ಚುನಾವಣಾ ಫಲಿತಾಂಶ : ಪರದಾಡಿದ ಅಭ್ಯರ್ಥಿ

Kannadaprabha News   | Asianet News
Published : Nov 11, 2020, 09:44 AM IST
ಚುನಾವಣಾ ಫಲಿತಾಂಶ : ಪರದಾಡಿದ ಅಭ್ಯರ್ಥಿ

ಸಾರಾಂಶ

ರಾಜ್ಯದಲ್ಲಿ ಉಪ ಚುನಾವಣೆಯಲ್ಲಿ ಎರಡೂ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಇದೇ ವೇಳೆ ಅಭ್ಯರ್ಥಿಯೋರ್ವರು ಪರದಾಡಿದ ಪ್ರಸಂಗ ಬೆಳಕಿಗೆ ಬಂದಿದೆ.

ತುಮಕೂರು (ನ.11):  ಶಿರಾ ಉಪಚುನಾವಣೆ ಮತ ಎಣಿಕೆ ವೇಳೆ ಮತ ಎಣಿಕೆ ಕೇಂದ್ರಕ್ಕೆ ತಮ್ಮನ್ನು ಬಿಡಲಿಲ್ಲ ಎಂದು ಪಕ್ಷೇತರ ಅಭ್ಯರ್ಥಿ ಆ್ಯಂಬ್ರೂಸ್‌ ಆಕ್ರೋಶ ವ್ಯಕ್ತಪಡಿಸಿದರು.

ನೀರಿನ ಖಾಸಗೀಕರಣ ವಿರೋಧಿಸಿ ಮಾತು ಆಡುವುದನ್ನೇ ನಿಲ್ಲಿಸಿ ಮೌನ ಹೋರಾಟ ಮಾಡುತ್ತಿರುವ ಆ್ಯಂಬ್ರೂಸ್‌ ಅವರು ತಮ್ಮನ್ನು ಮತಎಣಿಕೆ ಕೇಂದ್ರಕ್ಕೆ ಬಿಡುವಂತೆ ಪಟ್ಟು ಹಿಡಿದರು. ಬಳಿಕ ಚುನಾವಣಾ ಸಿಬ್ಬಂದಿ ಅವರಿಗೆ ಹೋಗಲು ಅನುವು ಮಾಡಿಕೊಟ್ಟರು.

ಡಿ.ಕೆ.ಸುರೇಶ್ ಜೊತೆ ಹೊಂದಾಣಿಕೆ : ಗೆದ್ದ ಮುನಿರತ್ನ ...

ಶಿರಾದಲ್ಲಿ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಡಾ. ರಾಜೇಶ್ ಗೌಡ ವಿಜಯ ಸಾಧಿಸಿದರು. ಜೆಡಿಎಸ್‌ನಿಂದ ಅಮ್ಮಾಜಮ್ಮ ಸ್ಪರ್ಧಿಸಿದ್ದರೆ ಕಾಂಗ್ರೆಸ್‌ನಿಂದ ಟಿಬಿ ಜಯಚಂದ್ರ ಸ್ಪರ್ಧೆ ಮಾಡಿದ್ದರು.

PREV
click me!

Recommended Stories

LPG Gas Crisis: ರಾಜ್ಯದಲ್ಲಿ ಮತ್ತೆ ಗ್ಯಾಸ್ ಟ್ರಬಲ್: ಏಜೆನ್ಸಿಗಳಿಂದಲೇ ಕಾಳಸಂತೇಲಿ ಮಾರಾಟ, ರಾಯಚೂರು, ಯಾದಗಿರಿ, ಹಾಸನ ಜನರು ಹೈರಾಣು
Anjanadri Temple: ತಾಪಮಾನ ಏರಿದರೂ ಭಕ್ತಿ ಕಡಿಮೆ ಆಗಲಿಲ್ಲ; ಒಂದೇ ದಿನ ಅಂಜನಾದ್ರಿಗೆ 25 ಸಾವಿರ ಭಕ್ತರ ಭೇಟಿ!