ಗಾಯತ್ರಿ ಮಂತ್ರದ ಶಕ್ತಿ ಅಪಾರ, ಈ ಕಾರ್ಯಕ್ರಮದಲ್ಲಿ ಸಂಪೂರ್ಣ ಸಾರ

Published : Feb 06, 2020, 07:57 PM ISTUpdated : Feb 06, 2020, 08:00 PM IST
ಗಾಯತ್ರಿ ಮಂತ್ರದ ಶಕ್ತಿ ಅಪಾರ, ಈ ಕಾರ್ಯಕ್ರಮದಲ್ಲಿ ಸಂಪೂರ್ಣ ಸಾರ

ಸಾರಾಂಶ

ವಿನೂತನ ಪುಣ್ಯಪರ್ವ "ಗಾಯತ್ರಿ ಮಹೋತ್ಸವ"/  ಶ್ರೀ ಅಖಿಲ ಹವ್ಯಕ ಮಹಾಸಭೆಯ ಹವ್ಯಕ ಭವನದಲ್ಲಿ ಫೆ. 09 ಭಾನುವಾರ "ಗಾಯತ್ರಿ ಮಹೋತ್ಸವ" / 'ಗಾಯತ್ರಿ ಉಪದೇಶ - ಉಪನಯನ' ವಿಚಾರವಾಗಿ  ವಿದ್ವಾನ್ ಜಗದೀಶ ಶರ್ಮಾ ಅವರಿಂದ ವಿಚಾರ ಮಂಡನೆ

ಬೆಂಗಳೂರು(ಫೆ. 06)  ಗಾಯತ್ರಿ ಮಂತ್ರದ ಮಹಿಮೆಯನ್ನು ತಿಳಿಸುವ ಸಲುವಾಗಿ ಶ್ರೀ ಅಖಿಲ ಹವ್ಯಕ ಮಹಾಸಭೆಯ ಹವ್ಯಕ ಭವನದಲ್ಲಿ ಫೆ. 09 ಭಾನುವಾರ "ಗಾಯತ್ರಿ ಮಹೋತ್ಸವ" ಎಂಬ ವಿಶಿಷ್ಟ ಕಾರ್ಯಕ್ರಮ ಹಮ್ಮಿಕೊಂಡಿದೆ.  ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಮಂತ್ರಾರ್ಥವನ್ನು ತಜ್ಞ ವಿದ್ವಾಂಸರು ವಿಭಿನ್ನ ದೃಷ್ಟಿಕೋನದಿಂದ ವಿಶ್ಲೇಷಿಸುವ , ಸಂಧ್ಯಾವಂದನೆಯ ಮಹತ್ವವನ್ನು ತಿಳಿಸುವ ವಿವಿಧ ವಿಚಾರ ಗೋಷ್ಠಿಗಳು ಈ ಕಾರ್ಯಕ್ರಮದಲ್ಲಿ ನಡೆಯಲಿದೆ.

ಗಾಯತ್ರಿ ದೇವಿಯ ಮೆರವಣಿಗೆ, ಜ್ಯೋತಿ ಜ್ವಾಲನದೊಂದಿಗೆ ಕಾರ್ಯಕ್ರಮ ಆರಂಭವಾಗಲಿದ್ದು ಸಂಸದ ತೇಜಸ್ವಿ ಸೂರ್ಯ ಹಾಗೂ ಶಾಸಕ ರವಿಸುಬ್ರಹ್ಮಣ್ಯ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ಶತಾವಧಾನಿ ಡಾ. ಆರ್. ಗಣೇಶ್ 'ಗಾಯತ್ರಿ ತತ್ತ್ವ'ದ ಕುರಿತಾಗಿ ವಿಚಾರಗಳನ್ನು ಹಂಚಿಕೊಳ್ಳಲಿದ್ದು, ವಿದ್ವಾನ್ ಶಿವರಾಮ ಅಗ್ನಿಹೋತ್ರಿ 'ಅಗ್ನಿಹೋತ್ರದ ವೈಶಿಷ್ಟ್ಯ'ದ ಕುರಿತಾಗಿ ಬೆಳಕು ಚೆಲ್ಲಲಿದ್ದಾರೆ. 'ಗಾಯತ್ರಿ ಉಪದೇಶ - ಉಪನಯನ' ವಿಚಾರವಾಗಿ    ವಿದ್ವಾನ್ ಜಗದೀಶ ಶರ್ಮಾ ವಿಚಾರ ಮಂಡಿಸಲಿದ್ದು,  'ಗಾಯತ್ರಿ ಮಂತ್ರದ ವೈಜ್ಞಾನಿಕ ಹಿನ್ನಲೆ' ಕುರಿತಾಗಿ ಡಾ. ರಂಗರಾಜ ಅಯ್ಯಂಗಾರ್ ತಿಳಿಸಿಕೊಡಲಿದ್ದಾರೆ. 

ವಿದುಷಿ ಲತಾಲಕ್ಷ್ಮೀಶ್ ನಿರ್ದೇಶನದಲ್ಲಿ ಸಂಯೋಗ ಕಲಾಶಾಲೆಯ ಪ್ರಸ್ತುತಿಯ 'ಗಾಯತ್ರಿ ವಂದನಮ್ - ನೃತ್ಯ ನಮನ' ಹಾಗೂ ಶ್ರೀಮತಿ ಅರುಂಧತಿ ವಸಿಷ್ಠ ಹಾಗೂ ಶ್ರೀ ಮನೋಜ್ ವಸಿಷ್ಠರಿಂದ 'ಗಾಯತ್ರಿ ನಾದನಮನ' ಕಾರ್ಯಕ್ರಮಗಳು ನಡೆಯಲಿವೆ.

