ನಾನು ಶಾಸಕನಾಗಿ ಗೆದ್ದು ಬರುವೆ : ಜೆಡಿಎಸ್ ನಾಯಕರ ವಿಶ್ವಾಸ

By Kannadaprabha NewsFirst Published Dec 21, 2022, 6:44 AM IST
Highlights

ಮುಂಬರುವ 2023ರ ಚುನಾವಣೆಯಲ್ಲಿ ಶಾಸಕನಾಗಿ ಗೆದ್ದು ಬರುವ ವಿಶ್ವಾಸವನ್ನು ಜೆಡಿಎಸ್‌ ಮುಖಂಡ ಆಟ್ಟಿಕಾ ಬಾಬು ವ್ಯಕ್ತಪಡಿಸಿದರು.

 ತುಮಕೂರು (ಡಿ.21):  ಮುಂಬರುವ 2023ರ ಚುನಾವಣೆಯಲ್ಲಿ ಶಾಸಕನಾಗಿ ಗೆದ್ದು ಬರುವ ವಿಶ್ವಾಸವನ್ನು ಜೆಡಿಎಸ್‌ ಮುಖಂಡ ಆಟ್ಟಿಕಾ ಬಾಬು ವ್ಯಕ್ತಪಡಿಸಿದರು.

ತುಮಕೂರಿನಲ್ಲಿ (Tumakur)  ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಮುಂಬರುವ ವರ್ಷದಲ್ಲಿ ನಡೆಯಲಿರುವ ತುಮಕೂರು ನಗರ ವಿಧಾನಸಭಾ ಕ್ಷೇತ್ರಕ್ಕೆ ನಾನೇ ಅಭ್ಯರ್ಥಿಯಾಗಿದ್ದು ಚುನಾವಣೆಯಲ್ಲಿ ಶಾಸಕನಾಗಿ (MLA)  ಗೆದ್ದು ಬರುತ್ತೇನೆ. ನಾನು ಜೆಡಿಎಸ್‌ ನ ಸಕ್ರಿಯೆ ಕಾರ್ಯಕರ್ತನಾಗಿದ್ದು ಮುಂಬರುವ ಚುನಾವಣೆಯಲ್ಲಿ ತುಮಕೂರು ನಗರ ಕ್ಷೇತ್ರದ ಅಭ್ಯರ್ಥಿಯಾಗುವುದು ಖಚಿತ ಎಂದು ಹೇಳಿದ್ದಾರೆ.

ಇತ್ತೀಚೆಗೆ ನಡೆದ ಪಂಚರತ್ನ ಯಾತ್ರೆಗೆ ಸಂಬಂಧಿಸಿದಂತೆ ತಾವು ಸಹ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕು ಎಂದುಕೊಂಡಿದ್ದೆ. ಆದರೆ ಎರಡು ಬಾರಿ ಶಾಸಕ ಸ್ಥಾನಕ್ಕೆ ಸ್ಪರ್ಧಿಸಿ ಸೋತಿರುವ ಅಭ್ಯರ್ಥಿ ಗೋವಿಂದರಾಜು ಅವರಿಗೆ ಮುಜುಗರ ಆಗಬಾರದು ಎನ್ನುವ ಕಾರಣಕ್ಕೆ ತಾವು ಪಂಚರತ್ನ ಯಾತ್ರೆಯಲ್ಲಿ ಭಾಗಿಯಾಗಿರಲಿಲ್ಲ ಎಂದು ಸ್ಪಷ್ಟಪಡಿಸಿದರು.

ಮುಂಬರುವ ಚುನಾವಣೆಗೆ ತುಮಕೂರು ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುವುದು ಶತಃಸಿದ್ದ. ಕಾಂಗ್ರೆಸ್‌ ಮುಖಂಡರು ಸಹ ತಮಗೆ ಕಾಂಗ್ರೆಸ್‌ ಪಕ್ಷದಿಂದ ಸ್ಪರ್ಧಿಸಲು ತಮ್ಮನ್ನು ಭೇಟಿ ಮಾಡಿದ್ದಾರೆ ಎಂದರು.

