ಇಂದಿರಾ ಕ್ಯಾಂಟೀನ್‌ ಮುಚ್ಚಲ್ಲ : ಸರ್ಕಾರ ಸ್ಪಷ್ಟನೆ

Published : Aug 29, 2019, 09:15 AM IST
ಇಂದಿರಾ ಕ್ಯಾಂಟೀನ್‌ ಮುಚ್ಚಲ್ಲ : ಸರ್ಕಾರ ಸ್ಪಷ್ಟನೆ

ಸಾರಾಂಶ

ಇಂದಿರಾ ಕ್ಯಾಂಟೀನ್ ಮುಚ್ಚುವ ಯಾವುದೇ ಪ್ರಸ್ತಾಪ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. 

ಬೆಂಗಳೂರು [ಆ.29]: ಇಂದಿರಾ ಕ್ಯಾಂಟೀನ್‌ ಮುಚ್ಚುವ ಪ್ರಸ್ತಾಪ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹಾಗೂ ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಸ್ಪಷ್ಟಪಡಿಸಿದ್ದಾರೆ.

ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಪ್ರತ್ಯೇಕವಾಗಿ ಮಾತನಾಡಿದ ಅವರು, ಇಂದಿರಾ ಕ್ಯಾಂಟೀನ್‌ಗಳನ್ನು ಮುಚ್ಚುತ್ತಿಲ್ಲ, ಅಲ್ಲದೆ, ಇಂದಿರಾ ಕ್ಯಾಂಟೀನ್‌ ಹೆಸರು ಬದಲಾವಣೆ ಮಾಡುವುದಿಲ್ಲ ಎಂದು ಹೇಳಿದರು.

ಇಂದಿರಾ ಕ್ಯಾಂಟೀನ್‌ಗಳಲ್ಲಿ ಅಕ್ರಮ ನಡೆದಿರುವ ಆರೋಪಗಳಿದ್ದು, ತನಿಖೆಗೆ ಸೂಚಿಸಲಾಗಿದೆ. ಕ್ಯಾಂಟೀನ್‌ಗಳನ್ನು ಮುಚ್ಚುವ ಯೋಚನೆ ಇಲ್ಲ. ಇಂದಿರಾ ಕ್ಯಾಂಟೀನ್‌ಗಳಿಗೆ ಅನುದಾನ ತಡೆ ಹಿಡಿದಿಲ್ಲ. ಇಂದಿರಾ ಕ್ಯಾಂಟೀನ್‌ಗಳ ಹೆಸರು ಬದಲಾವಣೆ ಮಾಡುವುದಿಲ್ಲ ಎಂದು ತಿಳಿಸಿದರು.

PREV
click me!

Recommended Stories

ಬೆಂಗಳೂರು: ಏಷ್ಯಾನೆಟ್ ಸುವರ್ಣ ನ್ಯೂಸ್ ಬಿಗ್ ಇಂಪ್ಯಾಕ್ಟ್; ಪಠ್ಯಪುಸ್ತಕ ದರ ಏರಿಕೆ ಪ್ರಸ್ತಾವನೆ ವಾಪಸ್
ರೀಲ್ಸ್ ಹುಚ್ಚಿಗೆ ಬಿಜೆಪಿ ಮುಖಂಡನ ಪುತ್ರ ಸಾವು ಕೇಸ್, ಅಪ್ರಾಪ್ತ ಮಗನಿಗೆ ಕಾರು ಕೊಟ್ಟು ಜೈಲು ಸೇರಿದ ಅಪ್ಪ