ನಾನು ಶಾಲೆಯಲ್ಲಿಯೇ ಮುಖ್ಯಮಂತ್ರಿ ಆಗಿದ್ದೆ; ಸಚಿವ ಸ್ಥಾನ ವಂಚಿತ ಶಾಸಕ ಆರ್.ಬಿ. ತಿಮ್ಮಾಪೂರ

Sathish Kumar KH   | Kannada Prabha
Published : Sep 07, 2026, 08:15 AM IST
MLA R B Thimmapura

ಸಾರಾಂಶ

ಸಿಎಂ ಸಿದ್ದರಾಮಯ್ಯ ಸಂಪುಟದಲ್ಲಿ ಅಬಕಾರಿ ಸಚಿವರಾಗಿದ್ದ ಶಾಸಕ ಆರ್.ಬಿ. ತಿಮ್ಮಾಪುರ ಅವರು, 2ನೇ ಅವಧಿಯ ಡಿ.ಕೆ. ಶಿವಕುಮಾರ್ ಸಂಪುಟದಲ್ಲಿ ಸಚಿವ ಸ್ಥಾನ ವಂಚಿತರಾಗಿದ್ದಾರೆ. ಇದೀಗ ಶಿಕ್ಷಕರ ದಿನಾಚರಣೆ ವೇಳೆ ತಾವು ಶಾಲೆಯಲ್ಲಿ ಮುಖ್ಯಮಂತ್ರಿ ಆಗಿದ್ದೆ ಎಂದು ಶಾಲಾ ದಿನಗಳನ್ನು ನೆನಪು ಮಾಡಿಕೊಂಡಿದ್ದಾರೆ.

ಬಾಗಲಕೋಟೆ (ಸೆ.07): ನನ್ನೂರು ತಾಲೂಕಿನ ಉತ್ತೂರು, ನನ್ನ ಸ್ವಗ್ರಾಮ ಉತ್ತೂರಿನಲ್ಲಿಯೇ ಸರ್ಕಾರಿ ಪ್ರಾಥಮಿಕ ಶಾಲೆಯನ್ನು ಕಲಿತಿರುವೆ, ನಾನು ಶಾಲೆಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದರಿಂದ ನನ್ನನ್ನು ಶಾಲೆ ಮುಖ್ಯಮಂತ್ರಿಯಾಗಿ ಮಾಡಿದ್ದರು ಎಂದು ಶಾಸಕ, ಮಾಜಿ ಸಚಿವ ಆರ್.ಬಿ.ತಿಮ್ಮಾಪೂರ ತಮ್ಮ ಶಾಲಾ ದಿನದ ನೆನಪನ್ನು ಮಾಡಿಕೊಂಡರು.

ಜಿಪಂ, ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ, ತಾಲೂಕಾಡಳಿತ, ತಾಪಂ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಶಿಕ್ಷಕ ದಿನೋತ್ಸವ ಸಮಿತಿ ಮುಧೋಳ ಇವರ ಸಂಯುಕ್ತಾಶ್ರಯದಲ್ಲಿ ಡಾ.ರಾಧಾಕೃಷ್ಣನ್ ರವರ ಜನ್ಮದಿನದ ಅಂಗವಾಗಿ ನಗರದ ಹೇಮರಡ್ಡಿ ಮಲ್ಲಮ್ಮ ಕಲ್ಯಾಣ ಮಂಟಪದಲ್ಲಿ ತಾಲೂಕಾ ಮಟ್ಟದ ಶಿಕ್ಷಕರ ದಿನೋತ್ಸವ-2026, ನಿವೃತ್ತ ಶಿಕ್ಷಕರ ಸನ್ಮಾನ ಹಾಗೂ ಶಿಕ್ಷಕರ ಮಕ್ಕಳ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಇಂದಿನ ಸರ್ಕಾರಿ ಶಾಲಾ ಶಿಕ್ಷಕರು ಅಫ್ಡೇಟ್ ಆಗಬೇಕು. ಹೊಸ ಹೊಸ ತಂತ್ರಜ್ಞಾನ, ವಿನೂತನ ಕೌಶಲ ಬ‍ಳಸಿಕೊಂಡು ಮಕ್ಕಳಿಗೆ ಪಾಠಬೋಧನೆ ಮಾಡಬೇಕು. ಪಾಠಬೋಧನೆ ಜತೆಗೆ ಜೀವನ ಶಿಕ್ಷಣ ನೀಡಿ, ಅವರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳುವಂತೆ ಮಾರ್ಗದರ್ಶನ ನೀಡಬೇಕೆಂದು ಶಿಕ್ಷಕರಿಗೆ ಕಿವಿಮಾತು ಹೇಳಿದರು.