ತುಮಕೂರಿಗೆ ಆಗಮಿಸಿದ ದಿನದಂದು ಕಾಂಗ್ರೆಸ್‌ ಹಿರಿಯ ಮುಖಂಡ ಶಫಿ ಅಹಮದ್‌ ಅವರ ಆಶೀರ್ವಾದ ಪಡೆದಿದ್ದೇನೆ. ತುಮಕೂರು ಜನತೆಯ ಮನಸ್ಸನ್ನು ಗೆಲ್ಲುವ ಸಲುವಾಗಿ ಬಂದಿದ್ದು ಚುನಾವಣೆಯಲ್ಲಿ ನನಗೆ ಟಿಕೆಚ್‌ ಸಿಗಲಿದೆ ಎಂದು ಆತ್ಮ ವಿಶ್ವಾಸ ವ್ಯಕ್ತಪಡಿಸಿದರು.

JDS ಅಭ್ಯರ್ಥಿ ಪಟ್ಟಿ ಬಿಡುಗಡೆ

ಬೆಂಗಳೂರು (ಡಿ.19): 2023ನೇ ಸಾಲಿನ ಕರ್ನಾಟಕ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ರಾಜ್ಯದ 93 ವಿಧಾನಸಭಾ ಕ್ಷೇತ್ರಗಳ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ರಾಜ್ಯದಲ್ಲಿ ಒಟ್ಟು 224 ವಿಧಾನಸಭಾ ಕ್ಷೇತ್ರಗಳಿದ್ದು, ಎಲ್ಲ ಕ್ಷೇತ್ರಗಳಲ್ಲಿಯೂ ಸ್ಪರ್ಧೆ ಮಾಡುವುದಾಗಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದರು. 

ಈಗ ಮೊದಲ ಹಂತದಲ್ಲಿ 93 ಕ್ಷೇತ್ರಗಳ ಅಭ್ಯರ್ಥಿಗಳನ್ನು ಬಿಡುಗಡೆ ಮಾಡಿದ್ದು, ಮುಂದಿನ ದಿನಗಳಲ್ಲಿ ಉಳಿದ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವುದಾಗಿ ಬೆಂಗಳೂರಿನಲ್ಲಿ ಕುಮಾರಸ್ವಾಮಿ ತಿಳಿಸಿದ್ದಾರೆ. ಇನ್ನು ಈ ಎಲ್ಲ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡುವ ಮುನ್ನ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಅವರ ಅನುಮತಿಯನ್ನೂ ಪಡೆಯಲಾಗಿದೆ ಎಂದು ಹೇಳಿದರು.

Mandya: ಡಿ.24ಕ್ಕೆ ಮೇಲುಕೋಟೆಗೆ ಪಂಚರತ್ನ ರಥಯಾತ್ರೆ: ಶಾಸಕ ಸಿ.ಎಸ್‌.ಪುಟ್ಟರಾಜು

ನಿಖಿಲ್‌ ಕುಮಾರಸ್ವಾಮಿಗೆ ಟಿಕೆಟ್‌ ಫಿಕ್ಸ್: ಕಳೆದ ವಿಧಾನಸಭಾ ಕ್ಷೇತ್ರದ ಚುನಾವಣೆಯ ವೇಳೆ ಕುಮಾರಸ್ವಾಮಿ ಅವರು ರಾಮನಗರ ಮತ್ತು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳಿಂದ ಸ್ಪರ್ಧಿಸಿ ಗೆದ್ದು ನಂತರ, ರಾಮನಗರ ವಿಧಾನಸಭಾ ಕ್ಷೇತ್ರದಿಂದ ಪತ್ನಿ ಅನಿತಾ ಕುಮಾರಸ್ವಾಮಿ ಅವರನ್ನು ನಿಲ್ಲಿಸಿ ಗೆಲ್ಲಿಸಿದ್ದರು. ಆದರೆ, ಈ ಬಾರಿ ಅನಿತಾ ಕುಮಾರಸ್ವಾಮಿ ಅವರು ತನ್ನ ಮಗನಿಗೆ ಕ್ಷೇತ್ರ ತ್ಯಾಗ ಮಾಡುವುದಾಗಿ ತಿಳಿಸಿದ್ದರು. ಅದರಂತೆ ಈಗ ನಿಖಿಲ್‌ ಕುಮಾರಸ್ವಾಮಿ ಅವರಿಗೆ ರಾಮನಗರ ವಿಧಾನಸಭಾ ಕ್ಷೇತ್ರದ ಟಿಕೆಟ್‌ ಘೋಷಣೆ ಮಾಡಲಾಗಿದೆ.

