'ಶೀಘ್ರ​ದಲ್ಲೇ ರೈತರ ಸಾಲ ಮರುಪಾವತಿ'

Published : Oct 02, 2019, 03:19 PM IST
'ಶೀಘ್ರ​ದಲ್ಲೇ ರೈತರ ಸಾಲ ಮರುಪಾವತಿ'

ಸಾರಾಂಶ

ಇಂಡಿಯನ್‌ ಶುಗರ್ಸ್ ಸಕ್ಕರೆ ಕಾರ್ಖಾನೆಯವರು ರೈತರ ಹೆಸರಿನ ಮೇಲೆ ಪಡೆದ ಸಾಲವನ್ನು 45 ದಿನಗಳ ಒಳಗಾಗಿ ಮರುಪಾವತಿಸಲಾಗುವುದು ಎಂದ ಕಾರ್ಖಾನೆ ನಿರ್ದೇಶಕ ಸಂದೀಪ ಪಾಟೀಲ| ರೈತರಿಗೆ ನಿರಾಕ್ಷೇಪಣಾ ಪ್ರಮಾಣ ಪತ್ರ ನೀಡಲಾಗುವುದು| ಮಹಾರಾಷ್ಟ್ರದ ನಿಂಬರಗಿ ಗ್ರಾಮದ ಬ್ಯಾಂಕ್‌ ಆಫ್‌ ಇಂಡಿಯಾ ಶಾಖೆಯಲ್ಲಿ ರೈತರ ಹೆಸರಿನ ಮೇಲೆ ಕಾರ್ಖಾನೆಯವರು ಸಾಲ ಪಡೆದಿದ್ದಾರೆ| ನ.15ರೊಳಗಾಗಿ ರೈತರ ಮನೆ ಬಾಗಿಲಿಗೆ ನಿರಾಕ್ಷೇಪಣಾ ಪ್ರಮಾಣ ಪತ್ರ ತಲುಪಿಸುವುದಾಗಿ ಭರ​ವಸೆ ನೀಡಿದ ಕಾರ್ಖಾನೆ ನಿರ್ದೇಶಕ| 

ಚಡಚಣ(ಅ.2): ಸಮೀಪದ ಹಾವಿನಾಳ ಗ್ರಾಮದ ಇಂಡಿಯನ್‌ ಶುಗರ್ಸ್ ಸಕ್ಕರೆ ಕಾರ್ಖಾನೆಯವರು ರೈತರ ಹೆಸರಿನ ಮೇಲೆ ಪಡೆದ ಸಾಲವನ್ನು 45 ದಿನಗಳ ಒಳಗಾಗಿ ಮರುಪಾವತಿಸಿ, ನಿರಾಕ್ಷೇಪಣಾ ಪ್ರಮಾಣ ಪತ್ರ ನೀಡುವುದಾಗಿ ಕಾರ್ಖಾನೆ ನಿರ್ದೇಶಕ ಸಂದೀಪ ಪಾಟೀಲ ತಿಳಿಸಿದ್ದಾರೆ.

ಕಾರ್ಖಾನೆಯಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನೆರೆಯ ಮಹಾರಾಷ್ಟ್ರ ರಾಜ್ಯದ ನಿಂಬರಗಿ ಗ್ರಾಮದ ಬ್ಯಾಂಕ್‌ ಆಫ್‌ ಇಂಡಿಯಾ ಶಾಖೆಯಲ್ಲಿ ರೈತರ ಹೆಸರಿನ ಮೇಲೆ ಕಾರ್ಖಾನೆಯವರು ಪಡೆದ ಸಾಲವನ್ನು ಮರುಪಾವತಿಸಿ, ಕಾರ್ಖಾನೆ ಚಿಟಬಾಯಿ (ಸ್ವೀಪ್‌ ಬಾಯ್‌)ಗಳ ಮುಖಾಂತರ ನ.15ರೊಳಗಾಗಿ ರೈತರ ಮನೆ ಬಾಗಿಲಿಗೆ ನಿರಾಕ್ಷೇಪಣಾ ಪ್ರಮಾಣ ಪತ್ರ ತಲುಪಿಸುವುದಾಗಿ ಭರ​ವಸೆ ನೀಡಿದ್ದಾರೆ.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ  

ಕಾರ್ಖಾನೆ ಆರ್ಥಿಕವಾಗಿ ಸದೃಢವಾಗಿದ್ದು, ಕಾರಣಾಂತರಗಳಿಂದ ಕಾರ್ಖಾನೆ ಅಭಿವೃದ್ಧಿಗೋಸ್ಕರ ಸಾಲವನ್ನು ಮರುಪಾವತಿಸಲಾಗಿರಲಿಲ್ಲ. ಕಾರ್ಖಾನೆಯವರು ಪಡೆದ ಸಾಲಕ್ಕೆ ರೈತರು ಯಾವುದೇ ರೀತಿಯಲ್ಲಿ ಭಯಪಡುವ ಅವಶ್ಯಕತೆಯಿಲ್ಲ. ರೈತರು ಎಂದಿನಂತೆ ಕಾರ್ಖಾನೆಯೊಂದಿಗೆ ಸಹಕರಿಸಬೇಕು ಎಂದು ವಿನಂತಿಸಿದರು.
 

PREV
click me!

Recommended Stories

88 ಪ್ರಕರಣಗಳಲ್ಲಿ ಪೊಲೀಸರೇ ಶಾಮೀಲು ಬೇಲಿಯೇ ಹೊಲ ಮೇಯ್ದರೆ? ಪೊಲೀಸರಿಗೆ ಸಿಎಂ ಖಡಕ್ ಸಂದೇಶ
ಬಳ್ಳಾರಿ ಲೂಟಿ, 'ಡ್ಯಾಡಿ' ರಾಜಕೀಯ: ಎದುರಾಳಿಗಳ ವಿರುದ್ಧ ಡೈಲಾಗ್ ಹೊಡೆದು ಶಾಸಕ ಪ್ರದೀಪ್ ಈಶ್ವರ್ ವಾಗ್ದಾಳಿ!