ಜಾತಿ, ಮತ, ಧರ್ಮ, ಮೇಲು, ಕೀಳು ಎಂಬ ಭಾವನೆಯಿಂದ ಮಕ್ಕಳು ಹೊರಬರಬೇಕು. ಅಂತಹ ಮನೋಭಾವನೆ ಮಕ್ಕಳಲ್ಲಿ ಮೂಡಿಸಬೇಕೆಂದು ಹೇಳಿದ ಅವರು, ಬಿಇಒ ಕಚೇರಿ ಮತ್ತು ಶಿಕ್ಷಕರ ಗುರುಭವನ ಶೀಘ್ರದಲ್ಲಿ ಕಟ್ಟಿಸಿಕೊಡುವದಾಗಿ ಭರವಸೆ ನೀಡಿದರು.

ವಿಧಾನ ಪರಿಷತ್ ಸದಸ್ಯ ಹಣಮಂತ ಆರ್.ನಿರಾಣಿ ಮಾತನಾಡಿ, ಗುರುವಿನ ಮಹತ್ವ, ಮಕ್ಕಳ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಮತ್ತು ಜವಾಬ್ದಾರಿ ತಿಳಿಸಿಕೊಟ್ಟ ಅವರು, ಗುಣಾತ್ಮಕ ಮತ್ತು ಮೌಲ್ಯಾಧರಿತ ಶಿಕ್ಷಣ ನೀಡಬೇಕೆಂದು ಶಿಕ್ಷಕರಿಗೆ ಕಿವಿಮಾತು ಹೇಳಿದರು.

ಶಿಕ್ಷಕರು ಮತ್ತೆ ಗುರುಗಳಾಗಬೇಕು

ಡಾ.ಶಿವಾನಂದ ಕುಬಸದ ಮಾತನಾಡಿ, ಇಂದು ಗುರು-ಶಿಷ್ಯರ ಮಧ್ಯ ಬಾಂಧವ್ಯ ಕಡಿಮೆಯಾಗಿದೆ. ಗುರುಗಳು ವೃತ್ತಿ ಶಿಕ್ಷಕರಾಗಿದ್ದಾರೆ. ಸಂಬಳಕ್ಕಾಗಿ ತಮ್ಮ ಕೆಲಸವನ್ನು ನಿರ್ವಹಿಸುತ್ತಿದ್ದಾರೆ. ಸೇವಾ ಮನೋಭಾವನೆ ಇಲ್ಲದಂತಾಗಿದೆ. ಇದೊಂದು ನೋವಿನ ಸಂಗತಿ, ಶಿಕ್ಷಕ ಮತ್ತೆ ಗುರುಗಳಾಗಬೇಕು. ಸೇವಾ ನಿರತರಾಗಿ ಆದರ್ಶ ಶಿಕ್ಷಕರಾಗಬೇಕು. ಮಕ್ಕಳನ್ನು ಪ್ರೀತಿಸಿ ಅವರ ಸರ್ವಾಂಗೀಣ ಅಭಿವೃದ್ದಿಗಾಗಿ ಶ್ರಮಿಸಬೇಕೆಂದು ಹೇಳಿದರು.

ಲೋಕಾಪೂರ ಹಿರೇಮಠದ ಡಾ.ಚಂದ್ರಶೇಖರ ಸ್ವಾಮಿಜಿ ದಿವ್ಯ ಸಾನಿಧ್ಯವಹಿಸಿ ಆಶೀರ್ವಚನ ನೀಡಿದರು. ತಹಸೀಲ್ದಾರ ಡಾ.ಚಿಕ್ಕಪ್ಪ ನಾಯಕ ಪ್ರಾಸ್ತಾವಿಕವಾಗಿ ಮಾತನಾಡಿದರು. ಬಿಇಒ ಎಸ್.ಎಂ.ಮುಲ್ಲಾ ಸ್ವಾಗತಿಸಿದರು. ಎ.ಆರ್.ಛಬ್ಬಿ ವಂದಿಸಿದರು .

