ದರ್ಶನ್ ಮನೆಗೆ ಹೋಗಿದ್ದೆವು ಎಂಬುದು ಸುಳ್ಳು: ರೇಣುಕಾಸ್ವಾಮಿ ತಂದೆ ಕಾಶಿನಾಥ ಶಿವನಗೌಡ್ರು

Published : Jan 17, 2025, 09:45 AM ISTUpdated : Jan 17, 2025, 10:08 AM IST
ದರ್ಶನ್ ಮನೆಗೆ ಹೋಗಿದ್ದೆವು ಎಂಬುದು ಸುಳ್ಳು: ರೇಣುಕಾಸ್ವಾಮಿ ತಂದೆ ಕಾಶಿನಾಥ ಶಿವನಗೌಡ್ರು

ಸಾರಾಂಶ

ಫೇಸ್‌ಬುಕ್‌ನಲ್ಲಿ ಕೆಲವು ವಿಚಾರಗಳು ಹರಡುತ್ತಿರುವುದು ನಮ್ಮ ಮನಸ್ಸಿಗೆ ನೋವುಂಟಾಗಿದೆ. ನಾವು ನಟ ದರ್ಶನ್ ಮನೆಗೆ ಹೋಗಿದ್ದೆವು. ದರ್ಶನ್ ನಮ್ಮ ಮನೆಗೆ ಬಂದಿದ್ದ ಎಂಬ ಸುದ್ದಿಗಳ ಕೆಲವರು ಫೇಸ್‌ಬುಕ್‌ನಲ್ಲಿ ಹರಡುತ್ತ ನಮ್ಮ ಕುಟುಂಬವನ್ನು ಕೆದಕಿ ನೋವುಂಟು ಮಾಡುತ್ತಿದ್ದಾರೆ. ನಾವು ಯಾರನ್ನು ಭೇಟಿಯಾಗಿಲ್ಲ ಎಂದ ರೇಣುಕಾಸ್ವಾಮಿ ತಂದೆ ಕಾಶಿನಾಥ ಶಿವನಗೌಡ್ರು

ಚಿತ್ರದುರ್ಗ(ಜ.17):  ನಾವು ದರ್ಶನ್ ಮನೆಗೆ ಹೋಗಿ ಮಾತುಕತೆ ನಡೆಸಿದ್ದೇವೆ, ಹೊಸ ಕಾರು ಬುಕ್ ಮಾಡಿದ್ದೇವೆ ಎಂಬಿತ್ಯಾದಿ ಸುದ್ದಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತಿದ್ದು ಇದರಲ್ಲಿ ಯಾವುದೇ ಹುರುಳಿಲ್ಲ. ಇವೆಲ್ಲ ಸುಳ್ಳು ಸಂಗತಿಗಳಾಗಿವೆ ಎಂದು ದರ್ಶನ್‌ ಗ್ಯಾಂಗ್‌ನಿಂದ ಹತ್ಯೆಗೊಳಗಾದ ರೇಣುಕಾಸ್ವಾಮಿ ತಂದೆ ಕಾಶಿನಾಥ ಶಿವನಗೌಡ್ರು ಹೇಳಿದರು. 

ಗುರುವಾರ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಫೇಸ್‌ಬುಕ್‌ನಲ್ಲಿ ಕೆಲವು ವಿಚಾರಗಳು ಹರಡುತ್ತಿರುವುದು ನಮ್ಮ ಮನಸ್ಸಿಗೆ ನೋವುಂಟಾಗಿದೆ. ನಾವು ನಟ ದರ್ಶನ್ ಮನೆಗೆ ಹೋಗಿದ್ದೆವು. ದರ್ಶನ್ ನಮ್ಮ ಮನೆಗೆ ಬಂದಿದ್ದ ಎಂಬ ಸುದ್ದಿಗಳ ಕೆಲವರು ಫೇಸ್‌ಬುಕ್‌ನಲ್ಲಿ ಹರಡುತ್ತ ನಮ್ಮ ಕುಟುಂಬವನ್ನು ಕೆದಕಿ ನೋವುಂಟು ಮಾಡುತ್ತಿದ್ದಾರೆ. ನಾವು ಯಾರನ್ನು ಭೇಟಿಯಾಗಿಲ್ಲ ಎಂದರು. 

