ಪಂಚಮಸಾಲಿ ಮೀಸಲಾತಿಗಾಗಿ ರಾಜೀನಾಮೆಗೂ ಸಿದ್ಧ: ಕಾಂಗ್ರೆಸ್‌ ಶಾಸಕ ರಾಜು ಕಾಗೆ

Published : Jul 10, 2024, 12:46 PM ISTUpdated : Jul 10, 2024, 01:03 PM IST
ಪಂಚಮಸಾಲಿ ಮೀಸಲಾತಿಗಾಗಿ ರಾಜೀನಾಮೆಗೂ ಸಿದ್ಧ: ಕಾಂಗ್ರೆಸ್‌ ಶಾಸಕ ರಾಜು ಕಾಗೆ

ಸಾರಾಂಶ

ಮೀಸಲಾತಿಗಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ. ಸಮಾಜದ ಸಲುವಾಗಿ ಅಧಿಕಾರ ಕಳೆದುಕೊಳ್ಳಲು ಸಿದ್ದ ಎಂದರು. ಮೀಸಲಾತಿ ಗಾಗಿ ಸಮಾಜದ ಎಲ್ಲ ಶಾಸಕರು ನಾಳೆಯೇ ಸಾಮೂಹಿಕವಾಗಿ ರಾಜೀನಾಮೆ ನೀಡಬೇಕು. ಆಗ ಸರ್ಕಾರ ಮೀಸಲಾತಿ ಕೊಟ್ಟೇ ಕೊಡುತ್ತದೆ: ಕಾಗವಾಡ ಶಾಸಕ ರಾಜು ಕಾಗೆ   

ಬೆಳಗಾವಿ(ಜು.10):  ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗಾಗಿ ರಾಜೀನಾಮೆಗೂ ಸಿದ್ಧ ಎಂದು ಕಾಗವಾಡ ಶಾಸಕ ರಾಜು ಕಾಗೆ ಹೇಳಿದರು. 

ಉಗಾರ ಖುರ್ದದಲ್ಲಿ ಮಂಗಳವಾರ ಪಂಚಮಸಾಲಿ ಸಮಾಜದ ಸಭೆಯಲ್ಲಿ ಮಾತನಾಡಿ, ಮೀಸಲಾತಿಗಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ. ಸಮಾಜದ ಸಲುವಾಗಿ ಅಧಿಕಾರ ಕಳೆದುಕೊಳ್ಳಲು ಸಿದ್ದ ಎಂದರು. ಮೀಸಲಾತಿ ಗಾಗಿ ಸಮಾಜದ ಎಲ್ಲ ಶಾಸಕರು ನಾಳೆಯೇ ಸಾಮೂಹಿಕವಾಗಿ ರಾಜೀನಾಮೆ ನೀಡಬೇಕು. ಆಗ ಸರ್ಕಾರ ಮೀಸಲಾತಿ ಕೊಟ್ಟೇ ಕೊಡುತ್ತದೆ ಎಂದು ಹೇಳಿದ್ದಾರೆ. 

ಅಬ್ ಕೀ ಬಾರ್ ಚಾರ್‌ ಸೌ ಪಾರ್ ಕನಸು ಢಮಾರ್: ಶಾಸಕ ರಾಜು ಕಾಗೆ

ಇತಿಹಾಸದಲ್ಲಿ ನಮ್ಮ ಹೆಸರು ಉಳಿಯಬೇಕಾದರೆ ನಾವು ಸಮುದಾಯಕ್ಕಾಗಿ ರಾಜೀನಾಮೆ ನೀಡೋಣ. ರಾಜ್ಯದಿಂದ ಮೀಸಲಾತಿ ಕುರಿತು ಕೇಂದ್ರಕ್ಕೆ ಮನವಿ ಮಾಡಲಿ. ಅಲ್ಲಿ ನಮ್ಮ ಸಂಸದರಿದ್ದಾರೆ. ಜನಾಂಗಕ್ಕೆ ನ್ಯಾಯ ಸಿಗುವುದಾದರೆ ನಾನು ರಾಜೀನಾಮೆ ನೀಡಲು ಸಿದ್ಧ ಎಂದು ಹೇಳಿದರು.

PREV
Read more Articles on
click me!

Recommended Stories

ಶಾಮನೂರು ಶಿವಶಂಕರಪ್ಪ ನಿಧನ: ಇಂದು ಕಲಾಪ ಮುಂದೂಡುವ ಸಾಧ್ಯತೆ
ತುರುವೇಕೆರೆ: ದೇವರ ಮೇಲೆ ಹಾಕಿದ್ದ 500 ಗ್ರಾಂ ಸರ, 10 ಸಾವಿರ ರೂ. ನಗದು ಕದ್ದ ಕಳ್ಳರು!