ಎಪಿಎಂಸಿ ಉಪಾಧ್ಯಕ್ಷ ಭೀಮಪ್ಪ ಮೆಟಗುಡ್ಡ, ಮುಧೋಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದುಗೌಡ ಪಾಟೀಲ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಪ್ರಕಾಶ ಹೊಸಮನಿ, ತಾ.ಪಂ ಇಒ ರಾಘವೇಂದ್ರ ಕಳ್ಳಿಮನಿ ಸೇರಿದಂತೆ ಇತರೆ ಗಣ್ಯರು ವೇದಿಕೆ ಮೇಲಿದ್ದರು. ನಿವೃತ್ತ ಶಿಕ್ಷಕರಿಗೆ, ಶಿಕ್ಷಕರ ಪ್ರತಿಭಾವಂತ ಮಕ್ಕಳಿಗೆ, ಗಣ್ಯರಿಗೆ ಸನ್ಮಾನಿಸಿ, ಗೌರವಿಸಲಾಯಿತು.

ನಾನು ಹಿಂದಿ ವಿಷಯವನ್ನು ಕಲಿಯದೆ ಇದ್ದುದರಿಂದ ಸಾಕಷ್ಟು ಭಾರಿ ತೊಂದರೆ ಮತ್ತು ಮುಜಗುರ ಅನುಭವಿಸಿದ್ದೇನೆ. ನಮ್ಮ ನಡೆ, ನುಡಿ, ಸಂಸ್ಕಾರ, ಜೀವನ ಶಿಕ್ಷಣವನ್ನು ಕಲಿಸುವುದೇ ಸರ್ಕಾರಿ ಶಾಲೆಗಳು ಮತ್ತು ಸರ್ಕಾರಿ ಶಾಲಾ ಶಿಕ್ಷಕರು ಎಂಬುದಕ್ಕೆ ನಾನೇ ಸಾಕ್ಷಿ, ನಾನು ಸರ್ಕಾರಿ ಶಾಲೆಯಲ್ಲಿ ಕಲಿತಿದ್ದರಿಂದಲೇ ಇಂದು ಸಚಿವನಾಗಿ, ಶಾಸಕನಾಗಿದ್ದೇನೆ. ಯಾರು ಉನ್ನತ ಸ್ಥಾನಮಾನದಲ್ಲಿ ಇದ್ದಾರೆ ಅವರೆಲ್ಲರೂ ಬಹುತೇಕ ಸರ್ಕಾರಿ ಶಾಲೆಯಲ್ಲಿಯೇ ಶಿಕ್ಷಣ ಪಡೆದುಕೊಂಡಿದ್ದಾರೆ. ಹೀಗಾಗಿ ಪ್ರತಿಯೊಬ್ಬ ಪಾಲಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ, ಸರ್ಕಾರಿ ಶಾಲೆಯನ್ನು ಉಳಿಸಬೇಕು.

-ಆರ್‌.ಬಿ.ತಿಮ್ಮಾಪುರ, ಶಾಸಕ, ಮಾಜಿ ಸಚಿವ

PREV
Read more Articles on
click me!

Recommended Stories

ಸಾಕಷ್ಟು ಕೆಲಸ ಮಾಡಿದ್ರೂ ಗೆಲುವು ಕಷ್ಟ: ದೇವರ ಮೊರೆ ಹೋದ್ರಾ ಸಚಿವರು? ಶ್ರೀಹೊಳೆ ಆಂಜನೇಯಸ್ವಾಮಿಗೆ 1.25 ಪೈಸೆ ನಾಣ್ಯ ಹರಕೆ ಅರ್ಪಿಸಿದ್ದೇಕೆ?
ಹುಬ್ಬಳ್ಳಿ ಗಣೇಶೋತ್ಸವಕ್ಕೆ ಸಜ್ಜಾಗುತ್ತಿರುವ ಹೊತ್ತಲ್ಲೇ ಮೂರ್ತಿಕಾರರ ಬದುಕಲ್ಲಿ ಆತಂಕ! ಕಾರಣವೇನು?