ಪತ್ನಿ, ಪುತ್ರನ ಜೊತೆ ದರ್ಶನ್ ಜಾಲಿ, ಒಂದಾದ D ಫ್ಯಾಮಿಲಿ! ಬೆನ್ನುನೋವಿನಲ್ಲಿ ಚೇತರಿಕೆ, ಬೇಕಿಲ್ವಾ ಸರ್ಜರಿ?

ಹೊಸ ಕಾರ್‌ ಬುಕ್ ಮಾಡಿದ್ದೇವೆಂಬ ವಿಚಾರಗಳು ಸುಳಿದಾಡುತ್ತಿವೆ. ಮಗನನ್ನು ಕಳೆದುಕೊಂಡಿರುವ ನಾವು ಕಾರ್ ತೆಗೆದುಕೊಂಡು ಏನು ಮಾಡುವುದು. ನಮ್ಮ ಸೊಸೆಗೆ ನೌಕರಿ ನೀಡಿ ಎಂದು ಸರ್ಕಾರವನ್ನು ಕೇಳಿದ್ದೇವೆ. ನೌಕರಿ ಕೊಡಲು ಬರುವುದಿಲ್ಲವೆಂದು ಸರ್ಕಾರದ ಕಡೆಯಿಂದ ನಮಗೆ ಉತ್ತರ ಬಂದಿದೆ. ಒಂದು ವೇಳೆ ಸರ್ಕಾರ ನೌಕರಿ ಕೊಡದಿದ್ದರೆ ರೇಣುಕಾಸ್ವಾಮಿ ಪತ್ನಿ ಹಾಗೂ ಮಗು ಬೀದಿ ಪಾಲಾಗುತ್ತಾರೆ. ನಮ್ಮ ಮನವಿ ಯನ್ನು ಸರ್ಕಾರ ಪುನರ್‌ ಪರಿಶೀಲಿಸಿ ಸರ್ಕಾರಿ ನೌಕರಿ ಕೊಡುವಂತೆ ಕಾಶಿನಾಥ ಶಿವನಗೌಡ್ರು ಮನವಿ ಮಾಡಿದರು. 

ರೇಣುಕಾಸ್ವಾಮಿ ಚಿಕ್ಕಪ್ಪ ಎಸ್. ಷಡಕ್ಷರಯ್ಯ ಮಾತನಾಡಿ, ಫೇಸ್ ಬುಕ್‌ನಲ್ಲಿ ಎಲ್ಲೆಡೆ ಹರಡುತ್ತಿರುವ ಫೇಕ್ ಸುದ್ದಿಯಿಂದ ನಮ್ಮ ಮನಸ್ಸಿಗೆ ನೋವಾಗುತ್ತಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸಾಕಷ್ಟು ಒಳ್ಳೆ ಕೆಲಸ ಮಾಡಿರುವುದು ಸಮಾಧಾನ ತಂದಿದೆ. ಟ್ರಯಲ್ ಕೋರ್ಟ್‌ನಿಂದ ಫಾಸ್ಟ್ ಟ್ರಾಕ್‌ಗೆ ವರ್ಗಾಯಿಸಿ ಕೊಲೆ ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಬೇಕು. ರೇಣುಕಾಸ್ವಾಮಿ ಪತ್ನಿಗೆ ಸರ್ಕಾರಿ ನೌಕರಿ ಕೊಡಬೇಕೆಂದು ಕೇಳಿದ್ದೇವೆ. ಅವಕಾಶವಿಲ್ಲವೆಂದು ಸರ್ಕಾರ ಹೇಳಿದೆ. ನಮ್ಮ ಮನವಿಯನ್ನು ಪುನರ್‌ ಪರಿಶೀಲಿಸಿ ನೌಕರಿ ಕೊಡುವಂತೆ ವಿನಂತಿಸಿದರು.

PREV
Read more Articles on
click me!

Recommended Stories

ನಾದಬ್ರಹ್ಮ ಇಡ್ಲಿ ಸೆಂಟರ್‌ ಮಾಲೀಕ, 28 ವರ್ಷದ ಸಂದೇಶ್‌ ಹೃದಯಾಘಾತದಿಂದ ಸಾವು
ಆನೆ ಕಾರಿಡಾರ್ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