ಗಾಯತ್ರಿ ಮಂತ್ರ ಪಠಣೆಯಿಂದ ಏನು ಲಾಭ?
  
'ನಿತ್ಯಕರ್ಮ - ಬ್ರಹ್ಮಯಜ್ಞ' ಕುರಿತಾಗಿ ಡಾ. ಪಾದೆಕಲ್ಲು ವಿಷ್ಣು ಭಟ್ಟ, ಉಡುಪಿ, 'ಗಾಯತ್ರಿ ಸಂದೇಶ'  ಸಂಧ್ಯಾವಂದನೆಯ ಮಹತ್ತ್ವ ಕುರಿತಾಗಿ ವಿದ್ವಾನ್ ಹಿತ್ಲಳ್ಳಿ ನಾಗೇಂದ್ರ ಭಟ್ಟ, ಯಲ್ಲಾಪುರ ವಿಚಾರಗಳನ್ನು ಪ್ರಸ್ತುತಪಡಿಸಲಿದ್ದು, ಶ್ರೀ ಕೊರ್ಗಿ ಶಂಕರನಾರಾಯಣ ಉಪಾಧ್ಯಾಯ ಅವರಿಂದ "ಮಹಾಬ್ರಾಹ್ಮಣ - ಕಾವ್ಯ ವಾಚನ" ಹಾಗೂ ಉದಯೋನ್ಮುಖ ಗಾಯಕ ಶ್ರೀ ಗುರುಕಿರಣ್ ಹೆಗಡೆ ಅವರಿಂದ  ಗಾಯತ್ರಿ ನಾದನಮನ ನಡೆಯಲಿದೆ.

ಸಂಧ್ಯಾವಂದನೆ ಯಾವಾಗ ? ಹೇಗೆ ? ವಿಚಾರವಾಗಿ ವಿದ್ವಾನ್ ಕೂಟೇಲು ರಾಮಕೃಷ್ಣ ಭಟ್ಟ ಹಾಗೂ ಗಾಯತ್ರಿ ಮಹಿಮೆ ಕುರಿತಾಗಿ ವಿದ್ಯಾವಾಚಸ್ಪತಿ ಡಾ. ಅರಳುಮಲ್ಲಿಗೆ ಪಾರ್ಥಸಾರಥಿ ಉಪನ್ಯಾಸ ನೀಡಲಿದ್ದಾರೆ.

ಸಂಜೆ 'ಗಾಯತ್ರಿ ದರ್ಶನ'  ಯಕ್ಷಗಾನ ತಾಳಮದ್ದಳೆ - ಪ್ರಸಂಗ ನಡೆಯಲಿದ್ದು, ಯಕ್ಷಕಲೆಯ ಮೂಲಕ ಗಾಯತ್ರಿ ಆರಾಧನೆ ಸಂಪನ್ನವಾಗಲಿದೆ.  ಸಮಾರೋಪ ಸಮಾರಂಭದಲ್ಲಿ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್, ಡಾ. ಕೆ. ಪಿ. ಪುತ್ತೂರಾಯ ಪಾಲ್ಗೊಳ್ಳಲಿದ್ದಾರೆ.ರಂಗಪೂಜೆ, ಗಾಯತ್ರಿ ಹವನ , ಗಾಯತ್ರಿ ನಮನ ಮುಂತಾದ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು  ಸಂಪನ್ನವಾಗಲಿವೆ.  ಧಾರ್ಮಿಕ - ವೈಚಾರಿಕ - ವೈಜ್ಞಾನಿಕ ಹಾಗೂ ಸಾಂಸ್ಕೃತಿಕ ವಿಚಾರಗಳ ಸಮ್ಮಿಲನದ "ಗಾಯತ್ರಿ ಮಹೋತ್ಸವ" ಭಾನುವಾರ ಬೆಳಗ್ಗೆ 7.30 ರಿಂದ  ರಾತ್ರಿ 8.30 ವರೆಗೆ ಸಂಪನ್ನವಾಗಲಿದ್ದು, ದಿನಪೂರ್ತಿ ಗಾಯತ್ರಿ ದೇವಿಯ ಆರಾಧನೆ ವಿವಿಧ ಆಯಾಮಗಳಲ್ಲಿ ನಡೆಯಲಿದೆ.

PREV
click me!

Recommended Stories

ಫ್ಯಾನ್ 10, ಕೋಲ್ಡ್ ವಾಟರ್ 12 ರೂ, ಚಾರ್ಜಿಂಗ್ ಫ್ರಿ, ಬೆಂಗಳೂರಿನ ಪ್ರಿಮಿಯಂ ಆಟೋ ವೈರಲ್
ಮಗಳ ವಯಸ್ಸಿನ ಅಪ್ರಾಪ್ತ ಬಾಲಕಿಗೆ ಮಗು ಕರುಣಿಸಿದ ಸುರೇಶ ಅಂಕಲ್; ಆ್ಯಂಬುಲೆನ್ಸ್‌ನಲ್ಲೇ ಹೆಣ್ಣುಮಗು ಜನನ!