ಭವಾನಿ ರೇವಣ್ಣ ಟಿಕೆ‌ಟ್‌ಗೆ ಕೋಕ್:
ವಿಧಾನಸಭಾ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ಜೆಡಿಎಸ್‌ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಇದರಲ್ಲಿ ಹಾಸನ ಜಿಲ್ಲೆಯಿಂದ ಸ್ಪರ್ಧಿಸುವ ಪ್ರಭಲ ಆಕಾಂಕ್ಷಿಯಾಗಿದದ ಭವಾನಿ ರೇವಣ್ಣ ಅವರ ಟಿಕೆಟ್‌ಗೆ ಕೊಕ್ಕೆ ಹಾಕಿದ್ದಾರಾ ಎಂಬ ಅನುಮಾನ ಮೂಡಿಬಂದಿದೆ. ಹೀಗಾಗಿ, ಭವಾನಿ ರೇವಣ್ಣ ಟಿಕೆಟ್ ಘೋಷಣೆಯಲ್ಲಿ ಗೊಂದಲ ಸೃಷ್ಟಿಯಾಗಿದ್ದು, ಅವರಿಗೆ ಟಿಕೆಟ್ ಸಿಗೋದು 50:50 ಸಾಧ್ಯತೆ ಇದೆ ಅನುಮಾನ  ವ್ಯಕ್ತವಾಗುತ್ತಿದೆ. 

ಜೆಡಿಎಸ್‌ ಅಧಿಕಾರಕ್ಕೆ ಬಂದರೆ ರೈತರಿಗೆ ಸಾಲದಿಂದ ಮುಕ್ತಿ: ಸಿ.ಎಂ.ಇಬ್ರಾಹಿಂ

ಹಾಸನ ಟಿಕೆಟ್‌ ಮುಟ್ಟದ ಎಚ್‌ಡಿಕೆ: ಇನ್ನು ಮೊದಲ ಅಭ್ಯರ್ಥಿಗಳ ಪಟ್ಟಿಯಲ್ಲಿ ಹಾಸನ ವಿಧಾನಸಭಾ ಕ್ಷೇತ್ರಗಳ ಟಿಕೆಟ್‌ಗಳನ್ನು ಟಚ್‌ ಮಾಡಿಲ್ಲ. ಹೆಚ್.ಡಿ.ರೇವಣ್ಣ ಪವರ್ ಸೆಂಟರ್ ಹಾಸನ ಜಿಲ್ಲೆಗೆ ಕೈ ಹಾಕದ ಎಚ್.ಡಿ. ಕುಮಾರಸ್ವಾಮಿ ಅವರು ಮೊದಲ ಪಟ್ಟಿಯಲ್ಲಿ ಹಾಸನದ ಯಾವ ಕ್ಷೇತ್ರಕ್ಕೂ ಟಿಕೆಟ್ ಘೋಷಣೆ ಮಾಡಿಲ್ಲ. ಹಾಸನ‌ ಜಿಲ್ಲೆಯ ಶ್ರವಣಬೆಳಗೊಳ, ಬೇಲೂರು, ಅರಸೀಕೆರೆ, ಹೊಳೆನರಸೀಪುರ, ಸಕಲೇಶಪುರ, ಅರಕಲಗೂಡು ಯಾವ ಕ್ಷೇತ್ರಕ್ಕೂ ಟಿಕೆಟ್ ಘೋಷಣೆ ಆಗಿಲ್ಲ. 

ಶಿರಾ ವಿಧಾನಸಭಾ ಕ್ಷೇತ್ರದ ಟಿಕೆಟ್‌ ಪೆಂಡಿಂಗ್: ಶಿರಾ ಕ್ಷೇತ್ರದ ಬಗ್ಗೆಯೂ ಮೊದಲ ಪಟ್ಟಿಯಲ್ಲಿ ಟಿಕೆಟ್ ಘೋಷಣೆ ಪೆಂಡಿಂಗ್ ಇಡಲಾಗಿದೆ. ಶಿರಾದಲ್ಲಿ ಜೆಡಿಎಸ್ ನಿಂದ ಐವರು ಆಕಾಂಕ್ಷಿಗಳು ಇರುವ ಹಿನ್ನೆಲೆಯಲ್ಲಿ ಭಿನ್ನಮತ ಮೂಡುವ ಆತಂಕ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಅವರು ಕಾದು ನೋಡುವ ತಂತ್ರಕ್ಕೆ ಮುಂದಾಗಿದ್ದಾರೆ.

click me!