕ್ಕೆ ಬಿಜೆಪಿ ಮುಂದಾಗಿದೆ ಎಂದರು

ಪ್ರಥಮ ಹಂತದಲ್ಲಿ ಪ್ರತಿ ಬೂತ್‌ನ ಬಿಜೆಪಿ ಪದಾಧಿಕಾರಿಗಳು, ಸದಸ್ಯರು ಮತ್ತು ಕೀವೋಟ​ರ್‍ಸ್ನ 25 ಮನೆಗಳ ಮೇಲೆ ಬಾವುಟ ಹಾರಿಸುವುದರ ಮೂಲಕ ಬಿಜೆಪಿ ಬೂತ್‌ ವಿಜಯ್‌ ಅಭಿಯಾನವನ್ನು ಚಾಲನೆಗೊಳಿಸಿದೆ ಎಂದು ತಿಳಿಸಿದರು.

ಈ ಸಂಧರ್ಭದಲ್ಲಿ ಬಿಜೆಪಿ ರಾಜ್ಯ ವಕ್ತಾರ ಹಾಗೂ ಜಿಲ್ಲಾ ಉಪಾಧ್ಯಕ್ಷ ಎಚ್‌.ಎನ್‌.ಚಂದ್ರಶೇಖರ್‌, ತುಮಕೂರು ಮಂಡಲಾಧ್ಯಕ್ಷ ಟಿ.ಎಚ್‌.ಹನುಮಂತರಾಜು, ನಗರ ಮಂಡಲ ಮಹಿಳಾ ಮೋರ್ಚಾ ಪ್ರಧಾನಕಾರ್ಯದರ್ಶಿ ಹಾಗೂ ಬಿಜೆಪಿ ಬೂತ್‌ ವಿಜಯ್‌ ಅಭಿಯಾನದ ಪ್ರಮುಖ್‌ ಕಾವ್ಯ, ಕಾರ್ಯಕರ್ತರಾದ ಮುತ್ತುರಾಜ್‌, ವಾದಿರಾಜ್‌, ಸಿ.ಎನ್‌.ರವಿಕುಮಾರ್‌, ಚೈತ್ರ, ನಂಜುಂಡಿ, ಸೀತಾರಾಮು, ಚಂದ್ರಶೇಖರ್‌ ಉಪಸ್ಥಿತರಿದ್ದರು.

ಜನರ ಅಭಿವೃದ್ಧಿಗೆ ಬದ್ಧ

ಸವದತ್ತಿ(ಜ.06):  ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರ ಒಳಿತಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಉತ್ತರ ಕರ್ನಾಟಕದ ಜನರ ಪ್ರಮುಖ ಬೇಡಿಕೆ ಕಳಸಾ ಬಂಡೂರಿ ಯೋಜನೆಗೆ ಅನುಮತಿ ನೀಡುವ ಜೊತೆಗೆ ಏತ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಒತ್ತು ನೀಡುತ್ತಿರುವುದು ಅಭಿನಂದನಾರ್ಹ ವಿಷಯ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು.

ಸ್ಥಳೀಯ ಮಾಮನಿ ಕಲ್ಯಾಣ ಮಂಟಪದಲ್ಲಿ ಭಾರತೀಯ ಜನತಾ ಪಕ್ಷ ಹಾಗೂ ಬಿಜೆಪಿ ರೈತ ಮೋರ್ಚಾ ಆಶ್ರಯದಲ್ಲಿ ಕಳಸಾ ಬಂಡೂರಿ ಮತ್ತು ಏತ ನೀರಾವರಿ ಯೋಜನೆಗಳಿಗೆ ಅನುಮೋದನೆ ನೀಡಿದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಅಭಿನಂದನೆ ಸಲ್ಲಿಸುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ, ಸುಮಾರು 44 ವರ್ಷಗಳ ನಿರಂತರ ಹೋರಾಟದ ನಂತರ ಜಾರಿಗೊಂಡ ಈ ಯೋಜನೆಗೆ ಕಾಂಗ್ರೆಸ್‌ನವರು ಸ್ಪಂದಿ​ಸುವುದನ್ನು ಬಿಟ್ಟು ಅನಾವಶ್ಯಕ ಆರೋಪ ಮಾಡುತ್ತಿರುವುದು ವಿಷಾದದ ಸಂಗತಿ. ರೈತಪರವಾಗಿರುವ ಯೋಜನೆಗಳು ಜಾರಿ ಆಗುತ್ತಿರುವದನ್ನು ಸಹಿಸಲಾಗದೇ ವಿರೋಧ ಪಕ್ಷದವರು ಮಾಡುತ್ತಿರುವ ಆರೋಪಗಳಿಂದ ರೈತರನ್ನು ಅವಮಾನಿಸಿದಂತಾಗುತ್ತಿದೆ ಎಂದರು.

click me!